ಬ್ರೇಕಿಂಗ್ ನ್ಯೂಸ್
19-10-24 12:47 pm Mangalore Correspondent ಕರಾವಳಿ
ಉಳ್ಳಾಲ, ಅ.18: "ಭೀಮ" ಚಿತ್ರದ ಅದ್ದೂರಿ ಯಶಸ್ಸಿನ ನಂತರ ಸ್ಯಾಂಡಲ್ ವುಡ್ ಖ್ಯಾತ ನಟ ದುನಿಯಾ ವಿಜಯ್ ಅವರು ಕಾಟೇರ ಚಿತ್ರ ಖ್ಯಾತಿಯ ಜಡೇಶ್ ಕುಮಾರ್ ಹಂಪಿ ನಿರ್ದೇಶನದ ಹೆಸರಿಡದ ಹೊಸ ಚಿತ್ರವೊಂದರ ಶೂಟಿಂಗ್ ಗಾಗಿ ಮಂಗಳೂರಿಗೆ ಬಂದಿದ್ದು, ಶುಕ್ರವಾರ ಸಂಜೆ ಮಂಗಳೂರು ಹೊರವಲಯದ ಕಲ್ಲಾಪು ಬುರ್ದುಗೋಳಿಯ ಗುಳಿಗ ಕೊರಗಜ್ಜ ಉದ್ಭವ ಶಿಲೆಯ ಆದಿಸ್ಥಳಕ್ಕೆ ಭೇಟಿ ನೀಡಿ ಚಿತ್ರದ ಯಶಸ್ಸಿಗಾಗಿ ಶಿರಬಾಗಿ ಪ್ರಾರ್ಥನೆ ಸಲ್ಲಿಸಿದರು.
ಕ್ಷೇತ್ರ ಭೇಟಿಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇಪ್ಪತ್ತೊಂಬತ್ತನೇ ಸಿನೆಮಾದಲ್ಲಿ ನಟಿಸುವ ಸಲುವಾಗಿ ಮಂಗಳೂರಿಗೆ ಬಂದಿದ್ದೇನೆ. ಮಂಗಳೂರಿಗೆ ಈ ಮೊದಲು ಭೇಟಿ ನೀಡಿದ್ದರೂ ಮೊದಲ ಬಾರಿ ಕೊರಗಜ್ಜನ ಕ್ಷೇತ್ರಕ್ಕೆ ಬಂದಿದ್ದೇನೆ. ಕ್ಷೇತ್ರದಲ್ಲಿ ತುಂಬಾನೇ ಧನಾತ್ಮಕ ಸೆಳೆತ ಇದೆ. ಕೊರಗಜ್ಜನಲ್ಲಿ ಹರಕೆಯೊಂದನ್ನ ಹೇಳಿದ್ದೇನೆ. ಅದು ಖಂಡಿತ ಈಡೇರುತ್ತೆ, ಬಳಿಕ ಇಲ್ಲಿಗೆ ಬಂದು ಅದರ ಬಗ್ಗೆ ನಿಮ್ಮಲ್ಲೇ ಹೇಳುತ್ತೇನೆ. ದೈವದ ಆಜ್ಞೆಯಿಂದಲೇ ನನ್ನನ್ನ ಇಲ್ಲಿ ಕರೆಸ್ಕೊಳ್ಳಲಾಗಿದೆ. ಭೀಮ ಚಿತ್ರವನ್ನು ರಾಜ್ಯದ ಜನರಲ್ಲದೆ ಮಂಗಳೂರಿಗರು ಅತ್ಯಂತ ಪ್ರೀತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಿಸಿ ಪ್ರೋತ್ಸಾಹಿಸಿದ್ದರಿಂದಲೇ ಉತ್ತಮ ಕಲೆಕ್ಷನ್ ಬಂದಿದೆ. ಮಂಗಳೂರಿಗರನ್ನ ನಾನು ತುಂಬಾ ಪ್ರೀತಿಸುತ್ತೇನೆ. ಮುಂದೆ ಮಗಳಿಗಾಗಿ "ಸಿಟಿ ಲೈಪ್ಸ್" ಹೆಸರಲ್ಲಿ ನನ್ನ ನಿರ್ದೇಶನದಲ್ಲೇ ಚಿತ್ರ ಮಾಡುತ್ತಿದ್ದೇನೆ ಎಂದರು.





ಬುರ್ದುಗೋಳಿ ಕ್ಷೇತ್ರದ ಪರವಾಗಿ ದುನಿಯಾ ವಿಜಯ್ ಅವರನ್ನ ಸನ್ಮಾನಿಸಿ ಗೌರವಿಸಲಾಯಿತು. ಕದ್ರಿ ಈವೆಂಟ್ಸ್ ಸಂಚಾಲಕರಾದ ಜಗದೀಶ್ ಕದ್ರಿ, ದುನಿಯಾ ವಿಜಯ್ ಜತೆಯಲ್ಲಿದ್ದರು. ಬುರ್ದುಗೋಳಿ ಕ್ಷೇತ್ರದ ಆಡಳಿತ ಸಮಿತಿಯ ಪುರುಷೋತ್ತಮ ಮೇಲಾಂಟ, ನವೀನ್ ಕಾಯಂಗಲ, ಪ್ರಶಾಂತ್ ಕಾಯಂಗಲ, ಪುರುಷೋತ್ತಮ ಕಲ್ಲಾಪು , ಸಂಜಯ್,ಯೋಗಿಶ್, ಜಯಶ್ರೀ ಕೊಟ್ಟಾರಿ, ದೀಕ್ಷಾ ಕುತ್ತಾರು,ವನಿತ ಗಿರೀಶ್ ,ಗುರು ಪ್ರಸಾದ್ ಕೊಟ್ಟಾರಿ, ಪ್ರವೀಣ್ ಕೊಲ್ಯ,ಸದಾನಂದ ,ರೇಣುಕ ಮೊದಲಾದವರು ಉಪಸ್ಥಿತರಿದ್ದರು.
Sandalwood actor Duniya Vijay, currently shooting in Mangaluru, visited the Kallapu Burdugoli Guliga Koragajja Udbhava Shile Adisthala on Friday. Speaking to the media, he said, “I’ve heard a lot about Korgajja and wanted to visit this special place while I’m here in Mangaluru. I am producing a movie for my doctor, titled City Life, where I’m also the director.”
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm