ಬ್ರೇಕಿಂಗ್ ನ್ಯೂಸ್
13-10-24 02:52 pm Mangalore Correspondent ಕರಾವಳಿ
ಮಂಗಳೂರು, ಅ.13: ತಲಪಾಡಿಯ ಲಾಟರಿ ಏಜೆನ್ಸಿಯಿಂದ ಪಡೆದ ಟಿಕೇಟಿಗೆ ಕೇರಳ ರಾಜ್ಯ ಸರ್ಕಾರದ ಓಣಂ ಬಂಪರ್ ಡ್ರಾ ಯೋಜನೆಯ ಎರಡನೇ ಬಹುಮಾನ ರೂ. ಒಂದು ಕೋಟಿ ಬಹುಮಾನ ಒಲಿದಿದೆ. ಒಂಟಿ ಮಹಿಳೆಗೆ ಲಾಟರಿ ಒಲಿದಿರುವುದರಿಂದ ಹೆಸರು ಮತ್ತು ಊರು ಹೇಳಲು ಅವರು ನಿರಾಕರಿಸಿದ್ದಾರೆ ಎಂದು ಲಾಟರಿ ಅಂಗಡಿ ಮಾಲೀಕ ಕನಕದಾಸ್ ತಿಳಿಸಿದ್ದಾರೆ.
ಕಳೆದ 30 ವರ್ಷಗಳಲ್ಲಿ ಕನಕದಾಸ್ ಅವರ ಅಂಗಡಿಯಿಂದ ಟಿಕೇಟ್ ಪಡೆದ 6 ಮಂದಿ ಲಾಟರಿ ಗೆಲುವು ಸಾಧಿಸಿದ್ದು, ನಾಲ್ಕು ಮಂದಿಗೆ ರೂ.1 ಕೋಟಿ ಒಲಿದಿದ್ದರೆ, ಮತ್ತಿಬ್ಬರಿಗೆ 75 ಲಕ್ಷ ರೂ. ಮತ್ತು 80 ಲಕ್ಷ ರೂ. ಸಿಕ್ಕಿದೆ. ಈ ಬಾರಿಯ ಓಣಂ ಬಂಪರ್ ಲಾಟರಿಯಲ್ಲಿ ಮಹಿಳೆಯೊಬ್ಬರು ಇದೇ ಅಂಗಡಿಯಿಂದ ಟಿಕೆಟ್ ಪಡೆದು ಒಂದು ಕೋಟಿ ಗೆದ್ದಿದ್ದಾರೆ.
ಲಾಟರಿ ವಿಜೇತ ಪ್ರತಿಯೊಬ್ಬರಿಗೂ ಮಂಜೇಶ್ವರ ಸರ್ವಿಸ್ ಕೋಪರೇಟಿವ್ ಬ್ಯಾಂಕ್ ಮೂಲಕ ಹಣ ಪಡೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ಹಿಂದೆ ಬೇರೆ ರಾಜ್ಯದವರಿಗೆ ಲಾಟರಿ ಖರೀದಿಗೆ ಅವಕಾಶ ಇರಲಿಲ್ಲ. ಉಮ್ಮನ್ ಚಾಂಡಿ ಮುಖ್ಯಮಂತ್ರಿಯಾಗಿದ್ದಾಗ, ಲಾಟರಿ ಏಜೆಂಟರ ಸಭೆಗಳಲ್ಲಿ ಧ್ವನಿ ಎತ್ತಿದ ಪರಿಣಾಮವಾಗಿ ಇತರ ರಾಜ್ಯದ ಜನರಿಗೂ ಲಾಟರಿ ಸಿಗುವಂತೆ ಆಗಿದೆ. ಸರಕಾರದ ಕಾನೂನುಗಳನ್ನು ಪಾಲಿಸಿಕೊಂಡು, ಪಾಲಕ್ಕಾಡ್ ಡಿವಿಷನ್ನಿನ ಲಾಟರಿಗಳನ್ನಷ್ಟೇ ಮಾರಾಟ ಮಾಡುತ್ತಿದ್ದೇನೆ ಅನ್ನುತ್ತಾರೆ ಅಂಗಡಿ ಮಾಲೀಕ ಕನಕದಾಸ್.
ಅವರಲ್ಲಿ ಇರುವುದು ಪಾಲಕ್ಕಾಡ್ ವಿಭಾಗದ ಟಿಕೇಟ್ ಮಾತ್ರ. ಹೆಚ್ಚಾಗಿ ಪಾಲ್ಘಾಟ್ ಟಿಕೇಟುಗಳಿಗೆ ಲಾಟರಿ ಒಲಿಯುತ್ತಿರುವುದರಿಂದ ಕನಕದಾಸ್ ಅವರ ಗ್ರಾಹಕರಿಗೂ ಬಹುಮಾನ ಲಭಿಸಿದೆ. ತನಗೂ ಸಣ್ಣ ಮೊತ್ತದ ಬಹುಮಾನ ಬಂದಿದೆ. ಮುಂದೊಂದು ದಿನ ಅವರ ಟಿಕೇಟ್ ಪಡೆದು ಕೋಟಿ ಗಳಿಸುವ ಕನಸು ಇದೆ ಎಂದು ಸ್ಥಳೀಯ ಅಂಗಡಿ ಮಾಲೀಕ ಕುಂಞ್ಞಾಲಿ ಕುಟ್ಟಿ ಹೇಳಿದ್ದಾರೆ.
ಈ ಬಾರಿ ಓಣಂ ಬಂಪರ್ ಲಾಟರಿಯಲ್ಲಿ 25 ಕೋಟಿ ಮೊದಲ ಬಹುಮಾನ ಮಂಡ್ಯ ಜಿಲ್ಲೆಯ ಪಾಂಡವಪುರ ಮೂಲದ ವ್ಯಕ್ತಿಗೆ ಒಲಿದಿತ್ತು. ಎರಡನೇ ಬಹುಮಾನ 20 ಮಂದಿಗೆ ತಲಾ ಒಂದು ಕೋಟಿ ಇತ್ತು. ತಲಪಾಡಿ ಆಸುಪಾಸಿನ ಬಡ ಮಹಿಳೆಗೆ ಈ ಬಹುಮಾನ ಬಂದಿದ್ದು ವಿಶೇಷ.
The second prize of this year’s Onam bumper lottery of Rs 1 crore has been won by a woman who purchased her ticket from the Stree Shakti lottery agency in Talapady, owned by K R Kanakdas.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm