ಬ್ರೇಕಿಂಗ್ ನ್ಯೂಸ್
17-10-24 04:34 pm Mangalore Correspondent ಕರಾವಳಿ
ಮಂಗಳೂರು, ಅ.17: ವಿಶ್ವಕ್ಕೆ ಮಹಾಕಾವ್ಯ ರಾಮಾಯಣವನ್ನು ಕೊಟ್ಟ ವಾಲ್ಮೀಕಿ ಮಹರ್ಷಿಯವರ ಜಯಂತಿಯನ್ನು ರಾಜ್ಯದಲ್ಲಿ ದುಃಖದಲ್ಲಿ ಆಚರಿಸುವ ಸ್ಥಿತಿ ಬಂದಿದೆ. ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂತಹ ಪರಿಸ್ಥಿತಿ ತಂದಿಟ್ಟಿದ್ದಾರೆ. ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆಸಿದ ವ್ಯಕ್ತಿಯೇ ಜೈಲಿನಿಂದ ಮುಖ್ಯಮಂತ್ರಿಯನ್ನು ಸನ್ಮಾನಿಸಿದ್ದಾರೆ, ಆಮೂಲಕ ಹಗರಣದಲ್ಲಿ ಸಿದ್ದರಾಮಯ್ಯ ಅವರೂ ಭಾಗಿ ಎಂದು ಸಾಬೀತು ಪಡಿಸಿದ್ದಾರೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ವಾಲ್ಮೀಕಿ ಮಹರ್ಷಿಯವರ ಬದುಕು, ಆದರ್ಶ ದಾರಿದೀಪ ಆಗಬೇಕಿತ್ತು. ಆದರೆ ರಾಜ್ಯ ಸರ್ಕಾರ ವಾಲ್ಮೀಕಿ ನಿಗಮದಲ್ಲೇ ಹಗರಣ ನಡೆಸಿದ್ದು ಹಿಂದುಳಿದ ಸಮುದಾಯಗಳ ಏಳಿಗೆಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದೆ. ತೆಲಂಗಾಣ ಚುನಾವಣೆಗೆ ಈ ಹಣವನ್ನು ಕಾಂಗ್ರೆಸ್ ಖರ್ಚು ಮಾಡಿದೆ. ಹಗರಣದ A1 ಆರೋಪಿ ಮಾಜಿ ಸಚಿವ ನಾಗೇಂದ್ರ ಬೇಲ್ ಮೇಲೆ ಬಿಡುಗಡೆಯಾಗಿರುವುದು ದುರದೃಷ್ಟಕರ. ಜೈಲಿನಿಂದ ಹೊರಬಂದು ವಿಜಯೋತ್ಸವ ಆಚರಿಸಿದ್ದಾರೆ. ಜೈಲಿನಿಂದ ನೇರವಾಗಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಸನ್ಮಾನಿಸಲಾಗಿದೆ. ಜೈಲಿನಿಂದ ಹೊರಬಂದ ಒಬ್ಬಾತ ಮುಖ್ಯಮಂತ್ರಿ ಅವರನ್ನು ಸನ್ಮಾನಿಸಿರುವುದು ರಾಜ್ಯದ ಜನರನ್ನು ತಲೆತಗ್ಗಿಸುವಂತೆ ಮಾಡಿದೆ.
ವಾಲ್ಮೀಕಿ ನಿಗಮದ ಹಗರಣ ಮುಖ್ಯಮಂತ್ರಿ ಅವರ ನಿರ್ದೇಶನದ ಮೇರೆಗೆ ಆಗಿರೋದು ಎಂಬುದೀಗ ಸಾಬೀತಾಗಿದೆ. 187 ಕೋಟಿ ಹಗರಣ ಅಲ್ಲ, 84 ಕೋಟಿ ಎಂದು ಸದನದಲ್ಲೇ ಮುಖ್ಯಮಂತ್ರಿಯವರು ಒಪ್ಪಿಕೊಂಡಿದ್ದರು. ಹಗರಣದ ಹಿನ್ನೆಲೆಯಲ್ಲಿ ರಾಜಿನಾಮೆ ಪಡೆದ ಸಚಿವರಿಂದಲೇ ಈಗ ಮುಖ್ಯಮಂತ್ರಿ ಸನ್ಮಾನಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಅವರೇ ಈ ಹಗರಣದಲ್ಲಿ ನೇರವಾಗಿ ಭಾಗಿಯಾಗಿರುವುದು ಈಗ ಸಾಬೀತಾಗಿದೆ. ಇಂಥ ಕೆಟ್ಟ ಮುಖ್ಯಮಂತ್ರಿ ಅಧಿಕಾರದಲ್ಲಿ ಮುಂದುವರಿಯಬಾರದು, ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಮತ್ತೆ ಚುನಾವಣೆ ಘೋಷಣೆಯಾಗಿದೆ, ಹಣ ಖರ್ಚು ಮಾಡಲು ಮತ್ತೆ ನಿಗಮಗಳ ಮೇಲೆ ಕಣ್ಣಿಡಲಾಗಿದೆ. ಈಗ ಮುಖ್ಯಮಂತ್ರಿ ಯಾವ ನಿಗಮದ ಮೇಲೆ ಕಣ್ಣಿಟ್ಟಿದ್ದಾರೆ ಗೊತ್ತಿಲ್ಲ. ಚುನಾವಣಾ ಖರ್ಚಿಗೆ ಕಾಂಗ್ರೆಸ್ ಗೆ ಕರ್ನಾಟಕ ಎಟಿಎಂ ಇದ್ದಂತಾಗಿದೆ. ನಿಗಮ, ಮಂಡಳಿಗಳ ಖಾತೆಯಲ್ಲಿರುವ ಹಣವನ್ನೂ ಖಾಲಿ ಮಾಡುತ್ತಿದ್ದಾರೆ ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹರಿಹಾಯ್ದಿದ್ದಾರೆ.
CM Siddaramaiah insulted Maharshi Valmiki by accepting shawl from B Nagendra slammed Mangalore MP Brijesh Chowta.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 11:44 am
HK News Desk
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm