ಬ್ರೇಕಿಂಗ್ ನ್ಯೂಸ್
29-09-24 05:33 pm Mangalore Correspondent ಕರಾವಳಿ
ಮಂಗಳೂರು, ಸೆ.29: ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ದ್ವೀಪದ ಜಮೀನಿನ ವಾಸ್ತವ ವಿಸ್ತೀರ್ಣ ಅರಿಯಲು ಅಧಿಕೃತ ಸರ್ವೆ ನಡೆಸಲು ಸ್ಪೀಕರ್ ಯು.ಟಿ.ಖಾದರ್ ದ.ಕ. ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ Satellite images ಅನ್ನು Google Engine Portal ಮೂಲಕ ತೆಗೆಯಬೇಕು ಮತ್ತು ಅಧಿಕೃತ ಸರ್ವೆಯರ್ ಮೂಲಕ ಸರ್ವೆ ನಡೆಸಬೇಕು. ಕಂದಾಯ ಇಲಾಖೆಯ ಅಧಿಕೃತ ದಾಖಲೆ ಪ್ರಕಾರ ಈ ಹಿಂದೆ ದ್ವೀಪದ ಮೂಲ ವಿಸ್ತೀರ್ಣ ಎಷ್ಟಿತ್ತು ಮತ್ತು ಈಗ ಎಷ್ಟಿದೆ? ವಿಸ್ತೀರ್ಣದಲ್ಲಿ ಕೊರತೆ ಕಂಡು ಬಂದಿದ್ದರೆ ಅದಕ್ಕೆ ಕಾರಣ ಏನು? ಎಂಬುದರ ಬಗ್ಗೆ ಸರ್ವೆ ನಡೆಸಿ ವರದಿ ನೀಡುವಂತೆ ಖಾದರ್ ನಿರ್ದೇಶನ ನೀಡಿದ್ದಾರೆ.
ಈಗಾಗಲೇ ಈ ಭಾಗದ ಜನರು ಅಕ್ರಮ ಮರಳುಗಾರಿಕೆಯ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಅದರಂತೆ ಅಕ್ರಮ ಮರಳುಗಾರಿಕೆ ತಡೆಯಲು ಸಂಬಂಧಪಟ್ಟ ಇಲಾಖೆಗೆ ಸೂಚನೆ ನೀಡಿದ್ದೇನೆ. ಅಧಿಕೃತ ಸರ್ವೆ ನಡೆಸಿದ ಬಳಿಕ ವಾಸ್ತವ ತಿಳಿಯಲಿದೆ. ಮರಳುಗಾರಿಕೆಯಿಂದ ದ್ವೀಪದ ವಿಸ್ತೀರ್ಣದಲ್ಲಿ ಕಡಿಮೆ ಕಂಡುಬಂದಿದ್ದರೆ ಅಕ್ರಮ ಮರಳುಗಾರಿಕೆ ನಡೆಸುವವರ ವಿರುದ್ಧ ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ. ದ್ವೀಪದ ಮೂಲ ಸ್ವರೂಪಕ್ಕೆ ಯಾವುದೇ ಧಕ್ಕೆಯಾಗದಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ವಹಿಸಲು ತಿಳಿಸಲಾಗಿದೆ ಎಂದು ಯು.ಟಿ.ಖಾದರ್ ತಿಳಿಸಿದ್ದಾರೆ.
ಸ್ಪೀಕರ್ ನಿರ್ದೇಶನದ ಮೇರೆಗೆ ಈಗಾಗಲೇ ಜಿಲ್ಲಾಧಿಕಾರಿ ಅವರು ಮಂಗಳೂರು ಉಪವಿಭಾಗದ ಸಹಾಯಕ ಆಯುಕ್ತರು, ಮಂಗಳೂರು ನಗರ ದಕ್ಷಿಣ ಉಪ ವಿಭಾಗದ ಪೊಲೀಸ್ ಉಪಾಯುಕ್ತರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಹಿತ 6 ಮಂದಿಯ ತನಿಖಾ ಸಮಿತಿಯನ್ನು ರಚಿಸಿದ್ದಾರೆ.
Mangalore Speaker Khader orders survey of Pavoor uliya Island, Action against illegal miniers. Meanwhile, Deputy Commissioner M.P. Mullai Muhilan in his September 17 order directed officials of the revenue, police, and mines and geology department to initiate strict action, including seizing of boats and vehicles, if they were found to be engaged in illegal sand extraction in the CRZ area of the Netravathi.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm