ಬ್ರೇಕಿಂಗ್ ನ್ಯೂಸ್
10-10-24 08:24 pm Mangaluru Correspondent ಕರಾವಳಿ
ಮಂಗಳೂರು, ಅ.10: ಕರ್ನಾಟಕ ಬೆಳೆಗಾರರ ಒಕ್ಕೂಟದ ನೇತೃತ್ವದಲ್ಲಿ ಎಲ್ಲ ಸಹ ಸಂಘಟನೆಗಳ ಸಹಕಾರದಿಂದ ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಪ್ರತಿಭಟನಾ ಸಭೆ ನಗರದ ಕ್ಲಾಕ್ ಟವರ್ ಎದುರು ಗುರುವಾರ ನಡೆಯಿತು.
ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಯ ಕಾಫಿ ಬೆಳೆಗಾರರು ಭಾಗವಹಿಸಿ, ಕಾಫಿ ಕೃಷಿಯನ್ನು ಸಫಾಸಿ ಕಾಯಿದೆಯಡಿ ತಂದು ಬೆಳೆಗಾರರಿಗೆ ಕಿರುಕುಳ ನೀಡುತ್ತಿರುವ ಕೆನರಾ ಬ್ಯಾಂಕ್ನ ರೈತ/ ಬೆಳೆಗಾರರ ವಿರೋಧಿ ಮನಸ್ಥಿತಿಯ ಕೆಲವು ಉನ್ನತ ಅಧಿಕಾರಿಗಳ ಸರ್ವಾಧಿಕಾರಿ ಧೋರಣೆ ವಿರುದ್ಧ ಘೋಷಣೆ ಕೂಗಿ, ಸಂಘಟನೆ ಪ್ರತಿನಿಧಿಗಳು ಮಾತನಾಡಿದರು.

ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಮಾತನಾಡಿ, ರೈತರು ದೇಶದ ಬೆನ್ನುಲುಬಾಗಿದ್ದಾರೆ. ಕಾಫಿ ಬೆಳೆಗಾರರೆಂದರೆ ದೊಡ್ಡ ಶ್ರೀಮಂತರೆಂಬ ಭಾವನೆ ಇದೆ. ಅಲ್ಲಿಯೂ ಸಣ್ಣ ರೈತರು, ಸಂಕಷ್ಟವಿದೆ. ಈಗಿನ ಸಮಸ್ಯೆ ಬಗ್ಗೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳ ಗಮನ ಸೆಳೆಯುವುದಾಗಿ ಹೇಳಿದರು.
ಮೂಡಿಗೆರೆ ತಾಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ, ಪ್ರಧಾನ ಕಾರ್ಯದರ್ಶಿ ಕೆ.ಡಿ.ಮನೋಹರ್, ಮುಖಂಡರಾದ ದೀಪಕ್ ದೊಡ್ಡಯ್ಯ, ನಿಡುವಾಳೆ ಚಂದ್ರು, ಹದ್ದೂರಿ ಕುಮಾರ್, ಲೋಹಿತ್, ಕೃಷ್ಣ ಕೆಜಿಎಫ್, ಮಲ್ಲೇಶ್, ಬಿ.ಸಿ.ದಯಾಕರ್ ಮತ್ತಿತರರು ಮಾತನಾಡಿದರು.
ಈಗಾಗಲೇ ಹಲವಾರು ಸಮಸ್ಯೆಗಳಲ್ಲಿ ಸಿಲುಕಿರುವ ಕಾಫಿ ಬೆಳೆಗಾರರಿಗೆ ಈಗ ಸಾಲ ಹಾಗೂ ಸುಸ್ತಿ ಸಾಲದ ಸಮಸ್ಯೆ ಬಹಳ ತೀವ್ರವಾಗಿ ಕಾಡುತ್ತಿದೆ. ಸರ್ಫಾಸಿ ಕಾಯಿದೆ ನೆಪದಲ್ಲಿ ಬೆಳೆಗಾರರ ಆಸ್ತಿ ಹರಾಜು ಹಾಕುತ್ತಿರುವ ಬ್ಯಾಂಕ್ಗಳ ನೀತಿ ವಿರುದ್ಧ ಹೋರಾಡಲೇಬೇಕಾದ ಅನಿವಾರ್ಯತೆ ಎದುರಾಗಿದೆ.
ಬೆಳೆಗಾರರ ಸಮಸ್ಯೆಗಳನ್ನು ಕುರಿತು ತಿಳಿದಿರುವ ಬಹುತೇಕ ಎಲ್ಲ ಬ್ಯಾಂಕ್ಗಳು ಬೆಳೆಗಾರರ ಹಿತರಕ್ಷಣೆ ದೃಷ್ಟಿಯಿಂದ ಸಾಲ ಮರುಪಾವತಿಗೆ ಸಮಯಾವಕಾಶ ನೀಡಲು ಒಪ್ಪಿ ಬೆಳೆಗಾರರ ಸಹಾಯಕ್ಕೆ ನಿಂತಿವೆ. ಆದರೆ ಕೆನರಾ ಬ್ಯಾಂಕ್ ಮಾತ್ರ ಅತ್ಯಂತ ಅಮಾನವೀಯವಾಗಿ ಬೆಳೆಗಾರರ ವಿರುದ್ಧ ವಸೂಲಾತಿ, ಹರಾಜು ಕ್ರಮ ಜರುಗಿಸುತ್ತಿದೆ.
ಬೆಳೆಗಾರರ ತೋಟಗಳನ್ನು ಕೆಲವೇ ತಿಂಗಳ ನೋಟಿಸ್ ನೀಡಿ ಆನ್ಲೈನ್ನಲ್ಲಿ ಹರಾಜು ಮಾಡುತ್ತಿದೆ, ಈ ಕುರಿತು ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಜಿಲ್ಲಾ ಲೀಡ್ ಬ್ಯಾಕ್ ಮುಖ್ಯಸ್ಥರ ಮೂಲಕ ಮನವಿ ಸಲ್ಲಿಸಿದ್ದರೂ ಕೂಡ ಕೆನರಾ ಬ್ಯಾಂಕ್ ಅಧಿಕಾರಿ ವರ್ಗ ಅತ್ಯಂತ ಉದ್ಧಟತನದಿಂದ ಬೆಳೆಗಾರರ ವಿರುದ್ಧ ಕ್ರಮ ಜರುಗಿಸುತ್ತಲೇ ಬಂದಿದೆ ಎಂದು ಅವರು ಆರೋಪಿಸಿದರು.
A protest meeting against the Sarfasi Act and Canara Bank was held in front of the clock tower in the city on Thursday under the leadership of the Karnataka Growers' Union with the cooperation of all other organizations.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm