ಬ್ರೇಕಿಂಗ್ ನ್ಯೂಸ್
28-09-24 02:51 pm Mangalore Correspondent ಕರಾವಳಿ
ಮಂಗಳೂರು, ಸೆ.28: ದೆಹಲಿ ನೋಂದಣಿಯ ಹಳೆಯ ಬಿಎಂಡಬ್ಲ್ಯು ಕಾರನ್ನು ಸರ್ವಿಸಿಗೆ ಒಯ್ಯುತ್ತಿದ್ದಾಗಲೇ ಹೆದ್ದಾರಿ ಮಧ್ಯದಲ್ಲಿ ಬೆಂಕಿ ಹೊತ್ತಿಕೊಂಡು ಸುಟ್ಟು ಬೂದಿಯಾದ ಘಟನೆ ಮಂಗಳೂರು ನಗರದ ಅಡ್ಯಾರ್ ನಲ್ಲಿ ನಡೆದಿದೆ.
ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಮುಂಭಾಗದಲ್ಲಿ ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದೆ. ಬಿಸಿ ರೋಡ್ ಕಡೆಯಿಂದ ಚಾಲಕ ಗುರುದೀಪ್ ಎಂಬವರು ಕಾರನ್ನು ಚಲಾಯಿಸಿಕೊಂಡು ಬಂದಿದ್ದು ಸಹ್ಯಾದ್ರಿ ಕಾಲೇಜು ಮುಂಭಾಗಕ್ಕೆ ತಲುಪುತ್ತಿದ್ದಂತೆ ಮುಂಭಾಗದಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಲ್ಲಿ ಚಾಲಕ ಒಬ್ಬನೇ ಇದ್ದು ಕೂಡಲೇ ಕಾರಿನಿಂದ ಹೊರಕ್ಕೆ ಇಳಿದಿದ್ದಾನೆ. ಅನಂತರ, ಎಲ್ಲರೂ ನೋಡುತ್ತಿರುವಾಗಲೇ ನಡುರಸ್ತೆಯಲ್ಲೇ ಧಗ ಧಗನೆ ಕಾರು ಹೊತ್ತಿ ಉರಿದಿದೆ.









ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರಿಗೆ ಬೆಂಕಿ ತಗುಲಿರುವ ಶಂಕೆ ವ್ಯಕ್ತವಾಗಿದೆ. ಕಾರಿನಲ್ಲಿ ಏನೋ ಸಮಸ್ಯೆ ಇದೆಯೆಂದು ಅಡ್ಯಾರಿನ ಬಿಎಂಡಬ್ಲ್ಯು ಗ್ಯಾರೇಜ್ ಗೆ ತರುತ್ತಿದ್ದರು. ಅಷ್ಟರಲ್ಲೇ ಬೆಂಕಿ ಹತ್ತಿಕೊಂಡಿದ್ದು ಸುಟ್ಟು ಭಸ್ಮವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆದ್ದಾರಿಯಲ್ಲಿ ಕೆಲಹೊತ್ತು ವಾಹನಗಳ ಸಂಚಾರವನ್ನು ತಡೆಹಿಡಿಯಲಾಗಿತ್ತು. ದೆಹಲಿ ನೋಂದಣಿಯ ಬಿಎಂಡಬ್ಲ್ಯು ಕಾರು ಇದಾಗಿದ್ದು 2011ರ ಮಾಡೆಲ್ ಹೊಂದಿದೆ ಎನ್ನಲಾಗುತ್ತಿದೆ.
ಕೆಲವು ದಿನಗಳ ಹಿಂದೆಯಷ್ಟೇ ಸುರತ್ಕಲ್ NITK ಇಂಜಿನಿಯರಿಂಗ್ ಕಾಲೇಜು ಸಮೀಪದಲ್ಲಿ ಉಡುಪಿ ಕಡೆಯಿಂದ ಬರುತ್ತಿದ್ದ ಬಿಎಂಡಬ್ಲ್ಯು ಕಾರು ಇದೇ ರೀತಿ ಬೆಂಕಿ ಹೊತ್ತಿಕೊಂಡು ಸುಟ್ಟು ಭಸ್ಮವಾಗಿತ್ತು.
Bmw car cathes fire near Adyar sahyadri college in Mangalore, video goes viral. Gurudeep who was taking the car to BMW service centre near Adyar suddenly saw the fire coming out of the engine. No casualties have been reported
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 04:38 pm
Bangalore Correspondent
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm