ಬ್ರೇಕಿಂಗ್ ನ್ಯೂಸ್
13-10-24 02:52 pm Mangalore Correspondent ಕರಾವಳಿ
ಮಂಗಳೂರು, ಅ.13: ತಲಪಾಡಿಯ ಲಾಟರಿ ಏಜೆನ್ಸಿಯಿಂದ ಪಡೆದ ಟಿಕೇಟಿಗೆ ಕೇರಳ ರಾಜ್ಯ ಸರ್ಕಾರದ ಓಣಂ ಬಂಪರ್ ಡ್ರಾ ಯೋಜನೆಯ ಎರಡನೇ ಬಹುಮಾನ ರೂ. ಒಂದು ಕೋಟಿ ಬಹುಮಾನ ಒಲಿದಿದೆ. ಒಂಟಿ ಮಹಿಳೆಗೆ ಲಾಟರಿ ಒಲಿದಿರುವುದರಿಂದ ಹೆಸರು ಮತ್ತು ಊರು ಹೇಳಲು ಅವರು ನಿರಾಕರಿಸಿದ್ದಾರೆ ಎಂದು ಲಾಟರಿ ಅಂಗಡಿ ಮಾಲೀಕ ಕನಕದಾಸ್ ತಿಳಿಸಿದ್ದಾರೆ.
ಕಳೆದ 30 ವರ್ಷಗಳಲ್ಲಿ ಕನಕದಾಸ್ ಅವರ ಅಂಗಡಿಯಿಂದ ಟಿಕೇಟ್ ಪಡೆದ 6 ಮಂದಿ ಲಾಟರಿ ಗೆಲುವು ಸಾಧಿಸಿದ್ದು, ನಾಲ್ಕು ಮಂದಿಗೆ ರೂ.1 ಕೋಟಿ ಒಲಿದಿದ್ದರೆ, ಮತ್ತಿಬ್ಬರಿಗೆ 75 ಲಕ್ಷ ರೂ. ಮತ್ತು 80 ಲಕ್ಷ ರೂ. ಸಿಕ್ಕಿದೆ. ಈ ಬಾರಿಯ ಓಣಂ ಬಂಪರ್ ಲಾಟರಿಯಲ್ಲಿ ಮಹಿಳೆಯೊಬ್ಬರು ಇದೇ ಅಂಗಡಿಯಿಂದ ಟಿಕೆಟ್ ಪಡೆದು ಒಂದು ಕೋಟಿ ಗೆದ್ದಿದ್ದಾರೆ.
ಲಾಟರಿ ವಿಜೇತ ಪ್ರತಿಯೊಬ್ಬರಿಗೂ ಮಂಜೇಶ್ವರ ಸರ್ವಿಸ್ ಕೋಪರೇಟಿವ್ ಬ್ಯಾಂಕ್ ಮೂಲಕ ಹಣ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಹಿಂದೆ ಬೇರೆ ರಾಜ್ಯದವರಿಗೆ ಲಾಟರಿ ಖರೀದಿಗೆ ಅವಕಾಶ ಇರಲಿಲ್ಲ. ಉಮ್ಮನ್ ಚಾಂಡಿ ಮುಖ್ಯಮಂತ್ರಿಯಾಗಿದ್ದಾಗ, ಲಾಟರಿ ಏಜೆಂಟರ ಸಭೆಗಳಲ್ಲಿ ಧ್ವನಿ ಎತ್ತಿದ ಪರಿಣಾಮವಾಗಿ ಇತರ ರಾಜ್ಯದ ಜನರಿಗೂ ಲಾಟರಿ ಸಿಗುವಂತೆ ಆಗಿದೆ. ಸರಕಾರದ ಕಾನೂನುಗಳನ್ನು ಪಾಲಿಸಿಕೊಂಡು, ಪಾಲಕ್ಕಾಡ್ ಡಿವಿಷನ್ನಿನ ಲಾಟರಿಗಳನ್ನಷ್ಟೇ ಮಾರಾಟ ಮಾಡುತ್ತಿದ್ದೇನೆ ಅನ್ನುತ್ತಾರೆ ಅಂಗಡಿ ಮಾಲೀಕ ಕನಕದಾಸ್.
ಅವರಲ್ಲಿ ಇರುವುದು ಪಾಲಕ್ಕಾಡ್ ವಿಭಾಗದ ಟಿಕೇಟ್ ಮಾತ್ರ. ಹೆಚ್ಚಾಗಿ ಪಾಲ್ಘಾಟ್ ಟಿಕೇಟುಗಳಿಗೆ ಲಾಟರಿ ಒಲಿಯುತ್ತಿರುವುದರಿಂದ ಕನಕದಾಸ್ ಅವರ ಗ್ರಾಹಕರಿಗೂ ಬಹುಮಾನ ಲಭಿಸಿದೆ. ತನಗೂ ಸಣ್ಣ ಮೊತ್ತದ ಬಹುಮಾನ ಬಂದಿದೆ. ಮುಂದೊಂದು ದಿನ ಅವರ ಟಿಕೇಟ್ ಪಡೆದು ಕೋಟಿ ಗಳಿಸುವ ಕನಸು ಇದೆ ಎಂದು ಸ್ಥಳೀಯ ಅಂಗಡಿ ಮಾಲೀಕ ಕುಂಞ್ಞಾಲಿ ಕುಟ್ಟಿ ಹೇಳಿದ್ದಾರೆ.
ಈ ಬಾರಿ ಓಣಂ ಬಂಪರ್ ಲಾಟರಿಯಲ್ಲಿ 25 ಕೋಟಿ ಮೊದಲ ಬಹುಮಾನ ಮಂಡ್ಯ ಜಿಲ್ಲೆಯ ಪಾಂಡವಪುರ ಮೂಲದ ವ್ಯಕ್ತಿಗೆ ಒಲಿದಿತ್ತು. ಎರಡನೇ ಬಹುಮಾನ 20 ಮಂದಿಗೆ ತಲಾ ಒಂದು ಕೋಟಿ ಇತ್ತು. ತಲಪಾಡಿ ಆಸುಪಾಸಿನ ಬಡ ಮಹಿಳೆಗೆ ಈ ಬಹುಮಾನ ಬಂದಿದ್ದು ವಿಶೇಷ.
The second prize of this year’s Onam bumper lottery of Rs 1 crore has been won by a woman who purchased her ticket from the Stree Shakti lottery agency in Talapady, owned by K R Kanakdas.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm