ಬ್ರೇಕಿಂಗ್ ನ್ಯೂಸ್
07-10-24 01:23 pm Mangalore Correspondent ಕರಾವಳಿ
ಮಂಗಳೂರು, ಅ.7: ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೋದರ, ಉದ್ಯಮಿ ಮುಮ್ತಾಜ್ ಆಲಿ ಶವ ಪತ್ತೆಯಾಗಿದೆ. ಇದೇ ವೇಳೆ ಘಟನೆ ಸಂಬಂಧಿಸಿ ಇನ್ನೊಬ್ಬ ಸೋದರ ಕಾವೂರು ಠಾಣೆಗೆ ದೂರು ನೀಡಿದ್ದು ಮುಮ್ತಾಜ್ ಆಲಿ ಅವರನ್ನು ಬ್ಲಾಕ್ಮೇಲ್ ಮಾಡಿದ್ದಾರೆಂದು ಹೇಳಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಕೊಟ್ಟಿದ್ದಾರೆ.
ಸುರತ್ಕಲ್ ಬಳಿಯ ಕಾಟಿಪಳ್ಳ ನಿವಾಸಿ ಮಹಿಳೆ ಸೇರಿದಂತೆ ಆರು ಮಂದಿಯ ವಿರುದ್ಧ ಮುಮ್ತಾಜ್ ಆಲಿ ಸೋದರ ಹೈದರ್ ಆಲಿ ದೂರು ನೀಡಿದ್ದಾರೆ. ಮುಮ್ತಾಜ್ ಆಲಿ ಅವರನ್ನು ಬ್ಲಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಬೇಡಿಕೆ ಇಟ್ಟಿದ್ದಾಗಿ ಆರೋಪ ಕೇಳಿಬಂದಿದೆ. ಕಾಟಿಪಳ್ಳ ನಿವಾಸಿ ರೆಹಮತ್, ಸುರತ್ಕಲ್ ಆಸುಪಾಸಿನ ನಿವಾಸಿಗಳಾದ ಅಬ್ದುಲ್ ಸತ್ತಾರ್, ಶಾಫಿ, ಮುಸ್ತಫಾ, ಶೋಯಿಬ್, ಸತ್ತಾರ್ ಮತ್ತು ಮುಮ್ತಾಜ್ ಆಲಿಯವರ ಕಾರು ಚಾಲಕ ಸಿರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ. ರೆಹಮತ್ ಎಂಬ ಮಹಿಳೆಯನ್ನು ಮುಂದಿಟ್ಟು ಬ್ಲ್ಯಾಕ್ಮೇಲ್ ಮಾಡಿದ್ದು ಈಗಾಗಲೇ 50 ಲಕ್ಷ ರೂಪಾಯಿ ಮುಮ್ತಾಜ್ ಅಲಿಯವರಿಂದ ವಸೂಲಿ ಮಾಡಿದ್ದಾರೆ. ಅಲ್ಲದೇ, 25 ಲಕ್ಷ ರು. ಮೊತ್ತದ ಚೆಕ್ ಪಡೆದಿದ್ದಾರೆ. ಆದರೆ ಮತ್ತೆ 50 ಲಕ್ಷ ಕೊಡಬೇಕೆಂದು ಬ್ಲಾಕ್ಮೇಲ್ ಮಾಡಿದ್ದಾರೆ. ಆರೋಪಿಗಳಲ್ಲಿ ಒಬ್ಬನಾದ ಶಾಫಿ ಮರಳು ದಂಧೆ ನಡೆಸುವ ವ್ಯಕ್ತಿಯಾಗಿದ್ದು ಮೊಯ್ದೀನ್ ಬಾವಾರ ರಾಜಕೀಯ ವಿರೋಧಿಯಾಗಿದ್ದಾನೆ.
ಆರೋಪಿಗಳು ಈ ಮೊದಲು ಮುಮ್ತಾಜ್ ಆಲಿ ಮೇಲೆ ಹಲ್ಲೆ ನಡೆಸಿದ್ದು ಹಣಕ್ಕಾಗಿ ಪೀಡಿಸುತ್ತಿದ್ದರು. ಅದೇ ಕಾರಣಕ್ಕೆ ಸೋದರ ಮುಮ್ತಾಜ್ ಸಾವಿಗೆ ಶರಣಾಗಿರುವ ಸಾಧ್ಯತೆಯಿದೆ. ಮುಮ್ತಾಜ್ ಅವರು ಸಾಮಾಜಿಕ ಕ್ಷೇತ್ರದಲ್ಲಿ ಉತ್ತಮ ಹೆಸರು ಹೊಂದಿದ್ದು ರೆಹಮತ್ ಎನ್ನುವ ಮಹಿಳೆ ಜೊತೆಗೆ ಸಂಬಂಧ ಇಟ್ಟುಕೊಂಡಿದ್ದಾರೆಂದು ಬಿಂಬಿಸಿ ಹೆಸರು ಕೆಡಿಸುವ ಷಡ್ಯಂತ್ರ ಮಾಡಿದ್ದರು ಎಂಬುದಾಗಿ ದೂರಿನಲ್ಲಿ ಹೈದರ್ ಆಲಿ ತಿಳಿಸಿದ್ದಾರೆ.
ಇದೇ ವೇಳೆ, ಸೋದರನನ್ನ ನೆನೆದು ಮಾಜಿ ಶಾಸಕ ಮೋಹಿಯುದ್ದೀನ್ ಬಾವ ಕಣ್ಣೀರು ಹಾಕಿದ್ದು ಬ್ಲಾಕ್ ಮೇಲ್ ನಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ನನ್ನ ಸಹೋದರ ಶೈಕ್ಷಣಿಕವಾಗಿ, ಧಾರ್ಮಿಕ ಕಾರ್ಯಗಳಿಂದ ಹೆಸರು ಗಳಿಸಿದ್ದ. ಆತನ ಪ್ರಚಾರವನ್ನ ಸಹಿಸದ ಕೆಲವು ಶಕ್ತಿಗಳು ಕುತಂತ್ರ ಮಾಡಿದ್ದಾರೆ. ಈ ಕಾರಣದಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ. ಪೊಲೀಸರು ಆತನ ಫೋನ್ ಹಾಗೂ ವಾಟ್ಸ್ ಅಪ್ ಪರಿಶೀಲನೆ ಮಾಡುತ್ತಿದ್ದಾರೆ. ನನ್ನ ಸಹೋದರನ ಈ ಸ್ಥಿತಿಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಬೇಕು. ರಾಜಕೀಯ ರಹಿತವಾಗಿ ಕೆಲಸ ಮಾಡಿದ್ದ ವ್ಯಕ್ತಿಯಾಗಿದ್ದ ಎಂದು ಹೇಳಿದ್ದಾರೆ.
Mangalore Mumtaz ali suicide case, Kavoor police book blackmail case against six persons including woman, extort 75 lakhs amount. Based on the complaint by Ali’s brother Hydar Ali, the police booked a case under sections 308 (2), 308 (5), 351 (2), 190 of BNS Act against Rehamath, Abdul Sattar, Shafi, Mustafa and Sohaib, Siraj. In his complaint, he has accused all six of blackmailing him and extorting money.
07-10-24 11:04 pm
Bangalore Correspondent
BJP Vijayendra, Satish Jarkiholi: ಮತ್ತೆ ಬೆಳಗಾ...
07-10-24 09:41 pm
Murdeshwar beach, Drowning: ಮುರುಡೇಶ್ವರ ; ಸಮುದ...
06-10-24 05:32 pm
Janardhan Reddy Ballari, Siddaramaiah: ಸಿದ್ದರ...
04-10-24 09:18 pm
ಬೆಂಗಳೂರು ; 3 ಪ್ರತಿಷ್ಠಿತ ಕಾಲೇಜುಗಳಿಗೆ ಹುಸಿ ಬಾಂ...
04-10-24 08:25 pm
05-10-24 06:40 pm
HK News Desk
Tirupati laddu row, CBI: ತಿರುಪತಿ ಲಡ್ಡಿನಲ್ಲಿ ಕ...
04-10-24 07:10 pm
Isha foundation raid, Court: ಇಶಾ ಫೌಂಡೇಶನ್ ಆಶ್...
02-10-24 02:10 pm
Israel-Iran war: ಇಸ್ರೇಲ್ ಮೇಲೆ ಮುಗಿಬಿದ್ದ ಇರಾನ್...
02-10-24 11:43 am
Fire in Thailand: ಥಾಯ್ಲೆಂಡ್ ; ಸ್ಕೂಲ್ ಬಸ್ ಟಯರ...
01-10-24 07:36 pm
07-10-24 11:07 pm
Mangalore Correspondent
Mangalore Mumtaz Ali suicide, Blackmail: ಕಾಟಿ...
07-10-24 01:23 pm
Mangalore, Mumtaz Ali body found, Suicide: ಕು...
07-10-24 11:16 am
Mangalore MP Captain Brijesh Chowta: ಸಂಸದೀಯ ಇ...
06-10-24 11:01 pm
Hebri, Udupi rain, flood: ಕಬ್ಬಿನಾಲೆ ಬೆಟ್ಟದಲ್ಲ...
06-10-24 10:58 pm
07-10-24 04:25 pm
Mangalore Correspondent
Kundapura, Bangalore crime: 27 ವರ್ಷದ ಕುಂದಾಪುರ...
06-10-24 09:43 pm
Udupi, Online Fraud, Kota Srinivas Poojary: ಸ...
06-10-24 08:40 pm
Mangalore crime, Alwyn DSouza, Catholic Sabha...
05-10-24 08:26 pm
ಬೆಂಗಳೂರು ಏರ್ಪೋರ್ಟಲ್ಲಿ ಸಿಕ್ಕಿಬಿದ್ದಿದ್ದೇನೆ, ದೊಡ...
03-10-24 10:49 pm