ಬ್ರೇಕಿಂಗ್ ನ್ಯೂಸ್
20-10-24 10:50 pm Mangalore Correspondent ಕರಾವಳಿ
ಮಂಗಳೂರು, ಅ.20: ಅನುದಾನ ರಹಿತ ಶಾಲೆಗಳ ಸಂಘ(ರುಪ್ಸಾ)ದಿಂದ ಉತ್ತಮ ಆಡಳಿತಗಾರ, ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 2024-25ನೇ ಸಾಲಿಗೆ ಉತ್ತಮ ಆಡಳಿತಗಾರ ಪ್ರಶಸ್ತಿಗೆ ಡಾ|ಕೆ.ಸಿ. ನ್ಯಾಕ್, ಸವಣೂರು ಸೀತಾರಾಮ ರೈ ಸೇರಿದಂತೆ ಐವರನ್ನು ಆಯ್ಕೆ ಮಾಡಲಾಗಿದೆ.
ಮಂಗಳೂರು ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಸ್ಕೂಲ್ ಅಧ್ಯಕ್ಷ ಡಾ|ಕೆ.ಸಿ.ನ್ಯಾಕ್, ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ, ಬಂಟ್ವಾಳ ತಾಲೂಕಿನ ವಿಶಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಂಚಾಲಕರಾಗಿದ್ದ ದಿ.ಎಲ್.ಎನ್.ಕುಡೂರು ಉತ್ತಮ ಆಡಳಿತಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂಗಳೂರು ಕಣಚೂರು ಪಬ್ಲಿಕ್ ಸ್ಕೂಲ್ ಚೇರ್ಮ್ಯಾನ್ ಯು.ಕೆ.ಮೋನು ಅವರೂ ಉತ್ತಮ ಆಡಳಿತಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುತ್ತೂರಿನ ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆಯ ಶಿಕ್ಷಕಿ ಕವಿತಾ ಅಡೂರು, ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ, ಕಡಬ ತಾಲೂಕಿನ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸರಿತಾಜನಾರ್ದನ ಆಲಂಕಾರು, ಕಡಬ ತಾಲೂಕು ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕಿ ವಿದ್ಯಾರತ್ನ ಎಚ್. ಹಾಗೂ ಬಂಟ್ವಾಳ ತಾಲೂಕು ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕಿ ಸುಪ್ರಿಯಾ ಡಿ. ಅವರು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅ.21ರಂದು ಬೆಂಗಳೂರಿನ ಜುದ್ದಿ ಅಂತರರಾಷ್ಟ್ರೀಯ ಶಾಲಾ ಆಡಿಟೋರಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
KC Nayak, Savanur Sitarama Rai and five others announced for best administrator award in Mangalore
03-04-26 07:52 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:35 am
HK News Staffer
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm