ಬ್ರೇಕಿಂಗ್ ನ್ಯೂಸ್
09-10-24 03:18 pm Mangalore Correspondent ಕರಾವಳಿ
ಮಂಗಳೂರು, ಅ.9: ಪಾವೂರು ಉಳಿಯ ದ್ವೀಪದ ಮರಳುಗಾರಿಕೆ ವಿರುದ್ಧ ಹೋರಾಟದ ದನಿ ಎಬ್ಬಿಸಿದ್ದ ಕೆಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಅವರಿಗೆ ಹಲ್ಲೆಗೈದು ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಕಂಕನಾಡಿ ಗ್ರಾಮಾಂತರ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಫರಂಗಿಪೇಟೆ ನಿವಾಸಿ ಮೊಹಮ್ಮದ್ ಅತಾವುಲ್ಲಾ (40) ಹಾಗೂ ಪಾಂಡೇಶ್ವರ ಠಾಣೆ ವ್ಯಾಪ್ತಿಯ ಮಾರ್ನಮಿಕಟ್ಟೆ ನಿವಾಸಿ ತೌಸೀರ್ ಅಲಿಯಾಸ್ ಪತ್ತೊಂಜಿ ತೌಸಿರ್ (31) ಬಂಧಿತರು. ನೇತ್ರಾವತಿ ನದಿಯಲ್ಲಿ ಪಾವೂರು ಉಳಿಯ ದ್ವೀಪದ ಸುತ್ತ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಕೆಥೋಲಿಕ್ ಸಭಾ ನೇತೃತ್ವದಲ್ಲಿ ಸೆಪ್ಟೆಂಬರ್ 29ರಂದು ಪ್ರತಿಭಟನೆ ನಡೆದಿತ್ತು.


ಈ ಬಗ್ಗೆ ಪತ್ರಕರ್ತೆಯೊಬ್ಬರು ವರದಿ ಮಾಡುವುದಕ್ಕಾಗಿ ಅ.5ರಂದು ಅಲ್ವಿನ್ ಡಿಸೋಜ ಜೊತೆಗೆ ಪಾವೂರು ಉಳಿಯ ದ್ವೀಪದ ಸ್ಥಳಕ್ಕೆ ಬಂದಿದ್ದಾಗ, ಅಡ್ಯಾರ್ ಸೇತುವೆ ಬಳಿ ಅಡ್ಡಹಾಕಿದ್ದ ಮರಳು ದಂಧೆ ನಡೆಸುತ್ತಿದ್ದವರ ಪರವಾದ ಗುಂಪು ಆಲ್ವಿನ್ ಡಿಸೋಜ ಮೇಲೆ ಹಲ್ಲೆ ನಡೆಸಿತ್ತು. ಹಲ್ಲೆಗೀಡಾದ ಅಲ್ವಿನ್ ಡಿಸೋಜ ಆಸ್ಪತ್ರೆಗೆ ದಾಖಲಾಗಿ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು.
ಆರೋಪಿ ಅತಾವುಲ್ಲಾ, ಅಲ್ವಿನ್ ಡಿಸೋಜರಿಗೆ ಅವಾಚ್ಯವಾಗಿ ಬೈದು ಹಲ್ಲೆಗೆ ಪ್ರಚೋದನೆ ನೀಡಿದ್ದ. ಆರೋಪಿ ತೌಸಿರ್ ಬೈದು ಹಲ್ಲೆ ಮಾಡಿದ್ದ ಎಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಆರೋಪಿಗಳನ್ನು 24 ಗಂಟೆಯಲ್ಲಿ ಬಂಧಿಸದಿದ್ದರೆ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುವುದಾಗಿ ಕೆಥೋಲಿಕ್ ಸಭಾದಿಂದ ಎಚ್ಚರಿಕೆ ನೀಡಲಾಗಿತ್ತು.
Attack on President of Catholic Sabha Alwyn DSouza in Mangalore, two arrested by police. Alwyn was allegedly attacked by sand miners near Harekala bridge on Saturday, October 5. A police communique said Mr. D’Souza was attacked at about 3 p.m. on Saturday when he with one Vijaylaxmi Shibrur and videographers were visiting a place near Harekala bridge.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm