ಬ್ರೇಕಿಂಗ್ ನ್ಯೂಸ್
18-10-24 05:00 pm Mangalore Correspondent ಕರಾವಳಿ
ಪುತ್ತೂರು, ಅ.18: ಬಿಲ್ಲವ ಸಮಾಜದ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿ ವಿವಾದ ಮೈಮೇಲೆ ಎಳಕೊಂಡಿರುವ ಪಂಜ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಇದರ ಬೆನ್ನಲ್ಲೇ ಬೆಳ್ಳಾರೆ ಪೊಲೀಸರು ಆರೋಪಿತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಪುತ್ತೂರಿನಲ್ಲಿ ಡಿವೈಎಸ್ಪಿ ಕಚೇರಿ ಮುಂಭಾಗದಲ್ಲಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಆರೋಪಿತ ಸಂಜೀವ ಪೂಜಾರಿಯನ್ನು ಸಂಜೆಯೊಳಗೆ ಬಂಧಿಸಬೇಕು ಎಂದು ಆಗ್ರಹ ಮಾಡಿದ್ದಾರೆ. ಸ್ಥಳಕ್ಕೆ ಬಂದ ಡಿವೈಎಸ್ಪಿ ಅರುಣ್ ಅವರು ಬಂಧನಕ್ಕೆ ಒಂದು ದಿನದ ಸಮಯ ಕೊಡಿ ಎಂದು ಕೇಳಿದಾಗ, ಕಾರ್ಯಕರ್ತರು ಅದಕ್ಕೆ ಒಪ್ಪಲಿಲ್ಲ. ಇವತ್ತು ಸಂಜೆಯೊಳಗೆ ಬಂಧನ ಮಾಡಬೇಕು ಎಂದು ಆಗ್ರಹ ಮಾಡಿದ್ದಾರೆ.


ಇದರ ಬೆನ್ನಲ್ಲೇ ಆರೋಪಿ ಸಂಜೀವ ಪೂಜಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ. ಹಿಂದು ಸಂಘಟನೆ ಕಾರ್ಯಕರ್ತ ಸುರೇಶ್ ಕಾಸರಗೋಡು ಎಂಬವರು ಫೋನ್ ಮಾಡಿದ್ದಾಗ, ಬಿಲ್ಲವ ಸಮಾಜದ ಒಂದು ಲಕ್ಷ ಯುವತಿಯರು ಸೂಳೆಯರಿದ್ದಾರೆ, ಇದಕ್ಕೆ ತನ್ನಲ್ಲಿ ಹತ್ತು ಸಾವಿರದಷ್ಟು ದಾಖಲೆ ಇದೆ ಎಂದು ಹೇಳಿದ್ದರು. ಈ ರೀತಿ ಮಾತನಾಡಿದ್ದ ಆಡಿಯೋ ವೈರಲ್ ಆಗುತ್ತಿದ್ದಂತೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಬೆಳ್ಳಾರೆ ಮತ್ತು ಮೂಡುಬಿದ್ರೆ ಠಾಣೆಗೆ ದೂರು ನೀಡಿದ್ದರು.
ನಾಲಗೆ ಕತ್ತರಿಸುತ್ತೇವೆ ಎಂದ ಮುಖಂಡ
ಇಂದು ಬೆಳಗ್ಗೆ ಪುತ್ತೂರಿನ ಡಿವೈಎಸ್ಪಿ ಕಚೇರಿ ಎದುರಲ್ಲಿ ಹಿಂಜಾವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಹಿಂಜಾವೇ ಮುಖಂಡ ಸಮಿತ್ ರಾಜ್ ದರೆಗುಡ್ಡೆ, ಸಂಜೀವ ಪೂಜಾರಿ ತನ್ನ ಬಿಲ್ಲವ ಸಮಾಜದ ಬಗ್ಗೆ ಈ ರೀತಿ ಅವಹೇಳನ ಮಾಡಿದ್ದರೂ ಒಂದೇ ಒಂದು ಬಿಲ್ಲವ ಸಂಘಗಳು ಚಕಾರ ಎತ್ತಿಲ್ಲ. ಪೊಲೀಸರು ಸರಳ ಸೆಕ್ಷನ್ ಹಾಕಿ ಕೇಸು ಹಾಕಿದ್ದಾರೆ. ಕಠಿಣ ಕ್ರಮ ಜರುಗಿಸದಿದ್ದರೆ, ಮಹಿಳೆಯರನ್ನೇ ಒಟ್ಟು ಸೇರಿಸಿ ಆತನ ನಾಲಗೆ ಕತ್ತರಿಸುತ್ತೇವೆ, ಈತ ಅನ್ಯಧರ್ಮದವರ ಬಗ್ಗೆ ಇಂಥ ಮಾತು ಹೇಳುತ್ತಿದ್ದರೆ ಈಗಲೇ ನಾಲಗೆ, ಕೈ ಕಟ್ ಮಾಡುತ್ತಿದ್ದರು. ಕೂಡಲೇ ಬಂಧನ ಮಾಡದಿದ್ದರೆ ನಾವೇ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
Puttur Complaint filed against forest officer for derogatory remarks, officer taken to police custody after protest by Hindu Jagrana vedike. Previously, the same officer faced allegations for making derogatory posts about Bhajans, leading to a complaint being filed with the department.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm