ಬ್ರೇಕಿಂಗ್ ನ್ಯೂಸ್
06-10-24 09:08 am Mangaluru Correspondent ಕರಾವಳಿ
ಮಂಗಳೂರು, ಅ.6: ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯ್ದೀನ್ ಬಾವ ಅವರ ಸೋದರ ಮುಮ್ತಾಜ್ ಆಲಿ ನಾಪತ್ತೆಯಾಗಿದ್ದು ನಗರದ ಕುಳೂರು ಸೇತುವೆಯಲ್ಲಿ ಕಾರು ಬಿಟ್ಟು ಕಾಣೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡ ಶಂಕೆ ಮೂಡಿದೆ.
ಕುಳೂರು ಸೇತುವೆಯಲ್ಲಿ ತನ್ನ ಬಿಎಂಡಬ್ಲ್ಯು ಕಾರನ್ನು ಅಪಘಾತಪಡಿಸಿದ ರೀತಿಯಲ್ಲಿ ಬಿಟ್ಟಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಸೇತುವೆ ಆಸುಪಾಸಿನಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದು ಪೊಲೀಸರು ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.





ನಸುಕಿನ ಮೂರು ಗಂಟೆ ವೇಳೆಗೆ ಮುಮ್ತಾಜ್ ಮನೆಯಿಂದ ಹೊರಟಿದ್ದು ಈ ವೇಳೆ ತನ್ನ ಮಗಳಿಗೆ ವಾಯ್ಸ್ ಮೆಸೇಜ್ ಹಾಕಿದ್ದರು. ನಾನು ಬದುಕುಳಿಯಲ್ಲ, ದೇವರ ಬಳಿಗೆ ಹೋಗುತ್ತಿದ್ದೇನೆ ಎಂದು ಬ್ಯಾರಿ ಭಾಷೆಯಲ್ಲಿ ವಾಯ್ಸ್ ಮೆಸೇಜ್ ಹಾಕಿದ್ದಾರೆ. ಹೀಗಾಗಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಮೊಯ್ದೀನ್ ಬಾವಾ ಮತ್ತು ಕುಟುಂಬಸ್ಥರು ಕುಳೂರು ಸೇತುವೆ ಬಳಿಗೆ ಆಗಮಿಸಿದ್ದಾರೆ. ಇವರ ಇನ್ನೊಬ್ಬ ಸೋದರ ಬಿ.ಎಂ. ಫಾರೂಕ್ ಅವರು ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾಗಿದ್ದು ಬೆಂಗಳೂರಿನಲ್ಲಿ ಉದ್ಯಮ ನಡೆಸುತ್ತಿದ್ದಾರೆ.
ಮುಮ್ತಾಜ್ ಆಲಿ ಅವರೂ ಮಂಗಳೂರಿನಲ್ಲಿ ಸೋದರನ ಜೊತೆಗೆ ಉದ್ಯಮ ನೋಡಿಕೊಂಡಿದ್ದರು. ಕೆನರಾ ಚೇಂಬರ್ ಆಫ್ ಕಾಮರ್ಸ್ ನಲ್ಲಿ ಸಕ್ರಿಯರಾಗಿದ್ದರು. ದಿಢೀರ್ ಆಗಿ ಈ ರೀತಿಯ ನಿರ್ಧಾರಕ್ಕೆ ಬರಲು ಉದ್ಯಮದಲ್ಲಿ ನಷ್ಟಗೊಂಡಿದ್ದು ಕಾರಣವೇ ಗೊತ್ತಾಗಿಲ್ಲ. ಮೊಯ್ದೀನ್ ಬಾವ ಅವರು ನಾಲ್ಕು ವರ್ಷಗಳ ಹಿಂದೆ ಉದ್ಯಮದಲ್ಲಿ ಭಾರೀ ನಷ್ಟಕ್ಕೀಡಾಗಿದ್ದರು.

ಸೇತುವೆಯಿಂದ ಹಾರಿದ ಸಂಶಯ ; ಕಮಿಷನರ್
ಕುಳೂರು ಸೇತುವೆ ಬಳಿಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಆಗಮಿಸಿದ್ದು ಪೊಲೀಸರ ಶೋಧಕ್ಕೆ ನೇತೃತ್ವ ನೀಡಿದ್ದಾರೆ. ಘಟನೆ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು ಮುಂಜಾನೆ ಮೂರು ಗಂಟೆಗೆ ಮನೆಯಲ್ಲಿ ಕೆಲವು ಕಾರಣಗಳಿಂದ ಸಿಟ್ಟಾಗಿ ಬಿಎಂಡಬ್ಲೂ ಕಾರು ಚಲಾಯಿಸುತ್ತ ಬಂದಿದ್ದರು. ಕುಳೂರು ಸೇತುವೆಯಲ್ಲಿ ಕಾರು ಅಫಘಾತವಾಗಿ ಕಾಣೆಯಾಗಿದ್ದಾರೆ. ಈ ವಿಚಾರ ಮಗಳಿಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸೇತುವೆಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ಇದೆ. ವಿವಿಧ ತಂಡಗಳು ನದಿಯಲ್ಲಿ ಶೋಧ ಕಾರ್ಯ ಮಾಡುತ್ತಿದ್ದಾರೆ. ಎಫ್ ಎಸ್ ಎಲ್ ಅಧಿಕಾರಿಗಳು ಕಾರು ಪರಿಶೀಲನೆ ಮಾಡಿದ್ದಾರೆ. ಕುಟುಂಬದಿಂದ ಕೆಲವು ಮಾಹಿತಿಗಳನ್ನು ಪಡೆದಿದ್ದೇವೆ. ಘಟನೆ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
Former mla Mohiuddin Bawa brother businessman Mumtaz Ali suicide, car found near kulur bridge in Mangalore. At 3 am, Mumtaz Ali sent a voice text through WhatsApp to his daughter, declaring his intention to end his life. Fire personnel are in the search at the Netravathi River to find his body.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am