ಬ್ರೇಕಿಂಗ್ ನ್ಯೂಸ್
18-10-24 02:12 pm Mangalore Correspondent ಕರಾವಳಿ
ಉಳ್ಳಾಲ, ಅ.18: ತಿಂಗಳ ಹಿಂದಷ್ಟೆ ಖರೀದಿಸಿದ್ದ ಹೊಸ ಟಿವಿಎಸ್ ಎಂಟಾರ್ಕ್ ಸ್ಕೂಟರ್ ಒಂದು ತನ್ನಷ್ಟಕ್ಕೆ ಬೆಂಕಿ ಹತ್ತಿ ಹೊತ್ತಿ ಉರಿದ ಘಟನೆ ಕುಂಪಲ ವಿದ್ಯಾನಗರದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.
ಕುಂಪಲ ವಿದ್ಯಾನಗರ ನಿವಾಸಿ ಐಟಿಐ ಕಲಿಯುತ್ತಿರುವ ರಾಕೇಶ್ ಎಂಬ ವಿದ್ಯಾರ್ಥಿ ತಿಂಗಳ ಹಿಂದೆ ಖರೀದಿಸಿದ್ದ ಟಿವಿಎಸ್ ಕಂಪನಿಯ ಎಂಟಾರ್ಕ್ ಸ್ಕೂಟರ್ ಹೊತ್ತಿ ಉರಿದಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ. ಮನೆಯಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ ನಿನ್ನೆ ಮಧ್ಯರಾತ್ರಿ 12.30ರ ವೇಳೆಗೆ ತನ್ನಷ್ಟಕ್ಕೆ ಬೆಂಕಿ ಹತ್ತಿದ್ದು ಧಗಧಗನೆ ಉರಿದು ಸುಟ್ಟು ಕರಕಲಾಗಿದೆ. ಘಟನೆಯಿಂದ ಮನೆಯ ಗೋಡೆ, ಕಿಟಕಿಗಳ ಗಾಜುಗಳು, ಒಣಗಲು ಹಾಕಲಾದ ಬಟ್ಟೆಗಳು ಸುಟ್ಟು ಕರಕಲಾಗಿ ಅಪಾರ ನಷ್ಟ ಉಂಟಾಗಿದೆ. ಮನೆಗೂ ಬೆಂಕಿ ವ್ಯಾಪಿಸಲಿದ್ದು ನಿದ್ದೆಯಿಂದ ಎಚ್ಚೆತ್ತ ಮನೆ ಮಂದಿ ಬೆಂಕಿಯನ್ನ ನಂದಿಸಿದ್ದಾರೆ. ಮನೆಯೊಳಗೆ ರಾಕೇಶ್ ಸೇರಿದಂತೆ ಅವರ ತಂದೆ, ತಾಯಿ, ಅಕ್ಕ ಮಲಗಿದ್ದು ಸ್ಕೂಟರ್ ಗೆ ಬೆಂಕಿ ತಗುಲಿದ ವೇಳೆ ನಿದ್ದೆಯಿಂದ ಎಚ್ಚೆತ್ತು ಬೆಂಕಿಯನ್ನ ನಂದಿಸಿದ ಪರಿಣಾಮ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.
ಬಡ ಕುಟುಂಬದ ರಾಕೇಶ್ ಅವರು ಓದಿನೊಂದಿಗೆ ಪಾರ್ಟ್ ಟೈಮ್ ಕೆಲಸ ಮಾಡಿ ತಿಂಗಳ ಹಿಂದಷ್ಟೆ ತೊಕ್ಕೊಟ್ಟಿನ "ಸೋನಾ ಟಿವಿಎಸ್ " ಶೋರೂಂನಲ್ಲಿ ಸ್ಕೂಟರ್ ಖರೀದಿಸಿದ್ದರು. ಎರಡು ದಿನಗಳ ಹಿಂದಷ್ಟೆ ಸ್ಕೂಟರಿನ ಮೊದಲ ಇಎಮ್ ಐ ಕಂತನ್ನು ಕಟ್ಟಿದ್ದರು. ಸ್ಕೂಟರ್ ಬ್ಯಾಟರಿ ಸಿಡಿದು ಬೆಂಕಿ ಹತ್ತಿರುವುದಾಗಿ ಶಂಕಿಸಲಾಗಿದೆ. ರಾಕೇಶ್ ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
New Tvs scooty cathes fire at kumapla in mangalore. Rakesh had brought tvs ntorq recently but midnight it has caught sudden fire. Even his house furniture and doors have been damaged.
27-07-25 01:09 pm
HK News Desk
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
26-07-25 03:31 pm
HK News Desk
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
26-07-25 10:41 pm
Mangalore Correspondent
Mangalore, Dharmasthala Case, SIT, whistle bl...
26-07-25 10:05 pm
ಧರ್ಮಸ್ಥಳ ಎಸ್ಐಟಿ ತಂಡದಿಂದ ಮತ್ತೊಬ್ಬರು ಹೊರಕ್ಕೆ ;...
26-07-25 08:20 pm
Mangalore Rajashree Jayaraj Poojary Death: ಬಹ...
26-07-25 04:38 pm
India’s Largest Job Fair ‘Alva’s Pragati 2025...
26-07-25 11:37 am
27-07-25 03:26 pm
Bangalore Correspondent
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm
ಮನೆಗೆ ದಿನಸಿ ತರಲು ಹೋದ ಯುವತಿಗೆ ನಡು ರಸ್ತೆಯಲ್ಲೇ ತ...
24-07-25 10:38 pm
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm