ಬ್ರೇಕಿಂಗ್ ನ್ಯೂಸ್
01-10-24 03:26 pm Mangalore Correspondent ಕರಾವಳಿ
ಮಂಗಳೂರು, ಅ.1: ಹಿರಿಯ ನಾಗರಿಕರ ದಿನಾಚರಣೆಯ ದಿನದಂದೇ ನಿವೃತ್ತ ಸರಕಾರಿ ನೌಕರರನ್ನು ಪ್ರತಿಭಟನೆಗೆ ಇಳಿಸುವುದು ಸರಿಯಲ್ಲ. ನಾವೇನೂ ಸಾಲ ಕೇಳ್ತಾ ಇಲ್ಲ. ಸುದೀರ್ಘ ವರ್ಷ ಸರಕಾರಿ ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಬೇಕು. ಇನ್ನಾದರೂ ಹಿರಿಯರಾದ ನಮ್ಮನ್ನು ಬೀದಿಗೆ ಇಳಿಯುವಂತೆ ಮಾಡಬೇಡಿ ಎನ್ನುವುದು ನಮ್ಮ ಕಳಕಳಿ ಎಂದು ನಿವೃತ್ತ ಸರಕಾರಿ ನೌಕರರ ವೇದಿಕೆಯ ಜಿಲ್ಲಾ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಹೇಳಿದ್ದಾರೆ.
ಮಂಗಳವಾರ ಮಂಗಳೂರಿನ ಮಿನಿ ವಿಧಾನಸೌಧ ಕಚೇರಿ ಮುಂಭಾಗದಲ್ಲಿ ವೇದಿಕೆಯ ವತಿಯಿಂದ ಏರ್ಪಡಿಸಲಾದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. 2022ರ ಜುಲೈ1ರಿಂದ 2024ರ ಜುಲೈ1ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಡಿ.ಸಿ.ಆರ್.ಜಿ, ಕಮ್ಯುಟೇಶನ್, ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಏಳನೇ ವೇತನ ಆಯೋಗದ ಲೆಕ್ಕಚಾರದಲ್ಲಿ ನೀಡಬೇಕು ಹಾಗೂ ಈ ಬಗ್ಗೆ ಪರಿಷ್ಕೃತ ಆದೇಶ ನೀಡಬೇಕು ಎಂದು ಆಗ್ರಹಿಸಿ ನಿವೃತ್ತ ಸರಕಾರಿ ನೌಕರರು ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸಿದರು.
ರಾಜ್ಯವ್ಯಾಪಿ ಪ್ರತಿಭಟನೆ, ಸತ್ಯಾಗ್ರಹ
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ನಿವೃತ್ತ ಸರಕಾರಿ ನೌಕರರು ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಅ.2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಮುಂದೆ ಬೆಳಗಾವಿಯಿಂದ ಬೆಂಗಳೂರು ವಿಧಾನಸೌಧ ತನಕ ಪಾದಯಾತ್ರೆ ನಡೆಸುತ್ತೇವೆ. ಸರಕಾರ ಕ್ರಮ ಜರುಗಿಸದೇ ಹೋದಲ್ಲಿ ಕಾನೂನು ಕ್ರಮಕ್ಕೆ ಮುಂದಾಗುತ್ತೇವೆ ಎಂದು ಜಿಲ್ಲಾ ಸಂಚಾಲಕ ಸಿರಿಲ್ ರಾಬರ್ಟ್ ಡಿಸೋಜ ಹೇಳಿದ್ದಾರೆ.
ಕೋವಿಡ್ ಸಮಯದಲ್ಲಿ ತುರ್ತು ಸೇವೆಗಳನ್ನು ಮಾಡಿದವರು ಸರಕಾರಿ ನೌಕರರು. ಈಗಾಗಲೇ ನಮ್ಮ ಬೇಡಿಕೆಗಳ ಬಗ್ಗೆ ತಹಸೀಲ್ದಾರ್ ಮೂಲಕ ಆರ್ಥಿಕ ಇಲಾಖೆಯ ವರೆಗೂ ಗಮನ ಸೆಳೆದಿದ್ದೇವೆ. ಜಿಲ್ಲೆಯಲ್ಲಿ ಮಾತ್ರವಲ್ಲ ರಾಜ್ಯವ್ಯಾಪಿ ಇಂದು ನಿವೃತ್ತ ನೌಕರರು ಬೀದಿಗೆ ಇಳಿದು ಪ್ರತಿಭಟನೆ ನಡೆಸುವ ಸ್ಥಿತಿಯಾಗಿದೆ ಎಂದು ಸಿರಿಲ್ ರಾಬರ್ಟ್ ಡಿಸೋಜ ಹೇಳಿದರು.
ಜಿಲ್ಲಾ ಸಂಚಾಲಕ ಸ್ಟ್ಯಾನಿ ತಾವ್ರೋ ಮಾತನಾಡಿ, ನಿವೃತ್ತ ಸರಕಾರಿ ನೌಕರರು ಬೀದಿಗೆ ಇಳಿದು ಪ್ರತಿಭಟನೆ ನಡೆಸುವಂತಾಗಿದ್ದು ವಿಷಾದನೀಯ. ಸರಕಾರ ಇದನ್ನು ಗಂಭೀರ ಪರಿಗಣಿಸಿ ನ್ಯಾಯ ಕೊಡಬೇಕು ಎಂದರು.
ನಿವೃತ್ತ ಹಿರಿಯ ಸರಕಾರಿ ನೌಕರ ವಿಠಲ ಶೆಟ್ಟಿಗಾರ್ ಮಾತನಾಡಿ, ನಾನು ನಿವೃತ್ತನಾಗಿ ಬಹಳ ವರ್ಷ ಆಗಿದೆ. ಆದರೆ ನಿವೃತ್ತ ಸರಕಾರಿ ನೌಕರರಿಗೆ ಅನ್ಯಾಯವಾಗುತ್ತಿರುವುದನ್ನು ನೋಡಿ ಸುಮ್ಮನಿರಲು ಸಾಧ್ಯವಾಗದೇ ಪ್ರತಿಭಟನೆಗೆ ಬಂದಿದ್ದೇನೆ ಎಂದರು.
ಸಂಚಾಲಕಿ ಮಂಜುಳಾ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಪ್ರತಿಭಟನೆಯ ಬಳಿಕ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಹಿರಿಯ ಸರಕಾರಿ ನೌಕರರಾದ ವಿಜಯ ಪೈ, ಮೋಹನ ಬಂಗೇರ, ಎನ್. ಆನಂದ ನಾಯ್ಕ್, ಹೇಮನಾಥ, ಜೆರಾಲ್ಡ್, ಭಾರತಿ ಪಿ.ವಿ ಮೊದಲಾದವರು ಉಪಸ್ಥಿತರಿದ್ದರು.
Retired government employees protest in Mangalore, warning of hunger strike on Senior Citizens Day.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm