ಬ್ರೇಕಿಂಗ್ ನ್ಯೂಸ್
05-10-24 03:54 pm Mangalore Correspondent ಕರಾವಳಿ
ಮಂಗಳೂರು, ಅ.5: ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿಯನ್ನೇ ಕಡೆಗಣಿಸಿದೆ. ಹಿಂದೆ ಯಡಿಯೂರಪ್ಪ, ಬೊಮ್ಮಾಯಿ ಸರಕಾರವಿದ್ದಾಗ ಅಭಿವೃದ್ಧಿಗೆ ಅತೀ ಹೆಚ್ಚು ಅನುದಾನ ನೀಡಲಾಗಿತ್ತು. ಆದರೆ ಕಾಂಗ್ರೆಸ್ ಸರ್ಕಾರದಲ್ಲಿ ಅಭಿವೃದ್ಧಿ ಅನ್ನೋದು ಕನಸಿನ ಮಾತಾಗಿದೆ. ದಕ್ಷಿಣ ಕನ್ನಡದ ಹಾಲಿನ ಡೈರಿಗಳು ಲಾಸ್ ನಲ್ಲಿವೆ. ಶಾಸಕರ ಹಕ್ಕಿನ ಶಾಸಕತ್ವ ನಿಧಿಯನ್ನೂ ಬಿಡುಗಡೆ ಮಾಡಲಾಗುತ್ತಿಲ್ಲ. ನಮ್ಮ ವಿರುದ್ಧ 40 ಶೇ. ಭ್ರಷ್ಟಾಚಾರದ ಆರೋಪ ಮಾಡಿದ್ದ ಕಾಂಗ್ರೆಸಿನದ್ದು ಈಗ 80 ಶೇ. ಸರಕಾರವಾಗಿದೆ. ಇದು ಕಳ್ಳರ ಸರಕಾರ, ಭ್ರಷ್ಟಾಚಾರಿಗಳ ಸರಕಾರ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಪ್ರಜಾಪ್ರಭುತ್ವ, ಸಂವಿಧಾನದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು ತನ್ನ ವಿರುದ್ಧ ಎಫ್ಐಆರ್ ದಾಖಲಾದ ಬಳಿಕ ನೈತಿಕತೆಯಿಂದ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ಮೈಸೂರು ದಸರಾದಲ್ಲಿ ತನ್ನ ಹೆಗ್ಗಳಿಕೆ, ಭ್ರಷ್ಟಾಚಾರದ ಆರೋಪ, ಆತ್ಮಸಾಕ್ಷಿ ಬಗ್ಗೆ ಹೇಳಿಕೊಳ್ಳುತ್ತಾರೆ. ಸಿದ್ದರಾಮಯ್ಯ ಅವರಿಗೆ ಆತ್ಮವೇ ಇಲ್ಲ ಮತ್ತು ಆತ್ಮಸಾಕ್ಷಿ ಎಲ್ಲಿರಬೇಕು. ಆತ್ಮಸಾಕ್ಷಿ ಇದ್ದಿದ್ದರೆ ಈ ರೀತಿ ನಡೆದುಕೊಳ್ಳದೇ ಕೂಡಲೇ ರಾಜೀನಾಮೆ ನೀಡಿ ತನಿಖೆ ಎದುರಿಸುತ್ತಿದ್ದರು.
ಕಾಂಗ್ರೆಸ್ ಸರಕಾರದಡಿ ಹಲ್ಲೆ, ಗಲಭೆ, ಹಿಂದೂ ಮುಸ್ಲಿಂ ಗಲಾಟೆಗಳು ನಡೆಯುತ್ತಿದೆ. ಪಾಕಿಸ್ತಾನ ಪರ ಘೋಷಣೆ ಹಾಕಿದವರ ಬಂಧನವಾಗಿಲ್ಲ. ಹಿಂದೂ ಸಮಾಜದ ಮೇಲೆ ದಾಳಿಯಾಗುವ ಕೆಲಸವಾಗುತ್ತಿದೆ. ಇದನ್ನ ಹತ್ತಿಕ್ಕುವ ಕೆಲಸಗಳು ಆಗುತ್ತಿಲ್ಲ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ದ್ವೇಷ ರಾಜಕಾರಣ ನಡೆಸುತ್ತಿದೆ. ನಮ್ಮ ಸರಕಾರದ ಮೇಲೆ ಆರೋಪ ಮಾಡಿದ್ದರು. ಆದರೆ ದಾಖಲೆ ಇರಲಿಲ್ಲ. ಕೆಂಪಣ್ಣ ಹಿಡಿದು ರಾಜಕೀಯ ಮಾಡಿದ್ರೆ ಹೊರತು ನಮ್ಮ ವಿರುದ್ಧದ ಯಾವುದೇ ಕೇಸು ನಿಲ್ಲಲಿಲ್ಲ. ಆದರೆ ನಾವು ಯಾರ ಮೇಲೂ ಕೇಸ್ ಹಾಕಿಲ್ಲ. ಸಿದ್ದರಾಮಯ್ಯ ಮೇಲೆ ಆರೋಪ ಮಾತ್ರ ಅಲ್ಲ, ಕಾನೂನಿನ ಆಧಾರದಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಹೇಳಿದರು.
ಸಿದ್ದರಾಮಯ್ಯ ಆತ್ಮಸಾಕ್ಷಿ ನ್ಯಾಯಾಲಯದ ಮೊರೆ ಹೋಗುತ್ತೇನೆ ಎನ್ನುತ್ತಾರೆ. ತನಿಖೆಗೆ ಆದೇಶ ಆಗಿದೆ, ಆದರೆ ಇವರು ರಾಜ್ಯಪಾಲರ ಆದೇಶವನ್ನೇ ಪ್ರಶ್ನೆ ಮಾಡುತ್ತಿದ್ದಾರೆ. ಇವರಿಗೆ ಆತ್ಮವೇ ಇಲ್ಲ, ಇನ್ನು ಆತ್ಮ ಸಾಕ್ಷಿ ಎಲ್ಲಿಂದ ಬಂತು. ಸಿದ್ದರಾಮಯ್ಯ ಮೊದಲಿಗೆ ರಾಜೀನಾಮೆ ಕೊಟ್ಟು ತನಿಖೆಗೆ ಆದೇಶ ಮುಂದಾಗಬೇಕಿತ್ತು. ಆಗ ಅವರ ಆದರ್ಶಗಳ ಬೆಲೆ ಇನ್ನಷ್ಟು ಗೌರವ ಹೆಚ್ಚುತ್ತಿತ್ತು ಎಂದು ಬಿಜೆಪಿ ಮಾಜಿ ರಾಜ್ಯಾದ್ಯಕ್ಷರೂ ಆದ ನಳಿನ್ ಕುಮಾರ್ ಕಟೀಲ್ ಹೇಳಿದರು.
ಚುನಾವಣೆ ಬಾಂಡ್ ವಿಷಯದಲ್ಲಿ ಎಫ್ಐಆರ್ ದಾಖಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಚುನಾವಣೆ ಬಾಂಡ್ ಸರಿಯಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕೇಸ್ ಹಾಕಿದವರು ಯಾರೋ ಸಂಬಂಧವೇ ಇಲ್ಲದವರು. ಕೇಸ್ ಹಾಕಿದವರು ಮೂರನೇ ವ್ಯಕ್ತಿ, ಎಫ್ ಐ ಆರ್ ಆಗಿದೆ. ಸದ್ಯ ತಡೆಯಾಜ್ಞೆ ಸಿಕ್ಕಿದೆ. ಸಿದ್ದರಾಮಯ್ಯ ಕೇಸ್ ಹಾಗಲ್ಲ, ಮುಡಾ ಹಾಗೂ ವಾಲ್ಮೀಕಿ ಹಗರಣ ಎರಡರಲ್ಲೂ ಸಿಕ್ಕಿಬಿದ್ದಿದ್ದಾರೆ ಎಂದರು.
Former BJP State President Nalin Kumar Kateel has accused the Siddaramaiah-led Karnataka government of withholding development funds for the past one and a half years, resulting in stalled projects across the state.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm