ಬ್ರೇಕಿಂಗ್ ನ್ಯೂಸ್
15-10-24 05:00 pm Mangalore Correspondent ಕರಾವಳಿ
ಉಳ್ಳಾಲ, ಅ.15: ಶೃಂಗೇರಿ ಸೇರಿದಂತೆ ಕರಾವಳಿಯ ಪುಣ್ಯಕ್ಷೇತ್ರಗಳಿಗೆ ಬಂದಾಗ ಮನಸ್ಸಿಗೆ ತುಂಬಾನೇ ನೆಮ್ಮದಿ ಸಿಗುತ್ತದೆ. ಹಾಗಾಗಿ ಕರಾವಳಿಗೆ ಬಂದಾಗಲೆಲ್ಲ ಇಲ್ಲಿನ ಕಾರಣಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಜೀವನ ಚೆನ್ನಾಗಿರಲಿ ಎಂದು ಪ್ರಾರ್ಥಿಸುತ್ತೇನೆಂದು ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹೇಳಿದ್ದಾರೆ.
ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಆದಿಸ್ಥಳಕ್ಕೆ ಸೋಮವಾರ ಶಿವರಾಜ್ ಕುಮಾರ್ , ಗೀತಾ ದಂಪತಿ ಭೇಟಿ ನೀಡಿ ಅಜ್ಜನ ಕಟ್ಟೆಗೆ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ಮಾಧ್ಯಮದವರ ಜತೆ ಮಾತನಾಡಿದ ನಟ ಶಿವರಾಜ್ ಕುಮಾರ್ ಅವರು ಶೃಂಗೇರಿ ಮಠ ಸೇರಿದಂತೆ ಕರಾವಳಿಯ ಉಡುಪಿ ಶ್ರೀ ಕೃಷ್ಣ ಮಠ, ಕುದ್ರೋಳಿ ಗೋಕರ್ಣನಾಥೇಶ್ವರ ಕ್ಷೇತ್ರ, ವನದೇವತೆ, ಕೊರಗಜ್ಜನ ಕ್ಷೇತ್ರಗಳನ್ನ ಸಂದರ್ಶಿಸುತ್ತಾ ಬಂದಿದ್ದೇನೆ. ಎಲ್ಲಾ ಸಾನಿಧ್ಯಗಳಿಗೂ ಭೇಟಿ ಕೊಟ್ಟಾಗ ಮನಸ್ಸಿಗೆ ತುಂಬಾ ನೆಮ್ಮದಿ ಸಿಗುತ್ತದೆ. ಸದೃಢ ನಂಬಿಕೆ ಜೊತೆ ಜೀವನ ಚೆನ್ನಾಗಿರಲಿ ಎಂದು ಭಕ್ತಿಯಿಂದ ಪ್ರಾರ್ಥಿಸಲು ಕೊರಗಜ್ಜನ ಕ್ಷೇತ್ರಕ್ಕೆ ಬಂದಿದ್ದೇನೆ. ನ.15ರ ಆಸುಪಾಸಿನಲ್ಲಿ ಅರ್ಜುನ್ ಜನ್ಯ ನಿರ್ದೇಶಿಸಿರುವ ರಿಯಲ್ ಸ್ಟಾರ್ ಉಪೇಂದ್ರ, ರಾಜ್ ಬಿ. ಶೆಟ್ಟಿ ಜತೆ ತಾನು ನಟಿಸಿರುವ ಫಾರ್ಟಿ ಫೈವ್ ಚಿತ್ರ ತೆರೆ ಕಾಣಲಿದೆ. ಮತ್ತೊಂದು ಚಿತ್ರ ನಿರ್ಮಾಣದ ಬಗ್ಗೆಯೂ ಸಿದ್ಧತೆ ನಡೆದಿದ್ದು ಶೀಘ್ರವೇ ಪ್ರಾಜೆಕ್ಟ್ ಆರಂಭವಾಗಲಿದೆ ಎಂದರು.
ಈ ವೇಳೆ ಚಿತ್ರ ನಿರ್ಮಾಪಕರಾದ ಶ್ರೀಕಾಂತ್, ರಾಜೇಶ್ ಭಟ್, ಶ್ರೀ ಪಂಜಂದಾಯ ಬಂಟ ವೈದ್ಯನಾಥ ಮತ್ತು ಕೊರಗತನಿಯ ದೈವಗಳ ಆದಿಸ್ಥಳ ಟ್ರಸ್ಟ್ ನ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಟ್ರಸ್ಟಿಗಳು ಉಪಸ್ಥಿತರಿದ್ದು ಶಿವರಾಜ್ ಕುಮಾರ್ ದಂಪತಿಯನ್ನ ಕ್ಷೇತ್ರದ ಪರವಾಗಿ ಅಭಿನಂದಿಸಿದರು.
Renowned actor Shivaraj Kumar, accompanied by his wife Geeta, visited Kuthar Koragajja’s birthplace in Dekkad, Kuthar Mangalore and interacted with the press. The couple performed a special puja, seeking blessings for the success of the actor’s upcoming film, 'Bhairathi Ranagal', set to release statewide in Karnataka on November 15 under the Geetha Pictures banner.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm