ಬ್ರೇಕಿಂಗ್ ನ್ಯೂಸ್
04-10-24 07:22 pm Udupi Correspondent ಕರಾವಳಿ
ಕಾನ್ಪುರ, ಅ.4: ಮುಖ ಸುಕ್ಕುಗಟ್ಟುತ್ತಿರುವ ವೃದ್ಧರಿಗೆ ಇಂತಿಷ್ಟು ಹಣ ಕೊಟ್ಟರೆ ಯುವಕರನ್ನಾಗಿಸುತ್ತೇವೆ ಅಂದರೆ, ಯಾರಿಗೆ ಬೇಡ ಹೇಳಿ. ಯಾರಿಗೂ ವೃದ್ಧಾಪ್ಯ ಬೇಡ, ಸದಾ ಹುಮ್ಮಸ್ಸಿನ ಯೌವ್ವನವನ್ನೇ ಜನ ಬಯಸುತ್ತಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಉತ್ತರ ಪ್ರದೇಶದ ದಂಪತಿ, ಹಲವಾರು ವೃದ್ಧ ದಂಪತಿಯನ್ನು ನಂಬಿಸಿ ಬರೋಬ್ಬರಿ 35 ಕೋಟಿಗೂ ಹೆಚ್ಚು ಹಣವನ್ನು ಪೀಕಿಸಿಕೊಂಡು ತಲೆಮರೆಸಿಕೊಂಡಿದ್ದಾರೆ.
ರಾಜೀವ ಕುಮಾರ್ ದುಬೆ ಮತ್ತು ಆತನ ಪತ್ನಿ ರಶ್ಮಿ ಈ ಖತರ್ನಾಕ್ ಐಡಿಯಾ ಮೂಲಕ ಕೋಟ್ಯಂತರ ರೂಪಾಯಿ ಗಳಿಸಿದವರು. ದೂರು ದಾಖಲಾಗುತ್ತಲೇ ನಾಪತ್ತೆಯಾಗಿದ್ದು, ವಿದೇಶಕ್ಕೆ ಪರಾರಿಯಾಗಿದ್ದಾರೆ ಎನ್ನುವ ಶಂಕೆಯೂ ಮೂಡಿದೆ. ಕಾನ್ಪುರದ ಕಿದ್ವಾಯಿ ನಗರದಲ್ಲಿ ಇವರು ರೀವೈವಲ್ ವರ್ಲ್ಡ್ ಎನ್ನುವ ಹೆಸರಲ್ಲಿ ಆಕ್ಸಿಜನ್ ಥೆರಪಿ ನೀಡುತ್ತೇವೆಂದು ಚಿಕಿತ್ಸಾ ಕೇಂದ್ರ ತೆರೆದಿದ್ದರು. ನಮ್ಮಲ್ಲಿ ಇಸ್ರೇಲ್ ನಿರ್ಮಿತ ಮೆಷಿನ್ ಇದ್ದು, ಅದನ್ನು ಬಳಸಿ ವೃದ್ಧರನ್ನು ಕೇವಲ 90 ಸಾವಿರ ರೂ.ಗೆ 25 ವರ್ಷದ ಯುವಕರನ್ನಾಗಿಸುತ್ತೇವೆ ಎಂದು ನಂಬಿಸುತ್ತಿದ್ದರು. ಖಾನ್ಪುರದಲ್ಲಿ ತೀವ್ರ ಮಾಲಿನ್ಯದಿಂದಾಗಿ ಬೇಗನೆ ವೃದ್ಧಾಪ್ಯ ಬರುತ್ತಿದ್ದು, ಟೈಮ್ ಮೆಷಿನ್ ಮೂಲಕ ಕಡಿಮೆ ಸಮಯದಲ್ಲಿ ನಿಮಗೆ ಯೌವ್ವನ ಮರಳಿಸುತ್ತೇವೆ ಎಂದು ಹೇಳುತ್ತಿದ್ದರು.
ಇವರ ಮೋಡಿ ಮಾತಿಗೆ ಮರುಳಾಗಿ ಹಲವಾರು ಮಂದಿ ಹಣ ತೆತ್ತು ಚಿಕಿತ್ಸೆಗೆ ಮುಂದಾಗಿದ್ದರು. ಹೆಚ್ಚೆಚ್ಚು ಗ್ರಾಹಕರನ್ನು ತಂದುಕೊಟ್ಟಲ್ಲಿ ಅಂಥವರಿಗೆ ಚಿಕಿತ್ಸೆಯಲ್ಲಿ ಡಿಸ್ಕೌಂಟ್ ಕೊಡಿಸುವ ಭರವಸೆ ನೀಡುತ್ತಿದ್ದರು. ಗೋವಿಂದನಗರ ಎಸ್ಪಿ ಅಂಜಲಿ ವಿಶ್ವಕರ್ಮ ಪ್ರತಿಕ್ರಿಯೆ ನೀಡಿದ್ದು, ಈವರೆಗೆ ಮೂವರು ಈ ಬಗ್ಗೆ ದೂರು ಕೊಟ್ಟಿದ್ದಾರೆ. ಅವರ ಪ್ರಕಾರ, 25ಕ್ಕೂ ಹೆಚ್ಚು ಮಂದಿ ಈ ರೀತಿ ಹಣ ಕಳಕೊಂಡಿದ್ದಾರಂತೆ ಎಂದು ತಿಳಿಸಿದ್ದಾರೆ. ಪೊಲೀಸರಿಗೆ ದೂರು ನೀಡಿರುವವರಲ್ಲಿ ರೇಣು ಸಿಂಗ್ ಚಂದೇಲ್ ಎಂಬವರು ತನ್ನಿಂದ 10.75 ಲಕ್ಷ ರೂಪಾಯಿ ದೋಚಿದ್ದಾರೆಂದು ತಿಳಿಸಿದ್ದಾರೆ. ಪೊಲೀಸರು ದಂಪತಿ ವಿರುದ್ಧ ಬಿಎನ್ಎಸ್ ಸೆಕ್ಷನ್ 318(4) ಪ್ರಕಾರ ಮೋಸದ ಪ್ರಕರಣ ದಾಖಲಿಸಿದ್ದಾರೆ.
ರೇಣು ಸಿಂಗ್ ಅವರಲ್ಲಿ ಮುಂದಿನ ಸೆಷನ್ ನಿಮಗೆ ಫ್ರೀ ಮಾಡುತ್ತೇವೆ, ಇನ್ನಷ್ಟು ಗ್ರಾಹಕರನ್ನು ಕೊಡಿಸಿದಲ್ಲಿ ನಿಮ್ಗೆ ಮುಂದೆ ಫ್ರೀ ಚಿಕಿತ್ಸೆ ಎಂದು ನಂಬಿಸಿದ್ದರು. ರೇಣು ಅವರೇ ಹಲವಾರು ಮಂದಿ ಗ್ರಾಹಕರನ್ನು ಕೊಡಿಸಿದ್ದು ದಂಪತಿಗೆ ಲಕ್ಷಾಂತರ ರೂ. ಹಣವನ್ನೂ ಕೊಟ್ಟಿದ್ದರಂತೆ. 65 ವರ್ಷದವರೂ 25 ವರ್ಷದ ಯುವಕರಂತಾಗುತ್ತಾರೆ, ಆದರೆ ಪ್ರತಿ ಬಾರಿ ಆಕ್ಸಿಜನ್ ಥೆರಪಿ ಸೆಷನ್ನಿಗೆ ಹಾಜರಾಗಬೇಕು ಎಂದು ರಾಜೀವ ಕುಮಾರ್ ದುಬೆ ನಂಬಿಸುತ್ತಿದ್ದ. ರೇಣು ಸಿಂಗ್ ಅವರಲ್ಲಿ 9 ಲಕ್ಷ ಮತ್ತು ಪ್ಲಾಂಟ್ ವಿಸ್ತರಣೆಗೆಂದು ಮತ್ತೆ 3.50 ಲಕ್ಷ ರೂ. ಪಡೆದಿದ್ದ. ಇಸ್ರೇಲಿನಿಂದ ಅತ್ಯಾಧುನಿಕ ಮೆಷಿನ್ ತರಿಸುತ್ತಿದ್ದೇನೆ, ಆನಂತರ ನಿಮ್ಮ ಹಣ ವಾಪಸ್ ಮಾಡುತ್ತೇವೆ ಎಂದಿದ್ದರು. ಆದರೆ ಇದೇ ರೀತಿ ಖಾನ್ಪುರದಲ್ಲಿ ಹಲವರಿಂದ ಹಣ ಪಡೆದಿದ್ದಾರೆಂದು ತಿಳಿದುಬಂದಿದ್ದು, 35 ಕೋಟಿಗೂ ಹೆಚ್ಚು ಹಣ ಸಂಗ್ರಹಿಸಿ ನಾಪತ್ತೆಯಾಗಿದ್ದಾರೆ. ಸದ್ಯಕ್ಕೆ ವಿದೇಶಕ್ಕೆ ಪರಾರಿಯಾಗಿದ್ದಾರೆ ಎನ್ನುವ ಶಂಕೆ ಮೂಡಿದೆ.
If you are getting old, the promise of an “elixir” to make you young again does seem enchanting. However, as foolish as it may sound, dozens of elderly people from Kanpur fell for this captivating assurance and lost crores of rupees when a couple approached them with the idea of turning back the clock to make them young again.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm