ಬ್ರೇಕಿಂಗ್ ನ್ಯೂಸ್
10-10-24 08:24 pm Mangaluru Correspondent ಕರಾವಳಿ
ಮಂಗಳೂರು, ಅ.10: ಕರ್ನಾಟಕ ಬೆಳೆಗಾರರ ಒಕ್ಕೂಟದ ನೇತೃತ್ವದಲ್ಲಿ ಎಲ್ಲ ಸಹ ಸಂಘಟನೆಗಳ ಸಹಕಾರದಿಂದ ಸರ್ಫಾಸಿ ಕಾಯಿದೆ ಮತ್ತು ಕೆನರಾ ಬ್ಯಾಂಕ್ ವಿರುದ್ಧ ಪ್ರತಿಭಟನಾ ಸಭೆ ನಗರದ ಕ್ಲಾಕ್ ಟವರ್ ಎದುರು ಗುರುವಾರ ನಡೆಯಿತು.
ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಯ ಕಾಫಿ ಬೆಳೆಗಾರರು ಭಾಗವಹಿಸಿ, ಕಾಫಿ ಕೃಷಿಯನ್ನು ಸಫಾಸಿ ಕಾಯಿದೆಯಡಿ ತಂದು ಬೆಳೆಗಾರರಿಗೆ ಕಿರುಕುಳ ನೀಡುತ್ತಿರುವ ಕೆನರಾ ಬ್ಯಾಂಕ್ನ ರೈತ/ ಬೆಳೆಗಾರರ ವಿರೋಧಿ ಮನಸ್ಥಿತಿಯ ಕೆಲವು ಉನ್ನತ ಅಧಿಕಾರಿಗಳ ಸರ್ವಾಧಿಕಾರಿ ಧೋರಣೆ ವಿರುದ್ಧ ಘೋಷಣೆ ಕೂಗಿ, ಸಂಘಟನೆ ಪ್ರತಿನಿಧಿಗಳು ಮಾತನಾಡಿದರು.

ಉಡುಪಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಮಾತನಾಡಿ, ರೈತರು ದೇಶದ ಬೆನ್ನುಲುಬಾಗಿದ್ದಾರೆ. ಕಾಫಿ ಬೆಳೆಗಾರರೆಂದರೆ ದೊಡ್ಡ ಶ್ರೀಮಂತರೆಂಬ ಭಾವನೆ ಇದೆ. ಅಲ್ಲಿಯೂ ಸಣ್ಣ ರೈತರು, ಸಂಕಷ್ಟವಿದೆ. ಈಗಿನ ಸಮಸ್ಯೆ ಬಗ್ಗೆ ಸಂಬಂಧಪಟ್ಟ ಸಚಿವರು, ಅಧಿಕಾರಿಗಳ ಗಮನ ಸೆಳೆಯುವುದಾಗಿ ಹೇಳಿದರು.
ಮೂಡಿಗೆರೆ ತಾಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ಆರ್.ಬಾಲಕೃಷ್ಣ, ಪ್ರಧಾನ ಕಾರ್ಯದರ್ಶಿ ಕೆ.ಡಿ.ಮನೋಹರ್, ಮುಖಂಡರಾದ ದೀಪಕ್ ದೊಡ್ಡಯ್ಯ, ನಿಡುವಾಳೆ ಚಂದ್ರು, ಹದ್ದೂರಿ ಕುಮಾರ್, ಲೋಹಿತ್, ಕೃಷ್ಣ ಕೆಜಿಎಫ್, ಮಲ್ಲೇಶ್, ಬಿ.ಸಿ.ದಯಾಕರ್ ಮತ್ತಿತರರು ಮಾತನಾಡಿದರು.
ಈಗಾಗಲೇ ಹಲವಾರು ಸಮಸ್ಯೆಗಳಲ್ಲಿ ಸಿಲುಕಿರುವ ಕಾಫಿ ಬೆಳೆಗಾರರಿಗೆ ಈಗ ಸಾಲ ಹಾಗೂ ಸುಸ್ತಿ ಸಾಲದ ಸಮಸ್ಯೆ ಬಹಳ ತೀವ್ರವಾಗಿ ಕಾಡುತ್ತಿದೆ. ಸರ್ಫಾಸಿ ಕಾಯಿದೆ ನೆಪದಲ್ಲಿ ಬೆಳೆಗಾರರ ಆಸ್ತಿ ಹರಾಜು ಹಾಕುತ್ತಿರುವ ಬ್ಯಾಂಕ್ಗಳ ನೀತಿ ವಿರುದ್ಧ ಹೋರಾಡಲೇಬೇಕಾದ ಅನಿವಾರ್ಯತೆ ಎದುರಾಗಿದೆ.
ಬೆಳೆಗಾರರ ಸಮಸ್ಯೆಗಳನ್ನು ಕುರಿತು ತಿಳಿದಿರುವ ಬಹುತೇಕ ಎಲ್ಲ ಬ್ಯಾಂಕ್ಗಳು ಬೆಳೆಗಾರರ ಹಿತರಕ್ಷಣೆ ದೃಷ್ಟಿಯಿಂದ ಸಾಲ ಮರುಪಾವತಿಗೆ ಸಮಯಾವಕಾಶ ನೀಡಲು ಒಪ್ಪಿ ಬೆಳೆಗಾರರ ಸಹಾಯಕ್ಕೆ ನಿಂತಿವೆ. ಆದರೆ ಕೆನರಾ ಬ್ಯಾಂಕ್ ಮಾತ್ರ ಅತ್ಯಂತ ಅಮಾನವೀಯವಾಗಿ ಬೆಳೆಗಾರರ ವಿರುದ್ಧ ವಸೂಲಾತಿ, ಹರಾಜು ಕ್ರಮ ಜರುಗಿಸುತ್ತಿದೆ.
ಬೆಳೆಗಾರರ ತೋಟಗಳನ್ನು ಕೆಲವೇ ತಿಂಗಳ ನೋಟಿಸ್ ನೀಡಿ ಆನ್ಲೈನ್ನಲ್ಲಿ ಹರಾಜು ಮಾಡುತ್ತಿದೆ, ಈ ಕುರಿತು ಜಿಲ್ಲಾ ಮಟ್ಟದ ಬ್ಯಾಂಕರ್ಸ್ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಉಪಸ್ಥಿತಿಯಲ್ಲಿ ಜಿಲ್ಲಾ ಲೀಡ್ ಬ್ಯಾಕ್ ಮುಖ್ಯಸ್ಥರ ಮೂಲಕ ಮನವಿ ಸಲ್ಲಿಸಿದ್ದರೂ ಕೂಡ ಕೆನರಾ ಬ್ಯಾಂಕ್ ಅಧಿಕಾರಿ ವರ್ಗ ಅತ್ಯಂತ ಉದ್ಧಟತನದಿಂದ ಬೆಳೆಗಾರರ ವಿರುದ್ಧ ಕ್ರಮ ಜರುಗಿಸುತ್ತಲೇ ಬಂದಿದೆ ಎಂದು ಅವರು ಆರೋಪಿಸಿದರು.
A protest meeting against the Sarfasi Act and Canara Bank was held in front of the clock tower in the city on Thursday under the leadership of the Karnataka Growers' Union with the cooperation of all other organizations.
06-02-26 12:30 pm
Bangalore Correspondent
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
06-02-26 10:56 pm
Mangalore Correspondent
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
D k Shivakumar, Mangalore: "ಯತೀಂದ್ರ ಅವರೇ ನಮ್ಮ...
06-02-26 03:09 pm
ನಿರ್ಲಕ್ಷ್ಯದಿಂದ ಹೆದ್ದಾರಿಗೆ ಬೈಕ್ ನುಗ್ಗಿಸಿದ ತ್ರಿ...
06-02-26 01:55 pm
06-02-26 06:36 pm
HK News Desk
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm