ಬ್ರೇಕಿಂಗ್ ನ್ಯೂಸ್
11-12-20 01:18 pm Mangalore Correspondent ಕರಾವಳಿ
ಮಂಗಳೂರು, ಡಿ.11: ಕೆಎಸ್ಸಾರ್ಟಿಸಿ ಬಸ್ ನೌಕರರ ಮುಷ್ಕರದ ಬಿಸಿ ಕರಾವಳಿಗೆ ತಟ್ಟಿಲ್ಲ. ಮಂಗಳೂರು ಮತ್ತು ಉಡುಪಿಯಲ್ಲಿ ಬಸ್ ಸಂಚಾರ ಎಂದಿನಂತಿದ್ದು ಸಾರ್ವಜನಿಕರು ನಿರಾಳವಾಗಿದ್ದಾರೆ.
ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಎರಡು ದಿನಗಳಿಂದ ಸಿಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ವಿಧಾನಸೌಧಕ್ಕೆ ಮುತ್ತಿಗೆ ಯತ್ನ ನಡೆದಿತ್ತು. ಸರಕಾರ ಮಾತ್ರ, ಸಿಬಂದಿಯ ಬೇಡಿಕೆಯನ್ನು ಪರಿಗಣಿಸಿಲ್ಲ. ಸರಕಾರಕ್ಕೆ ಬಿಸಿ ಮುಟ್ಟಿಸಲು ಕಾರ್ಮಿಕರ ಯೂನಿಯನ್, ಇಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಆದರೆ, ಇವತ್ತಿನ ಮುಷ್ಕರಕ್ಕೆ ಎಐಟಿಯುಸಿ ಬೆಂಬಲಿತರು ಬೆಂಬಲ ನೀಡಿಲ್ಲ. ಹೀಗಾಗಿ ಕರಾವಳಿಯಲ್ಲಿ ಬಹುತೇಕ ಸರಕಾರಿ ಬಸ್ ಗಳ ಸಂಚಾರ ಯಥಾಸ್ಥಿತಿ ಇದ್ದು ಸಿಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮಂಗಳೂರು, ಪುತ್ತೂರು, ಧರ್ಮಸ್ಥಳ ಡಿಪೋದಿಂದ ಶುಕ್ರವಾರ ಬೆಳಗ್ಗೆಯಿಂದ ರಾಜ್ಯದ ವಿವಿಧ ಕಡೆಗಳಿಗೆ ಬಸ್ ಗಳು ಸಂಚಾರ ನಡೆಸುತ್ತಿವೆ. ಸಾರಿಗೆ ನೌಕರರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಕೆಎಸ್ ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಉಳಿದಂತೆ ಉಡುಪಿ, ಕುಂದಾಪುರ ಕೇಂದ್ರಗಳಲ್ಲೂ ಬಸ್ ಸಂಚಾರ ವ್ಯತ್ಯಯ ಆಗಿಲ್ಲ. ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮುಷ್ಕರಕ್ಕೆ ರೈತ ಸಂಘಟನೆಗಳು ಬೆಂಬಲಿಸಿದ್ದು ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಹಾಜರಾಗಿದ್ದಾರೆ. ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಕೆಎಸ್ಸಾರ್ಟಿಸಿ ಅಧಿಕಾರಿಗಳು ಮತ್ತು ಸಿಬಂದಿ ಯೂನಿಯನ್ ಜೊತೆ ಮಾತುಕತೆ ನಡೆಸಿದ್ದಾರೆ. ಈಗಿನ ಸನ್ನಿವೇಶದಲ್ಲಿ ಆ ಬೇಡಿಕೆಯನ್ನು ಈಡೇರಿಸಲು ಆಗದು ಎಂದು ಹೇಳಿದ್ದಾರೆ.
ಗುರುವಾರ ಸಾವಿರಾರು ಸಂಖ್ಯೆಯಲ್ಲಿ ಬಸ್ ನೌಕರರು ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ್ದರು. ಆದರೆ ಅವರನ್ನು ಅರ್ಧದಲ್ಲೇ ತಡೆದ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದರು. ಬಸ್ ಸಿಬಂದಿಯ ಮುಷ್ಕರದ ಮಾಹಿತಿ ಇಲ್ಲದೆ ಪ್ರಯಾಣಿಕರು ಕೆಲವು ಕಡೆ ಪರದಾಡುವ ಪರಿಸ್ಥಿತಿ ಹಲವೆಡೆ ಉಂಟಾಗಿದೆ.
Bus strike of KSRTC in Karnataka, Mangalore gets no support. Buses move as usual creating no impact.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm