ಬ್ರೇಕಿಂಗ್ ನ್ಯೂಸ್
18-10-24 02:12 pm Mangalore Correspondent ಕರಾವಳಿ
ಉಳ್ಳಾಲ, ಅ.18: ತಿಂಗಳ ಹಿಂದಷ್ಟೆ ಖರೀದಿಸಿದ್ದ ಹೊಸ ಟಿವಿಎಸ್ ಎಂಟಾರ್ಕ್ ಸ್ಕೂಟರ್ ಒಂದು ತನ್ನಷ್ಟಕ್ಕೆ ಬೆಂಕಿ ಹತ್ತಿ ಹೊತ್ತಿ ಉರಿದ ಘಟನೆ ಕುಂಪಲ ವಿದ್ಯಾನಗರದಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದೆ.
ಕುಂಪಲ ವಿದ್ಯಾನಗರ ನಿವಾಸಿ ಐಟಿಐ ಕಲಿಯುತ್ತಿರುವ ರಾಕೇಶ್ ಎಂಬ ವಿದ್ಯಾರ್ಥಿ ತಿಂಗಳ ಹಿಂದೆ ಖರೀದಿಸಿದ್ದ ಟಿವಿಎಸ್ ಕಂಪನಿಯ ಎಂಟಾರ್ಕ್ ಸ್ಕೂಟರ್ ಹೊತ್ತಿ ಉರಿದಿದ್ದು ಸಂಪೂರ್ಣ ಸುಟ್ಟು ಕರಕಲಾಗಿದೆ. ಮನೆಯಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ ನಿನ್ನೆ ಮಧ್ಯರಾತ್ರಿ 12.30ರ ವೇಳೆಗೆ ತನ್ನಷ್ಟಕ್ಕೆ ಬೆಂಕಿ ಹತ್ತಿದ್ದು ಧಗಧಗನೆ ಉರಿದು ಸುಟ್ಟು ಕರಕಲಾಗಿದೆ. ಘಟನೆಯಿಂದ ಮನೆಯ ಗೋಡೆ, ಕಿಟಕಿಗಳ ಗಾಜುಗಳು, ಒಣಗಲು ಹಾಕಲಾದ ಬಟ್ಟೆಗಳು ಸುಟ್ಟು ಕರಕಲಾಗಿ ಅಪಾರ ನಷ್ಟ ಉಂಟಾಗಿದೆ. ಮನೆಗೂ ಬೆಂಕಿ ವ್ಯಾಪಿಸಲಿದ್ದು ನಿದ್ದೆಯಿಂದ ಎಚ್ಚೆತ್ತ ಮನೆ ಮಂದಿ ಬೆಂಕಿಯನ್ನ ನಂದಿಸಿದ್ದಾರೆ. ಮನೆಯೊಳಗೆ ರಾಕೇಶ್ ಸೇರಿದಂತೆ ಅವರ ತಂದೆ, ತಾಯಿ, ಅಕ್ಕ ಮಲಗಿದ್ದು ಸ್ಕೂಟರ್ ಗೆ ಬೆಂಕಿ ತಗುಲಿದ ವೇಳೆ ನಿದ್ದೆಯಿಂದ ಎಚ್ಚೆತ್ತು ಬೆಂಕಿಯನ್ನ ನಂದಿಸಿದ ಪರಿಣಾಮ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.



ಬಡ ಕುಟುಂಬದ ರಾಕೇಶ್ ಅವರು ಓದಿನೊಂದಿಗೆ ಪಾರ್ಟ್ ಟೈಮ್ ಕೆಲಸ ಮಾಡಿ ತಿಂಗಳ ಹಿಂದಷ್ಟೆ ತೊಕ್ಕೊಟ್ಟಿನ "ಸೋನಾ ಟಿವಿಎಸ್ " ಶೋರೂಂನಲ್ಲಿ ಸ್ಕೂಟರ್ ಖರೀದಿಸಿದ್ದರು. ಎರಡು ದಿನಗಳ ಹಿಂದಷ್ಟೆ ಸ್ಕೂಟರಿನ ಮೊದಲ ಇಎಮ್ ಐ ಕಂತನ್ನು ಕಟ್ಟಿದ್ದರು. ಸ್ಕೂಟರ್ ಬ್ಯಾಟರಿ ಸಿಡಿದು ಬೆಂಕಿ ಹತ್ತಿರುವುದಾಗಿ ಶಂಕಿಸಲಾಗಿದೆ. ರಾಕೇಶ್ ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
New Tvs scooty cathes fire at kumapla in mangalore. Rakesh had brought tvs ntorq recently but midnight it has caught sudden fire. Even his house furniture and doors have been damaged.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm