ಬ್ರೇಕಿಂಗ್ ನ್ಯೂಸ್
09-10-24 10:52 pm Mangalore Correspondent ಕರಾವಳಿ
ಮಂಗಳೂರು, ಅ.9: ಮಂಗಳೂರು – ಬೆಂಗಳೂರು ಸಂಚರಿಸುವ ಹೆದ್ದಾರಿಯ ಶಿರಾಡಿ ಘಾಟ್, ಕಲ್ಲಡ್ಕ ಹೇಗೂ ದುರವಸ್ಥೆ ಆಗಿಹೋಗಿದೆ. ಯಾವುದೇ ರಸ್ತೆ ಮಾಡುವುದಿದ್ದರೂ, ತಾತ್ಕಾಲಿಕ ವ್ಯವಸ್ಥೆ ಮಾಡಿದ ಮೇಲಷ್ಟೇ ಕಾಮಗಾರಿ ಮಾಡಿ ಎಂದರೆ, ಅಧಿಕಾರಸ್ಥರ ಕಿವಿ ತಲುಪುತ್ತಿಲ್ಲ. ಈಗ ಅಳಿದುಳಿದ ಹೆದ್ದಾರಿಯ ಸ್ಥಿತಿಯೂ ಶೋಚನೀಯ ಎನ್ನುವಂತಾಗಿದೆ. ಮಂಗಳೂರು ನಗರದ ಪಡೀಲ್, ಅಡ್ಯಾರಿನಲ್ಲಿ ಬಿದ್ದಿರುವ ಗುಂಡಿಗಳು ಯಾರದ್ದೋ ಬಲಿಗಾಗಿ ಕಾದಿರುವಂತೆ ಭಾಸವಾಗುತ್ತಿವೆ.
ಪಡೀಲ್ ಹೆದ್ದಾರಿಯ ರೈಲ್ವೇ ಸೇತುವೆ ಎದುರಲ್ಲೇ ದೊಡ್ಡ ದೊಡ್ಡ ಗುಂಡಿಗಳು ಬಾಯ್ದೆರೆದು ನಿಂತಿವೆ. ಹೆದ್ದಾರಿ ನಡುವಲ್ಲಿ ಮತ್ತು ಬದಿಯಲ್ಲಿ ಉದ್ದಕ್ಕೂ ಗುಂಡಿಗಳು ಬಿದ್ದರೂ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಿದ್ದೆಯಲ್ಲಿದ್ದಾರೆ. ಪಡೀಲಿನ ಫಸ್ಟ್ ನ್ಯೂರೋ ಆಸ್ಪತ್ರೆ ಮುಂಭಾಗ, ಜೆಸಿಬಿ ಶೋರೂಮ್ ಶಾಪ್ ಎದುರಿನ ಭಾಗದಲ್ಲಿ ಹೊಂಡಗಳು ಉಂಟಾಗಿವೆ. ಮಳೆಯಿಂದಾಗಿ ಇದರಲ್ಲಿ ನೀರು ನಿಲ್ಲುವ ಸಂದರ್ಭದಲ್ಲಿ ದ್ವಿಚಕ್ರ ವಾಹನಗಳು ಇದರ ಆಳ ಅರಿವಿಲ್ಲದೆ ಗುಂಡಿಗೆ ಬಿದ್ದರೆ, ಮತ್ತೆ ಏಳಲಾಗದೆ ದೊಡ್ಡ ವಾಹನಗಳ ಅಡಿಗೆ ಸಿಲುಕುವ ಸಾಧ್ಯತೆಯಿದೆ.








ಈ ನಡುವೆ, ಮತ್ತೆ ಮಳೆಯ ಮುನ್ಸೂಚನೆ ಇರುವುದರಿಂದ ಹೆದ್ದಾರಿಯ ಗುಂಡಿಗಳನ್ನು ಹೆದ್ದಾರಿ ಪ್ರಾಧಿಕಾರಗಳು, ಜನಪ್ರತಿನಿಧಿಗಳು ನೋಡಿಯೂ ನೋಡದಂತೆ ಚಲಿಸುವುದು ತರವಲ್ಲ. ಈ ರೀತಿಯ ಗುಂಡಿಗಳೇ ಮರಣ ಗುಂಡಿಗಳಂತಾಗಿದ್ದನ್ನು ಹಲವು ಬಾರಿ ಕಂಡಿದ್ದೇವೆ. ಪಡೀಲಿನ ಉದ್ದಕ್ಕೂ ಹೆದ್ದಾರಿ ಬದಿಯಲ್ಲೂ ನೀರು ನಿಂತು ಆಳ ಗುಂಡಿಗಳೆದ್ದಿದ್ದು ಅವನ್ನು ಸ್ಥಳೀಯರು ಮಣ್ಣು, ಕಲ್ಲು ತುಂಬಿ ಒಮ್ಮೆಗೆ ತುಂಬಿಸಿದರೂ, ಮತ್ತೆ ಅವು ಬಾಯ್ದೆರೆದು ನಿಲ್ಲುತ್ತವೆ. ತುಂಬೆಯಲ್ಲಿ 15 ವರ್ಷಗಳಿಂದ ಈ ಹೆದ್ದಾರಿಯ ಕಾರಣಕ್ಕೆ ಪ್ರಯಾಣಿಕರಿಂದ ಶುಲ್ಕ ವಸೂಲಿ ಮಾಡುತ್ತಿದ್ದರೂ, ಈ ರಸ್ತೆಯನ್ನು ದುರಸ್ತಿ ಪಡಿಸುವ ಕಾಳಜಿ ಆಳುವವರಿಗಿಲ್ಲ.
ಪಣಂಬೂರು, ಕುಳಾಯಿ ಭಾಗದಲ್ಲಿ ಇದೇ ರೀತಿ ಹೆದ್ದಾರಿ ಗುಂಡಿ ಬಿದ್ದಿದ್ದರೂ, ಕೆಲವನ್ನು ಮುಚ್ಚಲಾಗಿದೆ. ಇನ್ನೂ ಅನೇಕ ಗುಂಡಿಗಳು ಅಲ್ಲಲ್ಲಿ ಎದ್ದು ಕುಳಿತಿದ್ದು, ಪ್ರಯಾಣಿಕರನ್ನು ಹೈರಾಣು ಮಾಡಿವೆ.
Mangalore Deadly potholes at Padil near JCB showroom. Highway authorities show negligence even after huge traffic. Two wheelers and cards face huge problems.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm