ಬ್ರೇಕಿಂಗ್ ನ್ಯೂಸ್
09-10-24 07:04 pm Mangalore Correspondent ಕರಾವಳಿ
ಮಂಗಳೂರು, ಅ.9: ಪಾವೂರು ಉಳಿಯ ಕುದ್ರು ಪರಿಸರದಲ್ಲಿ ವಾಸಿಸುತ್ತಿರುವ ನಾಗರಿಕರಿಗೆ, ಪರಿಸರಕ್ಕೆ ಹಾಗೂ ಇತರೇ ಸಂಪನ್ಮೂಲಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮತ್ತು ಅಕ್ರಮ ಗಣಿಗಾರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಉಳಿಯ ದ್ವೀಪದ ಸುತ್ತಮುತ್ತಲಿನ ಎರಡು ಕಿಮೀ ವ್ಯಾಪ್ತಿಯ ಪ್ರದೇಶದಲ್ಲಿ ಎಲ್ಲಾ ರೀತಿಯ ಮರಳುಗಾರಿಕೆಯನ್ನು ನಿಷೇಧಿಸಿ ಮಂಗಳೂರು ಉಪ ವಿಭಾಗಾಧಿಕಾರಿ ಹರ್ಷವರ್ಧನ್ ಆದೇಶ ಹೊರಡಿಸಿದ್ದಾರೆ.
ಕೆಥೋಲಿಕ್ ಸಭಾ ವತಿಯಿಂದ ನಿರಂತರ ಪ್ರತಿಭಟನೆ, ಮಾಧ್ಯಮಗಳ ವರದಿ ಬೆನ್ನಲ್ಲೇ ಜಿಲ್ಲಾಡಳಿತ ಎಚ್ಚತ್ತುಕೊಂಡಿದೆ. ಈ ಹಿಂದೆ 2015ರಲ್ಲಿ ಎ.ಬಿ. ಇಬ್ರಾಹಿಂ ಜಿಲ್ಲಾಧಿಕಾರಿ ಆಗಿದ್ದಾಗ ಪಾವೂರು ಉಳಿಯ ದ್ವೀಪದ ಸುತ್ತ ಮರಳುಗಾರಿಕೆ ನಿಷೇಧ ಮಾಡಿದ್ದರು. ಆದರೆ ಆನಂತರ, ಹೈಕೋರ್ಟ್ ಮೂಲಕ ಮರಳು ದಂಧೆಕೋರರು ಜಿಲ್ಲಾಡಳಿತದ ಆದೇಶವನ್ನು ರದ್ದುಪಡಿಸುವಂತೆ ಮಾಡಿದ್ದರು.
ಈಗ ಹೊರಡಿಸಿರುವ ಆದೇಶದಲ್ಲಿ, ನಿಷೇಧಿತ ಪ್ರದೇಶ ವ್ಯಾಪ್ತಿಯಲ್ಲಿ ಸಂಚಾರ ದೋಣಿಗಳ ಹೊರತಾಗಿ ಇತರೆ ಎಲ್ಲಾ ದೋಣಿ ಅಥವಾ ಯಂತ್ರಗಳ ಮೂಲಕ ಮರಳು ಉತ್ಪನ್ನದ ಸಾಗಾಟ ಮಾಡುವುದನ್ನು ನಿಷೇಧಿಸಲಾಗಿದೆ. ಅನಧಿಕೃತ ದಕ್ಕೆಗಳಲ್ಲಿ ಮರಳು ಶೇಖರಿಸುವುದನ್ನು ಮತ್ತು ವಾಹನಗಳಿಗೆ ಮರಳು ಹಂಚುವುದನ್ನು ಕೂಡ ತಕ್ಷಣದಿಂದ ನಿಷೇಧಿಸಲಾಗಿದೆ.
1) ಅಡ್ಯಾರು ಗ್ರಾಮದ ವಲಚ್ಚಿಲ್ ದಕ್ಕೆ, 2) ಅಡ್ಯಾರು ಗ್ರಾಮ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಹಿಂಭಾಗದ ದಕ್ಕೆ, 3) ನದಿಯ ದ್ವೀಪದ ಎಡಭಾಗದಲ್ಲಿರುವ ಪಾವೂರು ದಕ್ಕೆ ಮರಳುಗಾರಿಕೆಗೆ ನಿಷೇಧಿತ ಪ್ರದೇಶವಾಗಿದೆ.
ನಿಷೇಧಾಜ್ಞೆಯನ್ನು ಉಲ್ಲಂಘಿಸುವ ಯಾವುದೇ ಪ್ರಕರಣಗಳು ಗಮನಕ್ಕೆ ಬಂದಲ್ಲಿ ಸಂಬಂಧಿಸಿದವರ ವಿರುದ್ಧ ನಿಯಾಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆದೇಶದಲ್ಲಿ ಎಚ್ಚರಿಸಲಾಗಿದೆ.
uliya after protest. Members of Catholic Sabha, Mangaluru, and other pro-people organisations took out a marched protesting unabated illegal extraction of sand from the Netravathi riverbed thereby threatening the existence of Pavoor-Uliya Kudru (river island) on Friday, September 27.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
19-09-25 05:45 pm
HK News Desk
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm