ಬ್ರೇಕಿಂಗ್ ನ್ಯೂಸ್
10-12-20 08:34 pm Mangaluru Correspondent ಕರಾವಳಿ
ಮಂಗಳೂರು, ಡಿ.10: ಲವ್ ಜಿಹಾದ್ ಪ್ರಕರಣದಲ್ಲಿ ಬಲಿಪಶು ಆಗಿರುವ ಸುಳ್ಯದ ಕಟ್ಟೆಕಾರಿನ ಯುವತಿ ಶಾಂತಿಜೂಬಿ ಯಾನೆ ಆಸಿಯಾ ಮತ್ತೆ ಬೀದಿಗೆ ಬಂದಿದ್ದಾರೆ. ಆಸಿಯಾ ಕುಟುಂಬಸ್ಥರು ಆಕೆಯನ್ನು ಮತ್ತೆ ತಮ್ಮ ಕುಟುಂಬಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಹೇಳಿದ್ದ ಭರವಸೆ ಹುಸಿಯಾಗಿದೆ. ಆಸಿಯಾ ತನ್ನ ಗಂಡನಿಗಾಗಿ ಮತ್ತೆ ಕಟ್ಟೆಕಾರ್ ಕುಟುಂಬದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾಳೆ.
ಈ ನಡುವೆ, ಆಸಿಯಾ ಪ್ರಕರಣದಲ್ಲಿ ನ್ಯಾಯ ಕೊಡಿಸಲು ಮುಂದಾಗಿರುವ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ವಿದೇಶದಿಂದ ಬೆದರಿಕೆ ಕರೆಗಳು ಬಂದಿವೆ. ನಿಮಗ್ಯಾಕೆ ಬೇಕ್ರಿ ನಮ್ ಸುದ್ದಿ.. ನೀವು ನಮ್ಮ ವಿಚಾರದಲ್ಲಿ ಎಂಟ್ರಿ ಕೊಟ್ಟರೆ ಕೈಕಾಲು ಮುರಿಯುತ್ತೇವೆ ಎಂದು ಒಬ್ಬ ಫೋನ್ ಮಾಡಿ ಬೆದರಿಕೆ ಹಾಕಿದ್ದಾನೆ. ಮತ್ತೊಬ್ಬ ಫೋನ್ ಮಾಡಿ, ನಮ್ಮ ವಿಚಾರ ನಿಮಗೆ ಬೇಡ. ನೀವು ಸುಮ್ಮನಿದ್ದರೆ ಒಳಿತು. ಇಲ್ಲದಿದ್ದರೆ ಕೊಲ್ಲಿಸುತ್ತೇವೆ ಎಂದು ಬೆದರಿಕೆ ಹಾಕಿದ್ದಾನೆ. ಈ ಎರಡೂ ಕರೆಗಳಿಗೂ ಸ್ವಾಮೀಜಿ, ಪ್ರತಿಕ್ರಿಯೆ ನೀಡಿದ್ದು ನೀವು ಕೈಕಾಲು ಮುರಿಯುವುದಿದ್ದರೆ ಗುರುಪುರದ ಮಠಕ್ಕೆ ಬನ್ನಿ. ನಾನು ಇರುತ್ತೇನೆ. ಆಸಿಯಾ ಹಿಂದು ಹೆಣ್ಮಗಳು. ಆಕೆಯನ್ನು ಮತಾಂತರಿಸಿ, ಈಗ ಬೀದಿಗೆ ತಂದಿದ್ದಾರೆ. ಈ ವಿಚಾರದಲ್ಲಿ ನಾವು ದನಿ ಎತ್ತಬೇಡಿ ಅಂದರೆ ನಿಮ್ಮ ಮುಸ್ಲಿಂ ಸಂಘಟನೆಗಳು ಈ ಕೆಲಸವನ್ನು ಮಾಡಲಿ. ಆಕೆಗೆ ನ್ಯಾಯ ಕೊಡಿಸಲಿ ಎಂದು ಮರು ಸವಾಲು ಹಾಕಿದ್ದಾರೆ.


ಎರಡು ಕರೆಗಳೂ ವಿದೇಶದಿಂದ ಬಂದಿರುವುದಾಗಿ ವಜ್ರದೇಹಿ ಸ್ವಾಮೀಜಿ ಹೇಳಿದ್ದಾರೆ. ಅಲ್ಲದೆ, ಆಸಿಯಾ ಪ್ರಕರಣದಲ್ಲಿ ನಾವು ಹಿಂದು ಸಂಘಟನೆಗಳ ಜೊತೆ ಸೇರಿ ಹೊಸ ರೂಪದ ಆಂದೋಲನ ಮಾಡುತ್ತೇವೆ. ಇದು ಈಕೆಗೆ ಒಬ್ಬಳಿಗೆ ಆಗಿರುವ ಅನ್ಯಾಯ ಅಲ್ಲ. ಸಮಸ್ತ ಹಿಂದು ಸಮಾಜಕ್ಕೆ ಮಾಡಿರುವ ಅನ್ಯಾಯ. ಹೀಗೆ ನೂರಾರು ಮಂದಿ ಹೆಣ್ಮಕ್ಕಳನ್ನು ಮತಾಂತರಿಸಿ, ಬೀದಿಗೆ ತಳ್ಳಿರುವ ಪ್ರಕರಣ ಇದೆ. ಈ ಎಲ್ಲದರಲ್ಲಿ ನಾವು ಅವರನ್ನು ಮರಳಿ ಮಾತೃಧರ್ಮಕ್ಕೆ ತಂದ ಮಾತ್ರಕ್ಕೆ ಮುಗಿದು ಹೋಗಲ್ಲ. ಅವರು ಮುಂದೆ ಬದುಕಿ ಬಾಳಬೇಕು. ಈಗ ಆಸಿಯಾ ಇಸ್ಲಾಂ ಧರ್ಮದಲ್ಲೇ ಇರುತ್ತೇನೆ ಎನ್ನುತ್ತಾರೆ. ಆಕೆಯನ್ನು ನಾವು ಬಲವಂತ ಪಡಿಸುವುದಿಲ್ಲ. ಆದರೆ, ಬಿಟ್ಟು ಹೋದ ಗಂಡ ಜೊತೆಗೆ ಬಂದು ಬಾಳಬೇಕು. ಆಕೆಗೆ ಅನ್ಯಾಯ ಆಗಬಾರದು ಎಂದಷ್ಟೇ ನಮ್ಮ ಕೋರಿಕೆ ಎಂದು ಹೇಳಿದ್ದಾರೆ.
Read: ಪ್ರೀತಿ, ಮತಾಂತರ, ಮದುವೆ ; ಮುಸ್ಲಿಂ ಲವ್ ಜಿಹಾದ್ ಬಲಿಯಾದ ಯುವತಿ ಬೀದಿಪಾಲು !!
ಹತ್ತು ದಿನಗಳ ಹಿಂದೆ ಮಾಧ್ಯಮದಲ್ಲಿ ಆಸಿಯಾ ಬಗ್ಗೆ ಸುದ್ದಿಯಾದಾಗ ಮಂಗಳೂರಿನ ಮಾಜಿ ಮೇಯರ್ ಅಶ್ರಫ್ ಮತ್ತು ಕೆಲವು ಮುಸ್ಲಿಂ ಮುಖಂಡರು ಆಕೆಯ ಪತಿ ಖಲೀಲ್ ಇರುವ ಕಟ್ಟೆಕಾರ್ ಕುಟುಂಬಸ್ಥರನ್ನು ಮನವೊಲಿಸಿ ಮತ್ತೆ ಮನೆಗೆ ಸೇರಿಸಿಕೊಳ್ಳುವ ಭರವಸೆ ನೀಡಿದ್ದರು. ಅದರಂತೆ, ಡಿ.10ರ ಮೊದಲು ತನ್ನನ್ನು ಮತ್ತೆ ಕುಟುಂಬಕ್ಕೆ ಸೇರಿಸಿಕೊಳ್ಳುತ್ತಾರೆ. ಪತಿಯೂ ನನ್ನ ಜೊತೆಗೆ ಬರುತ್ತಾರೆ ಎಂದು ಆಸಿಯಾ ಹೇಳಿಕೊಂಡಿದ್ದರು. ಆದರೆ, ಗಡುವಿನ ದಿನಾಂಕ ಹತ್ತಿರ ಬರುತ್ತಿದ್ದಂತೆ ಗಂಡನ ಕಡೆಯವರು ತಿರುಗಿ ಬಿದ್ದಿದ್ದಾರೆ.
ಕೇರಳದ ಕಣ್ಣೂರು ಜಿಲ್ಲೆಯ ಪ್ರತಿಷ್ಠಿತ ಹಿಂದು ಮನೆತನದ ಹುಡುಗಿಯಾಗಿರುವ ಶಾಂತಿ ಜೂಬಿ ಯಾನೆ ಆಸಿಯಾಳನ್ನು ಬೆಂಗಳೂರಿನಲ್ಲಿ ಖಲೀಲ್ ಎಂಬಾತ ಮತಾಂತರಿಸಿ, ಮದುವೆಯಾಗಿದ್ದ. ಎರಡು ವರ್ಷಗಳ ಕಾಲ ಜೊತೆಗೆ ಬಾಳಿದ್ದು ಹುಟ್ಟೂರು ಸುಳ್ಯಕ್ಕೆ ಬಂದಿದ್ದ ಖಲೀಲ್ ನಾಪತ್ತೆಯಾಗಿದ್ದಾನೆ. ಖಲೀಲ್ ನನ್ನು ಆತನ ಕುಟುಂಬಸ್ಥರೇ ಸೇರಿ ನಾಪತ್ತೆ ಮಾಡಿದ್ದು ತನ್ನನ್ನು ಬೀದಿ ಪಾಲು ಮಾಡಿದ್ದಾರೆ ಎಂದು ಆಸಿಯಾ ಹೇಳಿದ್ದರು.
Video:
Mangalore Rajashekharananda Swamiji of Vajradehi Mata receives threat calls for interfering in love jihad case of Asiya Joobi Ibrahim Khaleel Kattekar, Sullia.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm