ಬ್ರೇಕಿಂಗ್ ನ್ಯೂಸ್
06-10-24 10:58 pm Udupi Correspondent ಕರಾವಳಿ
ಉಡುಪಿ, ಅ.6 : ರಾಜ್ಯಾದ್ಯಂತ ಮತ್ತೆ ಮಳೆ ಅಬ್ಬರ ಕಾಣಿಸಿಕೊಂಡಿದ್ದು ಇತ್ತ ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ಭಾನುವಾರ ಸಂಜೆ ಮೇಘಸ್ಫೋಟ ಸಂಭವಿಸಿದೆ. ಹೆಬ್ರಿ ಸಮೀಪದ ಕಬ್ಬಿನಾಲೆ ಬೆಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗಿದ್ದು ಆಸುಪಾಸಿನಲ್ಲಿ ದಿಢೀರ್ ಪ್ರವಾಹ ಸ್ಥಿತಿ ಏರ್ಪಟ್ಟಿದೆ.
ಪಶ್ಚಿಮ ಘಟ್ಟದ ತಪ್ಪಲು ಪ್ರದೇಶ ಹೆಬ್ರಿಯಲ್ಲಿ ಮಧ್ಯಾಹ್ನ 4.30 ರ ಸುಮಾರಿಗೆ ಮೇಘಸ್ಫೋಟ ಉಂಟಾಗಿದೆ. ಇದರಿಂದಾಗಿ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿ ಎಂಬಲ್ಲಿ ಹಠಾತ್ ಜಲ ಪ್ರವಾಹ ಉಂಟಾಗಿದೆ. ಬಲ್ಲಾಡಿಯ ಈಶ್ವರನಗರ ಸಮೀಪದ ಬಮ್ಮಗುಂಡಿ ಹೊಳೆ ಉಕ್ಕಿ ಹರಿದು ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಭಾರೀ ಅವಾಂತರ ಸೃಷ್ಟಿಯಾಗಿದೆ.





ಭೀಕರ ಜಲ ಪ್ರವಾಹದಿಂದಾಗಿ ಹಲವು ಮನೆಗಳು, ಕಾರು ಬೈಕ್ ಗಳು ಕೊಚ್ಚಿ ಹೋಗಿದೆ. ಕಬ್ಬಿನಾಲೆ ಭಾಗದ ಪರ್ವತ ಸಾಲಿನಲ್ಲಿ ಮೇಘ ಸ್ಫೋಟವಾಗಿದ್ದರಿಂದ ಭೀಕರ ಪ್ರವಾಹ ಸೃಷ್ಟಿಯಾಗಿದೆ ಎನ್ನಲಾಗುತ್ತಿದೆ. ಮುದ್ರಾಡಿಯ ಹೊಸ ಕಂಬ್ಲದಲ್ಲಿ 1, ಕಾಂತರಬೈಲಿನಲ್ಲಿ 4, ಕೆಲಕಿಲದಲ್ಲಿ 3 ಮನೆಗಳು ಅರ್ಧದಷ್ಟು ಮುಳುಗಿದ್ದು, ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ ರಕ್ಷಣಾ ಸಿಬ್ಬಂದಿ ಹಗ್ಗ ಕಟ್ಟಿ ಮನೆ ಮಂದಿಯನ್ನು ರಕ್ಷಿಸಿದ್ದಾರೆ.
ಮುದ್ರಾಡಿ ಆಸುಪಾಸಿನಲ್ಲಿ ಎಂಟು ಮನೆಗಳಿಗೆ ಪ್ರವಾಹದ ನೀರು ನುಗ್ಗಿದೆ. ನೆರೆಯಿಂದಾಗಿ ಮುದ್ರಾಡಿ ಸಂಪರ್ಕಿಸುವ ಬಲ್ಲಾಡಿ ತುಂಡುಗುಡ್ಡೆ ರಸ್ತೆ ಸಂಪೂರ್ಣ ಬಂದ್ ಆಗಿದ್ದು ಸ್ಥಳೀಯರು ಬದಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ.
‘ಕಬ್ಬಿನಾಲೆಯ ಬೆಟ್ಟದಲ್ಲಿ ಉಂಟಾದ ಮೇಘಸ್ಫೋಟದಿಂದ ಕೆಲವೇ ಗಂಟೆಯಲ್ಲಿ ಭಾರೀ ಮಳೆಯಾಗಿ ಜಲ ಪ್ರವಾಹ ಸೃಷ್ಠಿಯಾಗಿದೆ. ಇದರ ಪರಿಣಾಮ ನೀರು ಮನೆಗಳಿಗೆ ನುಗ್ಗಿವೆ ಎಂದು ಮುದ್ರಾಡಿ ಗ್ರಾಮ ಪಂಚಾಯತ್ ಸದಸ್ಯ ಗಣಪತಿ ಮುದ್ರಾಡಿ ತಿಳಿಸಿದ್ದಾರೆ.
ಇನ್ನೆರಡು ದಿನ ಭಾರೀ ಮಳೆ ಸೂಚನೆ
ಪ್ರವಾಹದ ಕುರಿತು ಮಾಹಿತಿ ನೀಡಿರುವ ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ, 'ಅ.9ರ ವರೆಗೆ ಇದೇ ರೀತಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಹೆಬ್ರಿ ತಾಲೂಕಿನ ಬಲ್ಲಾಡಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದು, ನೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ' ಎಂದು ಹೇಳಿದ್ದಾರೆ.
Heavy rain at hebri and Udupi, houses flooded with water cars bike go missing.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm