ಬ್ರೇಕಿಂಗ್ ನ್ಯೂಸ್
28-09-24 02:51 pm Mangalore Correspondent ಕರಾವಳಿ
ಮಂಗಳೂರು, ಸೆ.28: ದೆಹಲಿ ನೋಂದಣಿಯ ಹಳೆಯ ಬಿಎಂಡಬ್ಲ್ಯು ಕಾರನ್ನು ಸರ್ವಿಸಿಗೆ ಒಯ್ಯುತ್ತಿದ್ದಾಗಲೇ ಹೆದ್ದಾರಿ ಮಧ್ಯದಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಬೂದಿಯಾದ ಘಟನೆ ಮಂಗಳೂರು ನಗರದ ಅಡ್ಯಾರ್ ನಲ್ಲಿ ನಡೆದಿದೆ.
ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದೆ. ಬಿಸಿ ರೋಡ್ ಕಡೆಯಿಂದ ಚಾಲಕ ಗುರುದೀಪ್ ಎಂಬವರು ಕಾರನ್ನು ಚಲಾಯಿಸಿಕೊಂಡು ಬಂದಿದ್ದು ಸಹ್ಯಾದ್ರಿ ಕಾಲೇಜು ಮುಂಭಾಗಕ್ಕೆ ತಲುಪುತ್ತಿದ್ದಂತೆ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು ಕೂಡಲೇ ಕಾರಿನಿಂದ ಹೊರಕ್ಕೆ ಇಳಿದಿದ್ದಾನೆ. ಅನಂತರ, ಎಲ್ಲರೂ ನೋಡುತ್ತಿರುವಾಗಲೇ ನಡುರಸ್ತೆಯಲ್ಲೇ ಧಗ ಧಗನೆ ಕಾರು ಹೊತ್ತಿ ಉರಿದಿದೆ.









ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರಿಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಕಾರಿನಲ್ಲಿ ಏನೋ ಸಮಸ್ಯೆ ಇದೆಯೆಂದು ಅಡ್ಯಾರಿನ ಬಿಎಂಡಬ್ಲ್ಯು ಗ್ಯಾರೇಜ್ ಗೆ ತರುತ್ತಿದ್ದರು. ಅಷ್ಟರಲ್ಲೇ ಬೆಂಕಿ ಹತ್ತಿಕೊಂಡಿದ್ದು ಸುಟ್ಟು ಭಸ್ಮವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಕೆಲಹೊತ್ತು ವಾಹನಗಳ ಸಂಚಾರವನ್ನು ತಡೆಹಿಡಿಯಲಾಗಿತ್ತು. ದೆಹಲಿ ನೋಂದಣಿಯ ಬಿಎಂಡಬ್ಲ್ಯು ಕಾರು ಇದಾಗಿದ್ದು 2011ರ ಮಾಡೆಲ್ ಹೊಂದಿದೆ ಎನ್ನಲಾಗುತ್ತಿದೆ.
ಕೆಲವು ದಿನಗಳ ಹಿಂದೆಯಷ್ಟೇ ಸುರತ್ಕಲ್ NITK ಇಂಜಿನಿಯರಿಂಗ್ ಕಾಲೇಜು ಸಮೀಪದಲ್ಲಿ ಉಡುಪಿ ಕಡೆಯಿಂದ ಬರುತ್ತಿದ್ದ ಬಿಎಂಡಬ್ಲ್ಯು ಕಾರು ಇದೇ ರೀತಿ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿತ್ತು.
Bmw car cathes fire near Adyar sahyadri college in Mangalore, video goes viral. Gurudeep who was taking the car to BMW service centre near Adyar suddenly saw the fire coming out of the engine. No casualties have been reported
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm