ಬ್ರೇಕಿಂಗ್ ನ್ಯೂಸ್
20-10-24 09:55 pm Mangalore Correspondent ಕರಾವಳಿ
ಮಂಗಳೂರು, ಅ.20: ನಂತೂರು ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಡಿಕ್ಕಿಯಾಗಿ ಮೃತಪಟ್ಟ ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ (27) ಅವರು ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಸ್ಪೀಚ್ ಅಂಡ್ ಹಿಯರಿಂಗ್ ವಿಭಾಗದಲ್ಲಿ ವೈದ್ಯೆಯಾಗಿದ್ದು, ಇತ್ತೀಚೆಗಷ್ಟೇ ಮದುವೆ ನಿಶ್ಚಯವಾಗಿತ್ತು ಎನ್ನುವ ಮಾಹಿತಿ ತಿಳಿದುಬಂದಿದೆ.
ಕ್ರಿಸ್ತಿ ಕ್ರಾಸ್ತಾಗೆ ದೇರೆಬೈಲಿನ ಯುವಕನ ಜೊತೆಗೆ ಮದುವೆ ನಿಶ್ಚಯವಾಗಿತ್ತು. ನ.23ರಂದು ಮಂಗಳೂರಿನ ಚರ್ಚ್ ಹಾಲ್ ಒಂದರಲ್ಲಿ ಮದುವೆಗೆ ದಿನ ನಿಗದಿಪಡಿಸಿ ಆಮಂತ್ರಣ ಪತ್ರಿಕೆಯನ್ನೂ ಹಂಚಲಾಗಿತ್ತು. ಈ ನಡುವೆ, ಕ್ರಿಶ್ಚಿಯನ್ನರ ಚರ್ಚ್ ಪದ್ಧತಿಯಂತೆ ಮದುವೆಗೂ ಮುನ್ನ ಯುವಕ- ಯುವತಿಗೆ ಆಯಾ ಚರ್ಚ್ ಗಳಲ್ಲಿ ಮದುವೆ ಕುರಿತಾಗಿ ತರಬೇತಿ ಇರುತ್ತದೆ. ಇದಕ್ಕಾಗಿ ಕ್ರಿಸ್ತಿ ಕ್ರಾಸ್ತಾ ಅವರು ಭಾನುವಾರ ಸಂಜೆ ನಂತೂರಿನ ಶಾಂತಿ ಕಿರಣ ಸಭಾಂಗಣದಲ್ಲಿ ತರಬೇತಿಗೆ ಹಾಜರಾಗಿದ್ದರು.
ಚರ್ಚ್ ಪದ್ಧತಿಯಂತೆ ಮೂರು ಭಾನುವಾರಗಳ ಮದುವೆ ಘೋಷಣೆಯೂ ಇಂದಿಗೆ ಮುಗಿದಿತ್ತು. ಹೀಗಾಗಿ ಮದುವೆ ಚರ್ಚ್ ಪ್ರಕಾರ ಅಧಿಕೃತವಾಗಿತ್ತು. ಇದಲ್ಲದೆ, ಮದುವೆ ಕುರಿತ ತರಬೇತಿಯನ್ನೂ ಮುಗಿಸಿ ಸಂಜೆ ವೇಳೆಗೆ ಶಾಂತಿ ಕಿರಣ ಸಭಾಂಗಣದಿಂದ ಮನೆ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದರು. ಈ ವೇಳೆ, ನಂತೂರು ಕಡೆಯಿಂದ ಬಂದಿದ್ದ ಕಂಟೇನರ್ ಲಾರಿ ನೇರವಾಗಿ ಡಿಕ್ಕಿಯಾಗಿದ್ದು ಹಿಂಭಾಗದ ಚಕ್ರಕ್ಕೆ ಸಿಲುಕಿದ್ದ ಯುವತಿ ಸ್ಥಳದಲ್ಲೇ ದುರಂತ ಸಾವನ್ನಪ್ಪಿದ್ದಾರೆ. ಲಾರಿ ಚಾಲಕನ ಧಾವಂತ, ನಿರ್ಲಕ್ಷ್ಯದ ಚಾಲನೆ ಬಾಳಿ ಬದುಕಬೇಕಿದ್ದ ಯುವತಿಯ ಜೀವ ಕಿತ್ತುಕೊಂಡಿದೆ. ಇತ್ತ ಮದುವೆಗೆ ಸಿದ್ಧತೆ ನಡೆಸುತ್ತಿದ್ದ ಮನೆಯವರಿಗೆ ಏಕೈಕ ಪುತ್ರಿಯ ಸಾವು ಶೋಕ ಸಾಗರದಲ್ಲಿ ಮುಳುಗಿಸಿದೆ. ಮದುವೆ ಸಡಗರದಲ್ಲಿದ್ದ ಮನೆಯಲ್ಲಿ ಸ್ಮಶಾನ ಮೌನ ಆವರಿಸಿದೆ.
Nanthoor accident, Christy Crasta dies of road accident month before marriage in Mangalore. Christy's wedding was scheduled for November 23. She was a teacher a speech and hearing teacher at Fr Mullers college at Kankandy. The funeral rites of Christy Crasta will be held on Monday October 21 at St Dominic Church, Ashoknagar.
19-09-25 10:04 pm
Bangalore Correspondent
Caste survey: ಜಾತಿ ಸಮೀಕ್ಷೆಗೆ ಸರ್ಕಾರದ ಸಚಿವರಿಂದ...
19-09-25 02:16 pm
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
19-09-25 05:45 pm
HK News Desk
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
19-09-25 10:46 pm
Mangalore Correspondent
ಕಟೀಲು ದೇಗುಲದಲ್ಲಿ ಸೇವಾ ದರ ಏಕಾಏಕಿ ದುಪ್ಪಟ್ಟು ; ಬ...
19-09-25 10:21 pm
ಧರ್ಮಸ್ಥಳ ಕೇಸ್ ; ಅನೇಕ ಶವಗಳನ್ನು ಹೂತಿದ್ದೆವು ಎಂದಿ...
19-09-25 09:59 pm
Kadri, Mangalore, Smart City: ‘ಸ್ಮಾರ್ಟ್ ಸಿಟಿ’...
19-09-25 07:53 pm
ಇನ್ಸ್ಟಾ ಗ್ರಾಂನಲ್ಲಿ ಪ್ರಚೋದನಕಾರಿ ಪೋಸ್ಟ್ ; ಆರೋಪಿ...
19-09-25 04:58 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm