ಬ್ರೇಕಿಂಗ್ ನ್ಯೂಸ್
28-09-24 02:51 pm Mangalore Correspondent ಕರಾವಳಿ
ಮಂಗಳೂರು, ಸೆ.28: ದೆಹಲಿ ನೋಂದಣಿಯ ಹಳೆಯ ಬಿಎಂಡಬ್ಲ್ಯು ಕಾರನ್ನು ಸರ್ವಿಸಿಗೆ ಒಯ್ಯುತ್ತಿದ್ದಾಗಲೇ ಹೆದ್ದಾರಿ ಮಧ್ಯದಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಬೂದಿಯಾದ ಘಟನೆ ಮಂಗಳೂರು ನಗರದ ಅಡ್ಯಾರ್ ನಲ್ಲಿ ನಡೆದಿದೆ.
ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದೆ. ಬಿಸಿ ರೋಡ್ ಕಡೆಯಿಂದ ಚಾಲಕ ಗುರುದೀಪ್ ಎಂಬವರು ಕಾರನ್ನು ಚಲಾಯಿಸಿಕೊಂಡು ಬಂದಿದ್ದು ಸಹ್ಯಾದ್ರಿ ಕಾಲೇಜು ಮುಂಭಾಗಕ್ಕೆ ತಲುಪುತ್ತಿದ್ದಂತೆ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು ಕೂಡಲೇ ಕಾರಿನಿಂದ ಹೊರಕ್ಕೆ ಇಳಿದಿದ್ದಾನೆ. ಅನಂತರ, ಎಲ್ಲರೂ ನೋಡುತ್ತಿರುವಾಗಲೇ ನಡುರಸ್ತೆಯಲ್ಲೇ ಧಗ ಧಗನೆ ಕಾರು ಹೊತ್ತಿ ಉರಿದಿದೆ.
ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರಿಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಕಾರಿನಲ್ಲಿ ಏನೋ ಸಮಸ್ಯೆ ಇದೆಯೆಂದು ಅಡ್ಯಾರಿನ ಬಿಎಂಡಬ್ಲ್ಯು ಗ್ಯಾರೇಜ್ ಗೆ ತರುತ್ತಿದ್ದರು. ಅಷ್ಟರಲ್ಲೇ ಬೆಂಕಿ ಹತ್ತಿಕೊಂಡಿದ್ದು ಸುಟ್ಟು ಭಸ್ಮವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಕೆಲಹೊತ್ತು ವಾಹನಗಳ ಸಂಚಾರವನ್ನು ತಡೆಹಿಡಿಯಲಾಗಿತ್ತು. ದೆಹಲಿ ನೋಂದಣಿಯ ಬಿಎಂಡಬ್ಲ್ಯು ಕಾರು ಇದಾಗಿದ್ದು 2011ರ ಮಾಡೆಲ್ ಹೊಂದಿದೆ ಎನ್ನಲಾಗುತ್ತಿದೆ.
ಕೆಲವು ದಿನಗಳ ಹಿಂದೆಯಷ್ಟೇ ಸುರತ್ಕಲ್ NITK ಇಂಜಿನಿಯರಿಂಗ್ ಕಾಲೇಜು ಸಮೀಪದಲ್ಲಿ ಉಡುಪಿ ಕಡೆಯಿಂದ ಬರುತ್ತಿದ್ದ ಬಿಎಂಡಬ್ಲ್ಯು ಕಾರು ಇದೇ ರೀತಿ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿತ್ತು.
Bmw car cathes fire near Adyar sahyadri college in Mangalore, video goes viral. Gurudeep who was taking the car to BMW service centre near Adyar suddenly saw the fire coming out of the engine. No casualties have been reported
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
19-09-25 05:45 pm
HK News Desk
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm