ಬ್ರೇಕಿಂಗ್ ನ್ಯೂಸ್
09-10-24 03:18 pm Mangalore Correspondent ಕರಾವಳಿ
ಮಂಗಳೂರು, ಅ.9: ಪಾವೂರು ಉಳಿಯ ದ್ವೀಪದ ಮರಳುಗಾರಿಕೆ ವಿರುದ್ಧ ಹೋರಾಟದ ದನಿ ಎಬ್ಬಿಸಿದ್ದ ಕೆಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಅವರಿಗೆ ಹಲ್ಲೆಗೈದು ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕಂಕನಾಡಿ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಫರಂಗಿಪೇಟೆ ನಿವಾಸಿ ಮೊಹಮ್ಮದ್ ಅತಾವುಲ್ಲಾ (40) ಹಾಗೂ ಪಾಂಡೇಶ್ವರ ಠಾಣೆ ವ್ಯಾಪ್ತಿಯ ಮಾರ್ನಮಿಕಟ್ಟೆ ನಿವಾಸಿ ತೌಸೀರ್ ಅಲಿಯಾಸ್ ಪತ್ತೊಂಜಿ ತೌಸಿರ್ (31) ಬಂಧಿತರು. ನೇತ್ರಾವತಿ ನದಿಯಲ್ಲಿ ಪಾವೂರು ಉಳಿಯ ದ್ವೀಪದ ಸುತ್ತ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಕೆಥೋಲಿಕ್ ಸಭಾ ನೇತೃತ್ವದಲ್ಲಿ ಸೆಪ್ಟೆಂಬರ್ 29ರಂದು ಪ್ರತಿಭಟನೆ ನಡೆದಿತ್ತು.


ಈ ಬಗ್ಗೆ ಪತ್ರಕರ್ತೆಯೊಬ್ಬರು ವರದಿ ಮಾಡುವುದಕ್ಕಾಗಿ ಅ.5ರಂದು ಅಲ್ವಿನ್ ಡಿಸೋಜ ಜೊತೆಗೆ ಪಾವೂರು ಉಳಿಯ ದ್ವೀಪದ ಸ್ಥಳಕ್ಕೆ ಬಂದಿದ್ದಾಗ, ಅಡ್ಯಾರ್ ಸೇತುವೆ ಬಳಿ ಅಡ್ಡಹಾಕಿದ್ದ ಮರಳು ದಂಧೆ ನಡೆಸುತ್ತಿದ್ದವರ ಪರವಾದ ಗುಂಪು ಆಲ್ವಿನ್ ಡಿಸೋಜ ಮೇಲೆ ಹಲ್ಲೆ ನಡೆಸಿತ್ತು. ಹಲ್ಲೆಗೀಡಾದ ಅಲ್ವಿನ್ ಡಿಸೋಜ ಆಸ್ಪತ್ರೆಗೆ ದಾಖಲಾಗಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು.
ಆರೋಪಿ ಅತಾವುಲ್ಲಾ, ಅಲ್ವಿನ್ ಡಿಸೋಜರಿಗೆ ಅವಾಚ್ಯವಾಗಿ ಬೈದು ಹಲ್ಲೆಗೆ ಪ್ರಚೋದನೆ ನೀಡಿದ್ದ. ಆರೋಪಿ ತೌಸಿರ್ ಬೈದು ಹಲ್ಲೆ ಮಾಡಿದ್ದ ಎಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸದಿದ್ದರೆ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುವುದಾಗಿ ಕೆಥೋಲಿಕ್ ಸಭಾದಿಂದ ಎಚ್ಚರಿಕೆ ನೀಡಲಾಗಿತ್ತು.
Attack on President of Catholic Sabha Alwyn DSouza in Mangalore, two arrested by police. Alwyn was allegedly attacked by sand miners near Harekala bridge on Saturday, October 5. A police communique said Mr. D’Souza was attacked at about 3 p.m. on Saturday when he with one Vijaylaxmi Shibrur and videographers were visiting a place near Harekala bridge.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm