ಬ್ರೇಕಿಂಗ್ ನ್ಯೂಸ್
11-12-20 01:18 pm Mangalore Correspondent ಕರಾವಳಿ
ಮಂಗಳೂರು, ಡಿ.11: ಕೆಎಸ್ಸಾರ್ಟಿಸಿ ಬಸ್ ನೌಕರರ ಮುಷ್ಕರದ ಬಿಸಿ ಕರಾವಳಿಗೆ ತಟ್ಟಿಲ್ಲ. ಮಂಗಳೂರು ಮತ್ತು ಉಡುಪಿಯಲ್ಲಿ ಬಸ್ ಸಂಚಾರ ಎಂದಿನಂತಿದ್ದು ಸಾರ್ವಜನಿಕರು ನಿರಾಳವಾಗಿದ್ದಾರೆ.
ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಎರಡು ದಿನಗಳಿಂದ ಸಿಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ವಿಧಾನಸೌಧಕ್ಕೆ ಮುತ್ತಿಗೆ ಯತ್ನ ನಡೆದಿತ್ತು. ಸರಕಾರ ಮಾತ್ರ, ಸಿಬಂದಿಯ ಬೇಡಿಕೆಯನ್ನು ಪರಿಗಣಿಸಿಲ್ಲ. ಸರಕಾರಕ್ಕೆ ಬಿಸಿ ಮುಟ್ಟಿಸಲು ಕಾರ್ಮಿಕರ ಯೂನಿಯನ್, ಇಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಆದರೆ, ಇವತ್ತಿನ ಮುಷ್ಕರಕ್ಕೆ ಎಐಟಿಯುಸಿ ಬೆಂಬಲಿತರು ಬೆಂಬಲ ನೀಡಿಲ್ಲ. ಹೀಗಾಗಿ ಕರಾವಳಿಯಲ್ಲಿ ಬಹುತೇಕ ಸರಕಾರಿ ಬಸ್ ಗಳ ಸಂಚಾರ ಯಥಾಸ್ಥಿತಿ ಇದ್ದು ಸಿಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮಂಗಳೂರು, ಪುತ್ತೂರು, ಧರ್ಮಸ್ಥಳ ಡಿಪೋದಿಂದ ಶುಕ್ರವಾರ ಬೆಳಗ್ಗೆಯಿಂದ ರಾಜ್ಯದ ವಿವಿಧ ಕಡೆಗಳಿಗೆ ಬಸ್ ಗಳು ಸಂಚಾರ ನಡೆಸುತ್ತಿವೆ. ಸಾರಿಗೆ ನೌಕರರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಕೆಎಸ್ ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಉಳಿದಂತೆ ಉಡುಪಿ, ಕುಂದಾಪುರ ಕೇಂದ್ರಗಳಲ್ಲೂ ಬಸ್ ಸಂಚಾರ ವ್ಯತ್ಯಯ ಆಗಿಲ್ಲ. ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮುಷ್ಕರಕ್ಕೆ ರೈತ ಸಂಘಟನೆಗಳು ಬೆಂಬಲಿಸಿದ್ದು ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಹಾಜರಾಗಿದ್ದಾರೆ. ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಕೆಎಸ್ಸಾರ್ಟಿಸಿ ಅಧಿಕಾರಿಗಳು ಮತ್ತು ಸಿಬಂದಿ ಯೂನಿಯನ್ ಜೊತೆ ಮಾತುಕತೆ ನಡೆಸಿದ್ದಾರೆ. ಈಗಿನ ಸನ್ನಿವೇಶದಲ್ಲಿ ಆ ಬೇಡಿಕೆಯನ್ನು ಈಡೇರಿಸಲು ಆಗದು ಎಂದು ಹೇಳಿದ್ದಾರೆ.
ಗುರುವಾರ ಸಾವಿರಾರು ಸಂಖ್ಯೆಯಲ್ಲಿ ಬಸ್ ನೌಕರರು ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ್ದರು. ಆದರೆ ಅವರನ್ನು ಅರ್ಧದಲ್ಲೇ ತಡೆದ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದರು. ಬಸ್ ಸಿಬಂದಿಯ ಮುಷ್ಕರದ ಮಾಹಿತಿ ಇಲ್ಲದೆ ಪ್ರಯಾಣಿಕರು ಕೆಲವು ಕಡೆ ಪರದಾಡುವ ಪರಿಸ್ಥಿತಿ ಹಲವೆಡೆ ಉಂಟಾಗಿದೆ.
Bus strike of KSRTC in Karnataka, Mangalore gets no support. Buses move as usual creating no impact.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm