ಬ್ರೇಕಿಂಗ್ ನ್ಯೂಸ್
20-10-24 10:50 pm Mangalore Correspondent ಕರಾವಳಿ
ಮಂಗಳೂರು, ಅ.20: ಅನುದಾನ ರಹಿತ ಶಾಲೆಗಳ ಸಂಘ(ರುಪ್ಸಾ)ದಿಂದ ಉತ್ತಮ ಆಡಳಿತಗಾರ, ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 2024-25ನೇ ಸಾಲಿಗೆ ಉತ್ತಮ ಆಡಳಿತಗಾರ ಪ್ರಶಸ್ತಿಗೆ ಡಾ|ಕೆ.ಸಿ. ನ್ಯಾಕ್, ಸವಣೂರು ಸೀತಾರಾಮ ರೈ ಸೇರಿದಂತೆ ಐವರನ್ನು ಆಯ್ಕೆ ಮಾಡಲಾಗಿದೆ.
ಮಂಗಳೂರು ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಸ್ಕೂಲ್ ಅಧ್ಯಕ್ಷ ಡಾ|ಕೆ.ಸಿ.ನ್ಯಾಕ್, ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ, ಬಂಟ್ವಾಳ ತಾಲೂಕಿನ ವಿಶಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಂಚಾಲಕರಾಗಿದ್ದ ದಿ.ಎಲ್.ಎನ್.ಕುಡೂರು ಉತ್ತಮ ಆಡಳಿತಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂಗಳೂರು ಕಣಚೂರು ಪಬ್ಲಿಕ್ ಸ್ಕೂಲ್ ಚೇರ್ಮ್ಯಾನ್ ಯು.ಕೆ.ಮೋನು ಅವರೂ ಉತ್ತಮ ಆಡಳಿತಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುತ್ತೂರಿನ ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆಯ ಶಿಕ್ಷಕಿ ಕವಿತಾ ಅಡೂರು, ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ, ಕಡಬ ತಾಲೂಕಿನ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸರಿತಾಜನಾರ್ದನ ಆಲಂಕಾರು, ಕಡಬ ತಾಲೂಕು ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕಿ ವಿದ್ಯಾರತ್ನ ಎಚ್. ಹಾಗೂ ಬಂಟ್ವಾಳ ತಾಲೂಕು ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕಿ ಸುಪ್ರಿಯಾ ಡಿ. ಅವರು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅ.21ರಂದು ಬೆಂಗಳೂರಿನ ಜುದ್ದಿ ಅಂತರರಾಷ್ಟ್ರೀಯ ಶಾಲಾ ಆಡಿಟೋರಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
KC Nayak, Savanur Sitarama Rai and five others announced for best administrator award in Mangalore
20-10-24 03:50 pm
HK News Desk
ಶಿಗ್ಗಾಂವಿಗೆ ಮಾಜಿ ಸಿಎಂ ಬೊಮ್ಮಾಯಿ ಪುತ್ರನಿಗೆ ಟಿಕೆ...
19-10-24 09:15 pm
BJP ticket fruad, Acp Chandan Kumar, Pralhad...
19-10-24 08:16 pm
ಈ ಬಾರಿ 5, 8, 9ನೇ ತರಗತಿ, ಪಿಯು ವಿದ್ಯಾರ್ಥಿಗಳಿಗೆ...
19-10-24 05:46 pm
MUDA, Siddaramaiah: ಮೈಸೂರು ಮುಡಾ ಕಚೇರಿಗೆ ಇಡಿ ದ...
18-10-24 10:57 pm
20-10-24 10:53 pm
HK News Desk
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
Actor Sanjay Dutt Mangalore,Baba Siddique; ಬಾ...
13-10-24 06:13 pm
20-10-24 10:50 pm
Mangalore Correspondent
Nanthoor Accident, Mangalore, Christy crasta:...
20-10-24 09:55 pm
Mangalore Nanthoor Accident, Christy crasta:...
20-10-24 07:49 pm
Mangalore News, White Doves: 14 ವರ್ಷಗಳ ವನವಾಸದ...
19-10-24 05:07 pm
Udupi, scooty Fire: ಪೆಟ್ರೋಲ್ ಪಂಪ್ ಬಳಿಯೇ ಹೊತ್...
19-10-24 02:48 pm
20-10-24 11:47 am
Mangaluru Correspondent
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm
Mangalore cyber fraud, share market, crime: ಅ...
17-10-24 11:03 pm
Bangalore crime, Double Murder, Illecit affai...
17-10-24 08:02 pm