ಬ್ರೇಕಿಂಗ್ ನ್ಯೂಸ್
14-10-24 01:37 pm Mangalore Correspondent ಕರಾವಳಿ
ಮಂಗಳೂರು, ಅ.14: ನಸುಕಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಅಡಿಕೆ ತೋಟಕ್ಕೆ ಪಲ್ಟಿಯಾಗಿ ಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ಪುಂಜಾಲಕಟ್ಟೆ ಬಳಿಯ ಬಾಂಬಿಲ ಮಸೀದಿ ತಿರುವಿನಲ್ಲಿ ನಡೆದಿದ್ದು ಕಾರಿನಲ್ಲಿದ್ದ ಮಂಗಳೂರಿನ ಮಹಿಳೆ ಮೃತಪಟ್ಟಿದ್ದಾರೆ.
ಮಂಗಳೂರು ನಗರದ ಕೊಡಿಯಾಲಬೈಲು ನಿವಾಸಿ ಭಾಗೀರಥಿ (58 ) ಮೃತರು. ಕಾರು ಚಲಾಯಿಸುತ್ತಿದ್ದ ಮೂಲತಃ ತುಮಕೂರು ನಿವಾಸಿ ರೂಪೇಶ್ (40) ಗಂಭೀರ ಗಾಯಗೊಂಡಿದ್ದಾರೆ. ರೂಪೇಶ್ ಅವರ ಪತ್ನಿ, ಭಾಗೀರಥಿ ಅವರ ಪುತ್ರಿ ಸುಚಿತ್ರಾ (33) ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ರೂಪೇಶ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರೂಪೇಶ್ ಮೂಲತಃ ತುಮಕೂರು ನಿವಾಸಿಯಾಗಿದ್ದು ಮಂಗಳೂರಿನ ಸುಚಿತ್ರಾ ಅವರನ್ನು ಮದುವೆಯಾಗಿ ಇಲ್ಲಿಯೇ ನೆಲೆಸಿದ್ದರು. ನವರಾತ್ರಿ ಹಿನ್ನೆಲೆಯಲ್ಲಿ ತುಮಕೂರಿಗೆ ಹೋಗಿ ಮರಳುತ್ತಿದ್ದರು ಎನ್ನಲಾಗಿದೆ. ಚಾರ್ಮಾಡಿ- ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದಾಗ ಮುಂಜಾನೆ ಸುಮಾರು 4.30 ಗಂಟೆಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡ ಭಾಗೀರಥಿ ಮೃತಪಟ್ಟಿದ್ದಾರೆ. ಭಾಗೀರಥಿಯವರ ಸೋದರ ಗೋಪಾಲ್ ಮಂಗಳೂರಿನಲ್ಲಿ ಪಿಡಬ್ಲ್ಯುಡಿ ಇಂಜಿನಿಯರ್ ಆಗಿದ್ದಾರೆ.
ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಬಾಂಬಿಲ ತಿರುವಿನಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದು ಹೆದ್ದಾರಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore punjalkatte accident, 58 year old woman dies on spot. Three people were traveling in the car, including Bhagirathi (58), a resident of Kodiyal Bailu, who unfortunately lost her life. The driver, Roopesh (40), suffered severe injuries and is being treated, while his wife, Suchitra (33), sustained minor injuries.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm