ಬ್ರೇಕಿಂಗ್ ನ್ಯೂಸ್
09-10-24 10:22 pm Mangalore Correspondent ಕರಾವಳಿ
ಮಂಗಳೂರು, ಅ.9: ಉಪನ್ಯಾಸಕ ಅರುಣ್ ಉಳ್ಳಾಲ್ ಅವರು ಹಿಂದುಗಳ ಶಿಕ್ಷಣ ಕೇಂದ್ರದಲ್ಲಿ ಶಿಕ್ಷಣ ಪಡೆಯಬೇಕು, ಹಿಂದು ದೇವಸ್ಥಾನ, ಇನ್ನಿತರ ಸಭಾಂಗಣಗಳನ್ನೇ ಬಳಸಬೇಕು, ಹಿಂದು ಸಂಸ್ಕೃತಿಯನ್ನೇ ಅಳವಡಿಸಿಕೊಳ್ಳಬೇಕು ಎಂದು ಹೇಳಿರುವುದು ಯಾವ ಕೋನದಲ್ಲಿ ಅಪರಾಧವಾಗುತ್ತದೆ ಎಂದು ಪೊಲೀಸ್ ಕಮಿಷನರ್ ಹೇಳಬೇಕು. ಪೊಲೀಸರು ತಾಕತ್ತಿದ್ದರೆ ಬಾಂಗ್ಲಾ ರೀತಿಯಲ್ಲಿ ರಾಜ್ಯಪಾಲರನ್ನು ಓಡಿಸುತ್ತೇವೆಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಐವಾನ್ ಡಿಸೋಜ ವಿರುದ್ಧ ಸುಮೊಟೋ ಕೇಸು ದಾಖಲಿಸಲಿ ಎಂದು ಹಿಂದು ಜಾಗರಣ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯ ಶ್ರೀಕಾಂತ ಶೆಟ್ಟಿ ಪ್ರಶ್ನೆ ಮಾಡಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಅರುಣ್ ಉಳ್ಳಾಲ್ ಅವರು ವಾರಕ್ಕೊಮ್ಮೆ ಮಕ್ಕಳಿಗೆ ಹಿಂದು ಸಂಸ್ಕೃತಿ ಹೇಳಿಕೊಡುವ ಕೆಲಸ ಮಾಡುತ್ತಿದ್ದಾರೆ. ಆ ಕಾರಣಕ್ಕೆ ಕ್ರಿಶ್ಚಿಯನ್, ಕಮ್ಯುನಿಸ್ಟ್ ಶಕ್ತಿಗಳು ಟಾರ್ಗೆಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಅಪರಾಧ ಹಿನ್ನೆಲೆ ಇಲ್ಲದೆ, ಒಬ್ಬ ಪಿಎಚ್ ಡಿ ಮಾಡಿರುವ ಕವಿ, ಸೃಜನಶೀಲ ವ್ಯಕ್ತಿಯನ್ನು ಪೊಲೀಸರು ಆರೋಪಿ ಮಾಡಿದ್ದಾರೆ. ಇದಕ್ಕೆ ಸೋಕಾಲ್ಡ್ ಕಮ್ಯುನಿಸ್ಟ್ ಧೋರಣೆಯ ವ್ಯಕ್ತಿಗಳು, ಕ್ರಿಶ್ಚಿಯನ್ ಮಾನಸಿಕತೆ ಕಾರಣ. ಜಾತ್ಯತೀತ ವ್ಯವಸ್ಥೆಯನ್ನು ಹಿಂದುಗಳ ಮೇಲೆ ಹೇರಲು ಹೊರಟಿರುವವರು, ಆಗ್ನೆಸ್ ಕಾಲೇಜಿನಲ್ಲಿ ತಮ್ಮದೇ ಸಮುದಾಯದವರಿದ್ದಾರೆಂದು ಅರುಣ್ ಉಳ್ಳಾಲ್ ಅವರನ್ನು ಹುದ್ದೆಯಿಂದ ನಿರಾಕರಣೆ ಮಾಡಿದ್ದರು. ಆ ಕಾರಣಕ್ಕೆ ಆರು ತಿಂಗಳ ಹಿಂದೆಯೇ ಅರುಣ್ ತಮ್ಮ ಕೆಲಸಕ್ಕೆ ರಾಜಿನಾಮೆ ನೀಡಿದ್ದರು. ಇವರು ಹೇಳಿದ ಹಾಗೆ, ಈಗ ಅವರನ್ನು ತೆಗೆದುಹಾಕಿದ್ದಲ್ಲ.
ಕರಾವಳಿಯಲ್ಲಿ ಹಿಂದು ಸಂಘಟನೆಯ ಬಲ ಮುರಿಯುವುದಕ್ಕಾಗಿ ಕಮ್ಯುನಿಸ್ಟ್ ಐಡಿಯಾಲಜಿ, ಕ್ರಿಶ್ಚಿಯನ್ನರ ಮನಿ ಪವರ್ ಮತ್ತು ಇಸ್ಲಾಮಿಕ್ ಜಿಹಾದಿಗಳ ಮ್ಯಾನ್ ಪವರ್ ಬಳಸಿಕೊಂಡು ತಮ್ಮನ್ನು ತಾವು ಕಮ್ಯುನಿಸ್ಟ್ ಎಂದು ಹೇಳಿಕೊಳ್ಳುವವರು ಕೆಲಸ ಮಾಡುತ್ತಿದ್ದಾರೆ. ವಾರಕ್ಕೊಮ್ಮೆ ಇಲ್ಲಿ ಸಭೆಗಳನ್ನು ನಡೆಸುತ್ತಿದ್ದಾರೆ. ಇದೊಂದು ವ್ಯವಸ್ಥಿತ ಷಡ್ಯಂತ್ರ ಎನ್ನುವುದು ನಮ್ಮ ಅರಿವಿಗೆ ಬಂದಿದೆ. ಹಿಂದುಗಳನ್ನು, ಹಿಂದು ಸಂಘಟನೆಗಳನ್ನು ಮಾತ್ರ ಟಾರ್ಗೆಟ್ ಮಾಡಿರುವುದು ಇವರ ಅಜೆಂಡಾವನ್ನು ತೋರಿಸುತ್ತದೆ. ಇದಕ್ಕೆ ಪ್ರತಿಯಾಗಿ, ನಾವು ಕೂಡ ಹಿಂದುಗಳನ್ನು ಜನಜಾಗೃತಿ ಮಾಡುವ ಕೆಲಸ ಮಾಡುತ್ತೇವೆ ಎಂದು ಶ್ರೀಕಾಂತ್ ಶೆಟ್ಟಿ ಹೇಳಿದರು. ಸುದ್ದಿಗೋಷ್ಟಿಯಲ್ಲಿ ನರಸಿಂಹ ಮಾಣಿ, ಪ್ರವೀಣ್ ಬಂಟ್ವಾಳ ಮತ್ತಿತರರು ಇದ್ದರು.
Shrikanth Shetty slams mangalore police commissioner over booking case against Arun Ullal. Shrikanth Shetty slams mangalore police commissioner over booking case against Arun Ullal.
08-11-25 10:29 pm
Bangalore Correspondent
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm