ಬ್ರೇಕಿಂಗ್ ನ್ಯೂಸ್
10-10-24 11:19 pm Mangalore Correspondent ಕರಾವಳಿ
ಮಂಗಳೂರು, ಅ.10: ತುಳು ಕರಾವಳಿ ಜನರ ಆಡು ಭಾಷೆಯಾಗಿದ್ದು, ಇಲ್ಲಿನ ಜನಪದ, ಸಂಸ್ಕೃತಿ, ಇತಿಹಾಸ, ಭಾಷಾ ಜ್ಞಾನದ ಬಗ್ಗೆ ತಿಳಿಯುವ ಉದ್ದೇಶದಿಂದ ಎಂಎ ಸ್ನಾತಕೋತ್ತರ ಅಧ್ಯಯನಕ್ಕೆ ವಿದ್ಯಾರ್ಥಿಗಳು ಬರುತ್ತಾರೆ ವಿನಾ ಯಾವುದೇ ಉದ್ಯೋಗದ ಭರವಸೆಯಿಂದಲ್ಲ. ಆದರೆ, ತುಳುನಾಡನ್ನು ಪ್ರತಿನಿಧಿಸುವ ಮಂಗಳೂರು ವಿವಿಯಲ್ಲಿ ತುಳು ಎಂಎ ಅಧ್ಯಯನಕ್ಕೆ ಏಕಾಏಕಿ ಶುಲ್ಕವನ್ನು ದುಪ್ಪಟ್ಟುಗೊಳಿಸಿದ್ದು ವಿದ್ಯಾರ್ಥಿಗಳಿಗೆ ತೀವ್ರ ಹೊರೆಯಾಗಿಸಿದೆ ಎಂದು ತುಳು ಎಂಎ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಕಣ್ವತೀರ್ಥ ಹೇಳಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ತುಳು ಅಕಾಡೆಮಿ ಸ್ಥಾಪನೆಯಿಂದಾಗಿ ತುಳು ಭಾಷಾ ಚಳವಳಿಗೆ ಸಂಘಟನಾತ್ಮಕ ನೆಲೆ ದೊರಕಿತ್ತು. 2018ರಲ್ಲಿ ತುಳು ಅಕಾಡೆಮಿಯ ಒತ್ತಾಸೆಯಿಂದಲೇ ಮಂಗಳೂರು ವಿವಿಯ ಸಂಧ್ಯಾ ಕಾಲೇಜಿನಲ್ಲಿ ತುಳು ಎಂಎ ತರಗತಿ ಆರಂಭಿಸಲಾಗಿತ್ತು. ಆರಂಭದಲ್ಲಿ 15 ಸಾವಿರ ಶುಲ್ಕ ಇದ್ದುದನ್ನು ಸ್ಥಳೀಯ ಭಾಷಾ ಅಧ್ಯಯನಕ್ಕೆ ಮಂಗಳೂರು ವಿವಿಯಿಂದ ವಿಶೇಷ ರಿಯಾಯಿತಿ ನೀಡಬೇಕೆಂದು ಮನವಿ ಮಾಡಿದ್ದಕ್ಕೆ 2021ರಲ್ಲಿ ಮತ್ತೆ 4 ಸಾವಿರ ಕಡಿತ ಮಾಡಲಾಗಿತ್ತು. ಆದರೆ, ಈತನಕ 11 ಸಾವಿರ ಇದ್ದ ವಾರ್ಷಿಕ ಶುಲ್ಕವನ್ನು ಈ ಬಾರಿ 22 ಸಾವಿರಕ್ಕೆ ಏರಿಸಲಾಗಿದೆ.
ಇದಲ್ಲದೆ, ಕೋರ್ಸ್ ಮುಂದುವರಿಸಲು ಕನಿಷ್ಠ 15 ಮಂದಿ ವಿದ್ಯಾರ್ಥಿಗಳ ಮಾನದಂಡವನ್ನು ಕಡ್ಡಾಯ ಮಾಡಿದ್ದಾರೆ. ಇದರಿಂದಾಗಿ ತುಳು ಭಾಷಾ ಅಧ್ಯಯನಕ್ಕೆ ತೀವ್ರ ತೊಡಕಾಗಿದೆ. ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ಸೇರಿಸಬೇಕು, ರಾಜ್ಯದಲ್ಲಿ ದ್ವಿತೀಯ ಅಧಿಕೃತ ಭಾಷೆಯಾಗಿಸಬೇಕು ಎನ್ನುವ ನೆಲೆಯಲ್ಲಿ ಬಲವಾದ ಆಗ್ರಹ ಕೇಳಿಬರುತ್ತಿರುವಾಗಲೇ ತುಳು ಭಾಷೆಯ ಉನ್ನತ ಶಿಕ್ಷಣದ ಅವಕಾಶವನ್ನು ಕಡಿತಗೊಳಿಸುವ ಸ್ಥಿತಿಯಾಗಿದೆ. ಈ ಬಗ್ಗೆ ಮಂಗಳೂರು ವಿವಿಯ ಕುಲಪತಿಗಳು ಹಾಗೂ ಸಿಂಡಿಕೇಟ್ ಸದಸ್ಯರ ಗಮನಕ್ಕೂ ತರಲಾಗಿದೆ ಎಂದರು.
ತುಳು ಎಂಎ ವಿದ್ಯಾರ್ಥಿಗಳ ಶುಲ್ಕವನ್ನು ಭರಿಸಲು ದಾನಿಗಳು ಮುಂದೆ ಬರಬೇಕು, ಭಾಷಾ ಅಧ್ಯಯನಕ್ಕೆ ತೊಡಕಾಗದಂತೆ ಶಾಸಕರು, ಸಂಸದರು ಕ್ರಮ ವಹಿಸಬೇಕು ಎಂಬ ಒತ್ತಾಯವನ್ನೂ ಮಾಡುತ್ತಿದ್ದೇವೆ. ಈತನಕ ತುಳು ಎಂಎ ಕಲಿಕೆಯಲ್ಲಿ 81 ಮಂದಿ ಸ್ನಾತಕ ಪದವಿ ಪಡೆದಿದ್ದಾರೆ. ಉನ್ನತ ಶಿಕ್ಷಣ ಸಾಧ್ಯವಾದರೆ, ಪಿಯುಸಿ, ಪದವಿಗಳಲ್ಲಿ ತುಳು ಕಲಿಕೆಯನ್ನು ಪ್ರಚುರಪಡಿಸಬಹುದು ಎನ್ನುವ ದೃಷ್ಟಿಯಿಂದ ತುಳು ಎಂಎ ಆರಂಭಿಸಲಾಗಿತ್ತು. ಆದರೆ, ಮಂಗಳೂರು ವಿವಿಯಲ್ಲಿ ಆರ್ಥಿಕ ಮುಗ್ಗಟ್ಟು ಎಂಬ ಕಾರಣಕ್ಕೆ ತುಳು ಭಾಷೆಯ ಎಂಎ ಕಲಿಕೆಗೆ ಅಡ್ಡಿ ತರುವುದು ಎಷ್ಟು ಸರಿ ಎಂದು ಸುಭಾಶ್ಚಂದ್ರ ಕಣ್ವತೀರ್ಥ ಪ್ರಶ್ನೆ ಮಾಡಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ತುಳು ಎಂಎ ಹಳೆ ವಿದ್ಯಾರ್ಥಿ ಸಂಘದ ಚಂದ್ರಹಾಸ ಕಣಂತೂರು, ಹರೀಶ್ ಅಮೈ, ಪ್ರಶಾಂತಿ ಶೆಟ್ಟಿ ಇರುವೈಲು ಉಪಸ್ಥಿತರಿದ್ದರು.
Tulu MA degree fee double is a big burden for students slams alumni student in Mangalore.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm