ಬ್ರೇಕಿಂಗ್ ನ್ಯೂಸ್
06-10-24 09:22 pm Mangalore Correspondent ಕರಾವಳಿ
ಮಂಗಳೂರು, ಅ.6: ದೇಶ ಸ್ವತಂತ್ರಗೊಂಡು 75 ವರ್ಷ ಕಳೆದರೂ ಪ್ರಾಚೀನ ದೇಗುಲಗಳು ಸೇರಿದಂತೆ ಹಿಂದುಗಳ ಹೆಚ್ಚಿನ ದೇವಸ್ಥಾನಗಳು ಸರಕಾರದ ವಶದಲ್ಲೇ ಇವೆ. ಇದರಿಂದ ಹಿಂದೂಗಳ ನಂಬಿಕೆಗೆ ಧಕ್ಕೆ ಉಂಟಾಗುವ ಕೆಲಸಗಳಾಗುತ್ತಿವೆ. ಅಯೋಧ್ಯೆ ಶ್ರೀರಾಮ ಮಂದಿರದ ಮಾದರಿಯಲ್ಲಿ ದೇಶದ ಎಲ್ಲ ದೇವಸ್ಥಾನಗಳಿಗೂ ಪ್ರತ್ಯೇಕ ವಿಶ್ವಸ್ಥ ಮಂಡಳಿ ರೂಪಿಸಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ತನ್ನ ವಶದಲ್ಲಿ ಇರಿಸಿಕೊಂಡಿರುವ ದೇವಾಲಯಗಳನ್ನು ಹಿಂದೂಗಳ ವಶಕ್ಕೆ ನೀಡುವಂತೆ ಸುಪ್ರೀಂ ಕೋರ್ಟ್ ಈಗಾಗಲೇ ಸೂಚನೆ ನೀಡಿದೆ. ಆದರೆ ದೇವಸ್ಥಾನಗಳನ್ನು ಸರಕಾರ ಹಿಂದುಗಳಿಗೆ ನೀಡದೆ ತನ್ನ ವಶದಲ್ಲೇ ಇರಿಸಿಕೊಂಡಿದ್ದು ಇದರಿಂದಾಗಿ ನಮ್ಮ ಶ್ರದ್ಧಾಕೇಂದ್ರಗಳಿಗೆ ಅಪಚಾರಗಳಾಗುತ್ತಿವೆ. ನ್ಯಾಯಾಲಯದ ತೀರ್ಪಿನಂತೆ ಎಲ್ಲ ಹಿಂದೂ ದೇಗುಲಗಳನ್ನು ಸರಕಾರವು ಸಮಾಜದ ವಶಕ್ಕೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.
ಸರ್ಕಾರಗಳು ದೇವಸ್ಥಾನಗಳನ್ನು ವಶಕ್ಕೆ ಪಡೆದ ಬಳಿಕ ಅವನ್ನು ಸ್ವಸ್ಥ ಸ್ಥಿತಿಯಲ್ಲಿಡಬೇಕಾದ ಕರ್ತವ್ಯ ಇರುತ್ತದೆ. ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದ ಅಪವಿತ್ರದಂತಹ ಘಟನೆ ನಡೆಯದಂತೆ ನೋಡಿಕೊಳ್ಳಬೇಕಾದ್ದು ಆಯಾ ಸರ್ಕಾರಗಳ ಕರ್ತವ್ಯ. ಸಂಬಂಧಪಟ್ಟ ವಿಭಾಗಗಳು ಈ ಬಗ್ಗೆ ನಿಗಾ ವಹಿಸಬೇಕಿತ್ತು. ಇಂತಹ ಘಟನೆ ಮರುಕಳಿಸದೇ ಇರಬೇಕಾದರೆ, ದೇವಾಲಯಗಳು ಸ್ವಂತ ಗೋಶಾಲೆ ಹೊಂದುವಂತಾಗಬೇಕು. ತಮ್ಮದೇ ಗೋವುಗಳಿದ್ದರೆ ಶುದ್ಧ ತುಪ್ಪ, ಹಾಲು ದೊರಕುತ್ತದೆ.
ದೇವಸ್ಥಾನಗಳು ಹಿಂದುಗಳ ಜಾಗೃತ ಕೇಂದ್ರಗಳಾದಾಗ ಮಾತ್ರ ಧಾರ್ಮಿಕ ನಂಬಿಕೆ, ನಡವಳಿಕೆಯನ್ನು ಗೌರವಿಸಲು ಸಾಧ್ಯವಾಗುತ್ತದೆ. ಇಂತಹ ಉಪಕ್ರಮಕ್ಕೆ ಸರ್ಕಾರಗಳು ಮುಂದಾಗಬೇಕು ಎಂದರು.
Despite 75 years of independence, many ancient temples, including prominent ones, remain under government control, which is damaging the faith of Hindus, according to Pejawar Matha’s Sri Vishwaprasanna Teertha Swamiji.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
19-09-25 05:45 pm
HK News Desk
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm