ಬ್ರೇಕಿಂಗ್ ನ್ಯೂಸ್
11-12-20 01:18 pm Mangalore Correspondent ಕರಾವಳಿ
ಮಂಗಳೂರು, ಡಿ.11: ಕೆಎಸ್ಸಾರ್ಟಿಸಿ ಬಸ್ ನೌಕರರ ಮುಷ್ಕರದ ಬಿಸಿ ಕರಾವಳಿಗೆ ತಟ್ಟಿಲ್ಲ. ಮಂಗಳೂರು ಮತ್ತು ಉಡುಪಿಯಲ್ಲಿ ಬಸ್ ಸಂಚಾರ ಎಂದಿನಂತಿದ್ದು ಸಾರ್ವಜನಿಕರು ನಿರಾಳವಾಗಿದ್ದಾರೆ.
ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಎರಡು ದಿನಗಳಿಂದ ಸಿಬಂದಿ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ ವಿಧಾನಸೌಧಕ್ಕೆ ಮುತ್ತಿಗೆ ಯತ್ನ ನಡೆದಿತ್ತು. ಸರಕಾರ ಮಾತ್ರ, ಸಿಬಂದಿಯ ಬೇಡಿಕೆಯನ್ನು ಪರಿಗಣಿಸಿಲ್ಲ. ಸರಕಾರಕ್ಕೆ ಬಿಸಿ ಮುಟ್ಟಿಸಲು ಕಾರ್ಮಿಕರ ಯೂನಿಯನ್, ಇಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಆದರೆ, ಇವತ್ತಿನ ಮುಷ್ಕರಕ್ಕೆ ಎಐಟಿಯುಸಿ ಬೆಂಬಲಿತರು ಬೆಂಬಲ ನೀಡಿಲ್ಲ. ಹೀಗಾಗಿ ಕರಾವಳಿಯಲ್ಲಿ ಬಹುತೇಕ ಸರಕಾರಿ ಬಸ್ ಗಳ ಸಂಚಾರ ಯಥಾಸ್ಥಿತಿ ಇದ್ದು ಸಿಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮಂಗಳೂರು, ಪುತ್ತೂರು, ಧರ್ಮಸ್ಥಳ ಡಿಪೋದಿಂದ ಶುಕ್ರವಾರ ಬೆಳಗ್ಗೆಯಿಂದ ರಾಜ್ಯದ ವಿವಿಧ ಕಡೆಗಳಿಗೆ ಬಸ್ ಗಳು ಸಂಚಾರ ನಡೆಸುತ್ತಿವೆ. ಸಾರಿಗೆ ನೌಕರರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಕೆಎಸ್ ಆರ್ ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಉಳಿದಂತೆ ಉಡುಪಿ, ಕುಂದಾಪುರ ಕೇಂದ್ರಗಳಲ್ಲೂ ಬಸ್ ಸಂಚಾರ ವ್ಯತ್ಯಯ ಆಗಿಲ್ಲ. ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಮುಷ್ಕರಕ್ಕೆ ರೈತ ಸಂಘಟನೆಗಳು ಬೆಂಬಲಿಸಿದ್ದು ಬೆಂಗಳೂರಿನಲ್ಲಿ ಪ್ರತಿಭಟನೆಯಲ್ಲಿ ಹಾಜರಾಗಿದ್ದಾರೆ. ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಕೆಎಸ್ಸಾರ್ಟಿಸಿ ಅಧಿಕಾರಿಗಳು ಮತ್ತು ಸಿಬಂದಿ ಯೂನಿಯನ್ ಜೊತೆ ಮಾತುಕತೆ ನಡೆಸಿದ್ದಾರೆ. ಈಗಿನ ಸನ್ನಿವೇಶದಲ್ಲಿ ಆ ಬೇಡಿಕೆಯನ್ನು ಈಡೇರಿಸಲು ಆಗದು ಎಂದು ಹೇಳಿದ್ದಾರೆ.
ಗುರುವಾರ ಸಾವಿರಾರು ಸಂಖ್ಯೆಯಲ್ಲಿ ಬಸ್ ನೌಕರರು ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ್ದರು. ಆದರೆ ಅವರನ್ನು ಅರ್ಧದಲ್ಲೇ ತಡೆದ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದರು. ಬಸ್ ಸಿಬಂದಿಯ ಮುಷ್ಕರದ ಮಾಹಿತಿ ಇಲ್ಲದೆ ಪ್ರಯಾಣಿಕರು ಕೆಲವು ಕಡೆ ಪರದಾಡುವ ಪರಿಸ್ಥಿತಿ ಹಲವೆಡೆ ಉಂಟಾಗಿದೆ.
Bus strike of KSRTC in Karnataka, Mangalore gets no support. Buses move as usual creating no impact.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm