ಬ್ರೇಕಿಂಗ್ ನ್ಯೂಸ್
08-08-20 11:43 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 8: ಕರಾವಳಿ ಮತ್ತು ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿದಿದೆ. ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯಲಾರಂಭಿಸಿದೆ. ಬಂಟ್ವಾಳ ತಾಲೂಕಿನ ವಿವಿಧೆಡೆ ನೆರೆ ಕಾಣಿಸಿಕೊಂಡಿದ್ದು ಹಲವಾರು ಮನೆಗಳು ಮತ್ತು ಕೃಷಿ ಭೂಮಿ ಮುಳುಗಡೆಯಾಗಿದೆ.
ಕುಮಾರಧಾರಾ ಮತ್ತು ನೇತ್ರಾವತಿ ನದಿಗಳ ಸಂಗಮ ಸ್ಥಾನ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯ ನೀರಿನ ಮಟ್ಟ 30 ಮೀಟರ್ ಆಗಿದ್ದು, ಇದೀಗ ಅದಕ್ಕಿಂತಲೂ ಹೆಚ್ಚಿನ ಎತ್ತರದಲ್ಲಿ ನೀರು ಹರಿಯುತ್ತಿದೆ. ನೀರಿನ ಹೆಚ್ಚಳದಿಂದಾಗಿ ಉಪ್ಪಿನಂಗಡಿ, ನಟ್ಟಿಬೈಲು, ನೆಲ್ಯಾಡಿ ಮೊದಲಾದ ಕಡೆ ಕೃಷಿಭೂಮಿಗೆ ನೀರು ನುಗ್ಗಿದೆ. ಬಂಟ್ವಾಳದಲ್ಲೂ ನೇತ್ರಾವತಿ ನದಿ ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಈ ಭಾಗದಲ್ಲಿ ಅಪಾಯದ ಮಟ್ಟ 8.5 ಮೀಟರ್ ಆಗಿದ್ದು, ಇದೀಗ ನದಿ 9 ಮೀಟರ್ ಗೂ ಹೆಚ್ಚಿನ ಎತ್ತರದಲ್ಲಿ ಹರಿಯುತ್ತಿದೆ. ಇದರಿಂದಾಗಿ ಪಾಣೆಮಂಗಳೂರು, ಗೂಡಿನ ಬಳಿ ಮೊದಲಾದ ಕಡೆ ನೀರು ವಸತಿ ಪ್ರದೇಶಗಳಿಗೆ ನುಗ್ಗಿದ್ದು ಕೃತಕ ನೆರೆ ಉಂಟಾಗಿದೆ.

ಕುಮಾರಧಾರಾ ನದಿಯಲ್ಲಿ ನೀರಿನ ಹರಿವಿನಲ್ಲಿ ಕೊಂಚ ಇಳಿಮುಖವಾಗಿದ್ದರೂ, ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಸತತ ಆರನೇ ದಿನವೂ ಮುಳುಗಡೆಯಾಗಿದೆ. ಚಾರ್ಮಾಡಿ ಘಾಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ ಹೆಚ್ಚಾಗಿ ಸುರಿಯುತ್ತಿರುವ ಹಿನ್ನಲೆಯಲ್ಲಿ ಚಾರ್ಮಾಡಿಯ ಮೃತ್ಯುಂಜಯ ಹೊಳೆಯಲ್ಲೂ ಪ್ರವಾಹದ ರೀತಿ ನೀರು ಹರಿಯಲಾರಂಭಿಸಿದೆ. ಕೊಳಂಬೆ, ಚಾರ್ಮಾಡಿ ಪ್ರದೇಶಗಳಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿವೆ. ಕೊಳಂಬೆ ಪ್ರದೇಶದಲ್ಲಿ ಸುಮಾರು 15 ಕ್ಕೂ ಮಿಕ್ಕಿದ ಮನೆಗಳು ಜಲಾವೃತಗೊಂಡಿದೆ. ಕಳೆದ ಬಾರಿ ರೌದ್ರ ನರ್ತನ ತೋರಿದ್ಧ ಮೃತ್ಯುಂಜಯ ಹೊಳೆ ಹರಿವು ಅಲ್ಲಿನ ಜನರಲ್ಲಿ ಆತಂಕ ಹುಟ್ಟಿಸಿದೆ.
Video:
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
15-05-26 12:21 pm
HK News Staffer
ಬೇರೊಬ್ಬ ಮಹಿಳೆ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಮಾಡಿಸ...
14-05-26 01:41 pm
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm