ಬ್ರೇಕಿಂಗ್ ನ್ಯೂಸ್
14-10-24 02:35 pm Mangalore Correspondent ಕರಾವಳಿ
ಉಳ್ಳಾಲ, ಅ.14: ಮನೆಯಂಗಳದ ಬಾವಿಯಲ್ಲಿ ವೃದ್ಧ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕೊಲ್ಯ, ಕುಜುಮಗದ್ದೆಯಲ್ಲಿ ನಡೆದಿದ್ದು ಅಸೌಖ್ಯದಿಂದಾಗಿ ಮನನೊಂದು ವೃದ್ಧೆ ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.
ಕುಜುಮಗದ್ದೆಯಲ್ಲಿ ಹತ್ತು ದಿನಗಳ ಅಂತರದಲ್ಲಿ ಬಾವಿಗೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ವಾರಿಜ (68) ಸಾವನ್ನಪ್ಪಿದ ಮಹಿಳೆ. ವಾರಿಜ ಅವರ ಪತಿ ಸಂಜೀವ ಭಂಡಾರಿ ಅವರು ಎರಡು ವರುಷದ ಹಿಂದೆ ಸಾವನ್ನಪ್ಪಿದ್ದರು. ಅವರ ಏಕೈಕ ಪುತ್ರನಿಗೆ ಕಳೆದ ವರುಷವಷ್ಟೆ ಮದುವೆಯಾಗಿತ್ತು. ನಿನ್ನೆ ಸಂಜೆ ವಾರಿಜ ಅವರು ವಾಕಿಂಗ್ ಮಾಡಿ ಊಟ ಮಾಡಿ ಮಲಗಿದ್ದರಂತೆ. ಇಂದು ಬೆಳಗ್ಗೆ ವಾರಿಜ ಅವರು ಮನೆಯೊಳಗೆ ಕಾಣದಿದ್ದಾಗ ಮನೆ ಮಂದಿ ಹುಡುಕಾಡಿದ್ದು ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮೃತದೇಹ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಸುತ್ತ ಕಟ್ಟೆ ಇರುವ ಬಾವಿಯಾಗಿದ್ದು ಕಾಲು ಜಾರಿ ಬಿದ್ದಿರುವ ಸಾಧ್ಯತೆ ಕಡಿಮೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಹತ್ತು ದಿನಗಳ ಅಂತರದಲ್ಲಿ ಬಾವಿಗೆ ಬಿದ್ದು ಇಬ್ಬರ ಸಾವು
ಅಕ್ಟೋಬರ್ 5 ರಂದು ಬೆಳಗ್ಗೆ ಕೊಲ್ಯ, ಕುಜುಮಗದ್ದೆಯ ನಿವಾಸಿ ಅವಿವಾಹಿತ ಯುವಕ ಪ್ರಸಾದ್ (44) ಎಂಬವರು ಮನೆಯ ಪಕ್ಕದ ಪಾಳು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಅ.4ರಂದು ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋಗಿದ್ದ ಪ್ರಸಾದ್ ಮತ್ತೆ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಪೈಂಟರ್ ವೃತ್ತಿ ಮಾಡುತ್ತಿದ್ದ ಪ್ರಸಾದ್ ಖಿನ್ನತೆಯಿಂದ ಆತ್ಮಹತ್ಯೆ ನಡೆಸಿರೋದಾಗಿ ಶಂಕಿಸಲಾಗಿತ್ತು. ಹತ್ತು ದಿನಗಳ ಬಳಿಕ ಅದೇ ಪರಿಸರದಲ್ಲಿ ಬಾವಿಗೆ ಬಿದ್ದು ಮತ್ತೋರ್ವ ವೃದ್ಧೆ ಸಾವನ್ನಪ್ಪಿದ್ದಾರೆ.
68 year Old woman body found inside well at ullal in Mangalore. The deceased has been identified as Varija. Varija wasn't keeping well in her health conditions.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm