ಬ್ರೇಕಿಂಗ್ ನ್ಯೂಸ್
08-10-24 05:20 pm Mangalore Correspondent ಕರಾವಳಿ
ಮಂಗಳೂರು, ಅ.8: ಮಾಜಿ ಶಾಸಕ ಮೊಯ್ದೀನ್ ಬಾವ ಸೋದರ, ಹೆಸರಾಂತ ಉದ್ಯಮಿ ಮುಮ್ತಾಜ್ ಆಲಿ ನಿಗೂಢ ಸಾವಿಗೆ ಬ್ಲಾಕ್ಮೇಲ್ ಮತ್ತು ಹನಿಟ್ರ್ಯಾಪ್ ಜಾಲವೇ ಕಾರಣ ಎನ್ನಲಾಗುತ್ತಿದೆ. ಆರೋಪಿಗಳ ಪತ್ತೆಗಾಗಿ ಮಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದು, ಸೂತ್ರಧಾರೆ ಎನ್ನಲಾದ ಮಹಿಳೆ, ಆಕೆಯ ಪತಿ ಮತ್ತು ಇನ್ನೊಬ್ಬ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮುಮ್ತಾಜ್ ಸಾವಿಗೆ ಆರು ಮಂದಿಯ ತಂಡ ನಡೆಸಿದ ಬ್ಲಾಕ್ಮೇಲ್ ಕಾರಣ ಎಂದು ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಮಂಗಳೂರು ಸಿಸಿಬಿ ಪೊಲೀಸರು ಸೇರಿದಂತೆ ಎರಡು ವಿಶೇಷ ತಂಡ ತನಿಖೆ ಆರಂಭಿಸಿದ್ದಾರೆ. ಪ್ರಕರಣ ಸಂಬಂಧಿಸಿ ಪೊಲೀಸರು ಆಯೆಷಾ ರೆಹ್ಮತ್ ಮತ್ತು ಆಕೆಯ ಪತಿ ಶೋಯಿಬ್ ಹಾಗೂ ಸಿರಾಜ್ ಎಂಬವರನ್ನು ಕಲ್ಲಡ್ಕದಲ್ಲಿ ಬಂಧಿಸಿದ್ದಾಗಿ ತಿಳಿದುಬಂದಿದೆ. ಇದೇ ವೇಳೆ, ಅಬ್ದುಲ್ ಸತ್ತಾರ್ ಮತ್ತು ಶಾಫಿ ನಂದಾವರ ಸೇರಿದಂತೆ ಇತರ ಮೂವರು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸುರತ್ಕಲ್ ಬಳಿಯ ಕಾಟಿಪಳ್ಳ ನಿವಾಸಿ ಆಯೆಷಾ ರೆಹ್ಮತ್, ಮುಮ್ತಾಜ್ ಆಲಿಯವರು ನಡೆಸುತ್ತಿದ್ದ ಕಾಲೇಜಿನಲ್ಲಿ ಕೆಲಸಕ್ಕಿದ್ದ ಮಹಿಳೆ. ಈ ವೇಳೆ, ಮುಮ್ತಾಜ್ ಆಲಿಯವರ ಜೊತೆಗೆ ಹತ್ತಿರದ ಒಡನಾಟ ಇರಿಸಿಕೊಂಡಿದ್ದರು ಎನ್ನಲಾಗಿದೆ. ಇದೇ ನೆಪದಲ್ಲಿ ಆರೋಪಿ ಮಹಿಳೆ, ಮುಮ್ತಾಜ್ ಆಲಿಯವರನ್ನು ಬ್ಲಾಕ್ಮೇಲ್ ಮಾಡಲು ಮುಂದಾಗಿದ್ದು ಇದಕ್ಕೆ ಆಕೆಯ ಪತಿ ಶೋಯಿಬ್ ಸಹಕಾರ ನೀಡಿದ್ದ. ಅಲ್ಲದೆ, ಕಾಂಗ್ರೆಸ್ ಮುಖಂಡರಾದ ಅಬ್ದುಲ್ ಸತ್ತಾರ್ ಮತ್ತು ಮರಳು ದಂಧೆಕೋರ ಶಾಫಿ ನಂದಾವರ ಸೇರಿಕೊಂಡು ಮುಮ್ತಾಜ್ ಆಲಿಯವರನ್ನು ಹಣಕ್ಕಾಗಿ ಬ್ಲಾಕ್ಮೇಲ್ ಮಾಡಲು ತೊಡಗಿದ್ದರು. ಕಳೆದ 3-4 ತಿಂಗಳಿನಿಂದ 50 ಲಕ್ಷಕ್ಕೂ ಹೆಚ್ಚು ದುಡ್ಡನ್ನು ಪೀಕಿಸಿಕೊಂಡಿರುವ ಈ ತಂಡವು, ಎರಡು ಕೋಟಿ ಹಣಕ್ಕಾಗಿ ಡಿಮ್ಯಾಂಡ್ ಇಟ್ಟಿತ್ತು.

ಇದಲ್ಲದೆ, ಮುಮ್ತಾಜ್ ಆಲಿ ತನ್ನ ಮಗುವಿನ ಜೊತೆಗೆ ಆಟವಾಡುತ್ತಿದ್ದ ವಿಡಿಯೋವನ್ನು ಮಾಡಿ, ಆರೋಪಿಗಳು ಆಲಿಯವರ ಕುಟುಂಬಸ್ಥರಿಗೆ ಕಳಿಸತೊಡಗಿದ್ದರು. ಈ ವಿಡಿಯೋ ಕಾರಣದಿಂದ ಮುಮ್ತಾಜ್ ಆಲಿ ತನ್ನ ಕುಟುಂಬಸ್ಥರ ನಡುವೆ ನಿಂದನೆಗೆ ಒಳಗಾಗಿದ್ದರು. ಇದೇ ಹಿಂಸೆಯಿಂದಾಗಿ ಮುಮ್ತಾಜ್ ಆಲಿ ಸಾಯಲು ಮುಂದಾಗಿದ್ದು ಮೊನ್ನೆ ನಡುರಾತ್ರಿಯೇ ಮನೆ ಬಿಟ್ಟು ಬಂದಿದ್ದರು. ಇದೇ ಹಿಂಸೆಯಿಂದ ನಸುಕಿನ ಹೊತ್ತಿಗೆ ಕಾರನ್ನು ಕುಳೂರಿನ ಸೇತುವೆಯಲ್ಲಿ ಬಿಟ್ಟು ನದಿಗೆ ಹಾರಿ ದುರಂತ ಸಾವಿಗೀಡಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯಕ್ಕೆ ಆರು ಮಂದಿ ಬ್ಲಾಕ್ಮೇಲರ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಉಳಿದವರ ಪತ್ತೆಗಾಗಿ ಬಲೆ ಬೀಸಿದ್ದಾರೆ.
Mangalore Mumtaz Ali suicide, three including Blackmailer woman her husband arrested, search for prime accused.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm