ಬ್ರೇಕಿಂಗ್ ನ್ಯೂಸ್
18-10-24 05:00 pm Mangalore Correspondent ಕರಾವಳಿ
ಪುತ್ತೂರು, ಅ.18: ಬಿಲ್ಲವ ಸಮಾಜದ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿ ವಿವಾದ ಮೈಮೇಲೆ ಎಳಕೊಂಡಿರುವ ಪಂಜ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ವಿರುದ್ಧ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಇದರ ಬೆನ್ನಲ್ಲೇ ಬೆಳ್ಳಾರೆ ಪೊಲೀಸರು ಆರೋಪಿತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.
ಪುತ್ತೂರಿನಲ್ಲಿ ಡಿವೈಎಸ್ಪಿ ಕಚೇರಿ ಮುಂಭಾಗದಲ್ಲಿ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಆರೋಪಿತ ಸಂಜೀವ ಪೂಜಾರಿಯನ್ನು ಸಂಜೆಯೊಳಗೆ ಬಂಧಿಸಬೇಕು ಎಂದು ಆಗ್ರಹ ಮಾಡಿದ್ದಾರೆ. ಸ್ಥಳಕ್ಕೆ ಬಂದ ಡಿವೈಎಸ್ಪಿ ಅರುಣ್ ಅವರು ಬಂಧನಕ್ಕೆ ಒಂದು ದಿನದ ಸಮಯ ಕೊಡಿ ಎಂದು ಕೇಳಿದಾಗ, ಕಾರ್ಯಕರ್ತರು ಅದಕ್ಕೆ ಒಪ್ಪಲಿಲ್ಲ. ಇವತ್ತು ಸಂಜೆಯೊಳಗೆ ಬಂಧನ ಮಾಡಬೇಕು ಎಂದು ಆಗ್ರಹ ಮಾಡಿದ್ದಾರೆ.


ಇದರ ಬೆನ್ನಲ್ಲೇ ಆರೋಪಿ ಸಂಜೀವ ಪೂಜಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದುಬಂದಿದೆ. ಹಿಂದು ಸಂಘಟನೆ ಕಾರ್ಯಕರ್ತ ಸುರೇಶ್ ಕಾಸರಗೋಡು ಎಂಬವರು ಫೋನ್ ಮಾಡಿದ್ದಾಗ, ಬಿಲ್ಲವ ಸಮಾಜದ ಒಂದು ಲಕ್ಷ ಯುವತಿಯರು ಸೂಳೆಯರಿದ್ದಾರೆ, ಇದಕ್ಕೆ ತನ್ನಲ್ಲಿ ಹತ್ತು ಸಾವಿರದಷ್ಟು ದಾಖಲೆ ಇದೆ ಎಂದು ಹೇಳಿದ್ದರು. ಈ ರೀತಿ ಮಾತನಾಡಿದ್ದ ಆಡಿಯೋ ವೈರಲ್ ಆಗುತ್ತಿದ್ದಂತೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಬೆಳ್ಳಾರೆ ಮತ್ತು ಮೂಡುಬಿದ್ರೆ ಠಾಣೆಗೆ ದೂರು ನೀಡಿದ್ದರು.
ನಾಲಗೆ ಕತ್ತರಿಸುತ್ತೇವೆ ಎಂದ ಮುಖಂಡ
ಇಂದು ಬೆಳಗ್ಗೆ ಪುತ್ತೂರಿನ ಡಿವೈಎಸ್ಪಿ ಕಚೇರಿ ಎದುರಲ್ಲಿ ಹಿಂಜಾವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಹಿಂಜಾವೇ ಮುಖಂಡ ಸಮಿತ್ ರಾಜ್ ದರೆಗುಡ್ಡೆ, ಸಂಜೀವ ಪೂಜಾರಿ ತನ್ನ ಬಿಲ್ಲವ ಸಮಾಜದ ಬಗ್ಗೆ ಈ ರೀತಿ ಅವಹೇಳನ ಮಾಡಿದ್ದರೂ ಒಂದೇ ಒಂದು ಬಿಲ್ಲವ ಸಂಘಗಳು ಚಕಾರ ಎತ್ತಿಲ್ಲ. ಪೊಲೀಸರು ಸರಳ ಸೆಕ್ಷನ್ ಹಾಕಿ ಕೇಸು ಹಾಕಿದ್ದಾರೆ. ಕಠಿಣ ಕ್ರಮ ಜರುಗಿಸದಿದ್ದರೆ, ಮಹಿಳೆಯರನ್ನೇ ಒಟ್ಟು ಸೇರಿಸಿ ಆತನ ನಾಲಗೆ ಕತ್ತರಿಸುತ್ತೇವೆ, ಈತ ಅನ್ಯಧರ್ಮದವರ ಬಗ್ಗೆ ಇಂಥ ಮಾತು ಹೇಳುತ್ತಿದ್ದರೆ ಈಗಲೇ ನಾಲಗೆ, ಕೈ ಕಟ್ ಮಾಡುತ್ತಿದ್ದರು. ಕೂಡಲೇ ಬಂಧನ ಮಾಡದಿದ್ದರೆ ನಾವೇ ಕ್ರಮ ಜರುಗಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
Puttur Complaint filed against forest officer for derogatory remarks, officer taken to police custody after protest by Hindu Jagrana vedike. Previously, the same officer faced allegations for making derogatory posts about Bhajans, leading to a complaint being filed with the department.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm