ಬ್ರೇಕಿಂಗ್ ನ್ಯೂಸ್
14-10-24 02:35 pm Mangalore Correspondent ಕರಾವಳಿ
ಉಳ್ಳಾಲ, ಅ.14: ಮನೆಯಂಗಳದ ಬಾವಿಯಲ್ಲಿ ವೃದ್ಧ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕೊಲ್ಯ, ಕುಜುಮಗದ್ದೆಯಲ್ಲಿ ನಡೆದಿದ್ದು ಅಸೌಖ್ಯದಿಂದಾಗಿ ಮನನೊಂದು ವೃದ್ಧೆ ಆತ್ಮಹತ್ಯೆಗೈದಿರುವುದಾಗಿ ಶಂಕಿಸಲಾಗಿದೆ.
ಕುಜುಮಗದ್ದೆಯಲ್ಲಿ ಹತ್ತು ದಿನಗಳ ಅಂತರದಲ್ಲಿ ಬಾವಿಗೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೊಲ್ಯ,ಕುಜುಮಗದ್ದೆ ನಿವಾಸಿ ವಾರಿಜ (68) ಸಾವನ್ನಪ್ಪಿದ ಮಹಿಳೆ. ವಾರಿಜ ಅವರ ಪತಿ ಸಂಜೀವ ಭಂಡಾರಿ ಅವರು ಎರಡು ವರುಷದ ಹಿಂದೆ ಸಾವನ್ನಪ್ಪಿದ್ದರು. ಅವರ ಏಕೈಕ ಪುತ್ರನಿಗೆ ಕಳೆದ ವರುಷವಷ್ಟೆ ಮದುವೆಯಾಗಿತ್ತು. ನಿನ್ನೆ ಸಂಜೆ ವಾರಿಜ ಅವರು ವಾಕಿಂಗ್ ಮಾಡಿ ಊಟ ಮಾಡಿ ಮಲಗಿದ್ದರಂತೆ. ಇಂದು ಬೆಳಗ್ಗೆ ವಾರಿಜ ಅವರು ಮನೆಯೊಳಗೆ ಕಾಣದಿದ್ದಾಗ ಮನೆ ಮಂದಿ ಹುಡುಕಾಡಿದ್ದು ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮೃತದೇಹ ಮೇಲಕ್ಕೆತ್ತಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಸುತ್ತ ಕಟ್ಟೆ ಇರುವ ಬಾವಿಯಾಗಿದ್ದು ಕಾಲು ಜಾರಿ ಬಿದ್ದಿರುವ ಸಾಧ್ಯತೆ ಕಡಿಮೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಹತ್ತು ದಿನಗಳ ಅಂತರದಲ್ಲಿ ಬಾವಿಗೆ ಬಿದ್ದು ಇಬ್ಬರ ಸಾವು
ಅಕ್ಟೋಬರ್ 5 ರಂದು ಬೆಳಗ್ಗೆ ಕೊಲ್ಯ, ಕುಜುಮಗದ್ದೆಯ ನಿವಾಸಿ ಅವಿವಾಹಿತ ಯುವಕ ಪ್ರಸಾದ್ (44) ಎಂಬವರು ಮನೆಯ ಪಕ್ಕದ ಪಾಳು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದರು. ಅ.4ರಂದು ಮಧ್ಯಾಹ್ನ ಮನೆಯಲ್ಲಿ ಮೊಬೈಲ್ ಫೋನ್ ಬಿಟ್ಟು ಹೋಗಿದ್ದ ಪ್ರಸಾದ್ ಮತ್ತೆ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಪೈಂಟರ್ ವೃತ್ತಿ ಮಾಡುತ್ತಿದ್ದ ಪ್ರಸಾದ್ ಖಿನ್ನತೆಯಿಂದ ಆತ್ಮಹತ್ಯೆ ನಡೆಸಿರೋದಾಗಿ ಶಂಕಿಸಲಾಗಿತ್ತು. ಹತ್ತು ದಿನಗಳ ಬಳಿಕ ಅದೇ ಪರಿಸರದಲ್ಲಿ ಬಾವಿಗೆ ಬಿದ್ದು ಮತ್ತೋರ್ವ ವೃದ್ಧೆ ಸಾವನ್ನಪ್ಪಿದ್ದಾರೆ.
68 year Old woman body found inside well at ullal in Mangalore. The deceased has been identified as Varija. Varija wasn't keeping well in her health conditions.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 11:44 am
HK News Desk
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm