ಬ್ರೇಕಿಂಗ್ ನ್ಯೂಸ್
21-10-24 08:38 pm Mangalore Correspondent ಕರಾವಳಿ
ಮಂಗಳೂರು, ಅ.21: ಕೊಬ್ಬರಿ, ತೆಂಗಿನ ಕಾಯಿಗೆ ಈ ಬಾರಿ ಉತ್ತಮ ದರ ಸಿಗುವ ನಿರೀಕ್ಷೆ ಇದೆ. ದೀಪಾವಳಿ ನಂತರ ಇನ್ನೂ ಬೆಲೆ ಹೆಚ್ಚಲಿದ್ದು ತೆಂಗಿನ ಕಾಯಿ ಕೇಜಿಗೆ 60 ರಿಂದ 70 ರೂಪಾಯಿಗೆ ಏರಲಿದೆ. ಬೆಳೆಗಾರರು ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚು ಬೆಲೆ ಪಡೆಯಲಿದ್ದಾರೆ ಎಂದು ದಕ್ಷಿಣ ಕನ್ನಡ ತೆಂಗು ಉತ್ಪಾದಕ ಮಾರಾಟ ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಎಸ್.ಕೆ ತಿಳಿಸಿದ್ದಾರೆ.
ಈ ಬಾರಿ ಮಳೆ ಹೆಚ್ಚಿದ್ದರಿಂದ ತೆಂಗು ಕೃಷಿ ಇಳುವರಿಗೆ ದೊಡ್ಡ ಪೆಟ್ಟು ಬಿದ್ದಿದೆ. ಹೀಗಾಗಿ ಬೆಳೆಯೂ ಕಡಿಮೆಯಾಗಿದ್ದು ಇದರ ಪರಿಣಾಮ ಖಚಿತವಾಗಿ ಬೆಲೆ ಹೆಚ್ಚಳಕ್ಕೆ ಕಾರಣವಾಗಲಿದೆ. ಈಗಾಗಲೇ ಎಳನೀರಿಗೆ 60 ರೂ.ನಷ್ಟು ದರ ಏರಿದ್ದು ಬೆಳೆಗಾರರಿಂದ 40-50 ರೂ.ಗೆ ಖರೀದಿಯಾಗುತ್ತಿದೆ. ಇದರಿಂದಾಗಿ ಎಳನೀರನ್ನು ಕೂಡ ಹೆಚ್ಚಾಗಿ ರೈತರು ಮಾರಾಟ ಮಾಡುತ್ತಿದ್ದಾರೆ. ಅಧಿಕ ಪೋಷಕಾಂಶ ಇರುವ ಎಳನೀರಿಗೆ ದರ ಏರಿಕೆಯಾಗುತ್ತಿರುವುದು ಮತ್ತು ಎಳನೀರು ಮಾರಾಟಕ್ಕೆ ರೈತರು ಒಲವು ತೋರುತ್ತಿರುವುದು ಮಾರುಕಟ್ಟೆ ದೃಷ್ಟಿಯಿಂದ ಉತ್ತಮ ಲಕ್ಷಣ. ಇದು ತೆಂಗು ಕೃಷಿಯಲ್ಲಿ ಆಗಿರುವ ಉತ್ತಮ ಬೆಳವಣಿಗೆಯೂ ಹೌದು. ತೆಂಗು ಕೂಡ ಪರ್ಯಾಯ ಆಹಾರ ಬೆಳೆಯಾಗುತ್ತಿದ್ದು ಇದೆಲ್ಲದರ ಪರಿಣಾಮ ಕೃಷಿಕರ ಪಾಲಿಗೆ ಲಾಭದಾಯಕ ಆಗಲಿದೆ. ಇದರಿಂದ ತೆಂಗು ಮತ್ತು ಕೊಬ್ಬರಿ ಕೇಜಿಗೆ ಬೆಲೆ ಹೆಚ್ಚುವುದು ಖಚಿತ.
ದೀಪಾವಳಿ ನಂತರ ತೆಂಗಿನಕಾಯಿ ಕೆಜಿಗೆ 60ರಿಂದ 70 ರೂ.ನಷ್ಟು ಆಗುವ ಸಾಧ್ಯತೆಯಿದೆ. ಈಗಲೇ ಸಗಟು ಮಾರುಕಟ್ಟೆಯಲ್ಲಿ 55-60 ರು. ತೆಂಗಿನ ಕಾಯಿ ದರ ಇದೆ. ತೆಂಗು ಉತ್ಪಾದಕ ಸಂಸ್ಥೆಯಿಂದ ಬೆಳೆಗಾರರಿಂದ 40-45 ರೂ.ಗೆ ತೆಂಗಿನ ಕಾಯಿ ಖರೀದಿ ಮಾಡಲಾಗುತ್ತಿದೆ. ಈ ದರ ಖಚಿತವಾಗಿಯೂ ದೀಪಾವಳಿ ಬಳಿಕ ಹೆಚ್ಚಲಿದೆ. ಹೀಗಾಗಿ ತೆಂಗು ಬೆಳೆಗಾರರು ದುಡುಕದೆ ಉತ್ತಮ ಇಳುವರಿ ಬರುವ ವರೆಗೆ ತಾಳ್ಮೆ ವಹಿಸಬೇಕು. ತೆಂಗು ದರ ಏರಿಕೆಯಾದರೆ ಕೃಷಿಕರ ದೃಷ್ಠಿಯಿಂದ ಉತ್ತಮ ಬೆಳವಣಿಗೆ ಎಂದು ಕುಸುಮಾಧರ ಅವರು ಪ್ರಕಟಣೆಯಲ್ಲಿ ರೈತರಿಗೆ ಸಲಹೆ ಮಾಡಿದ್ದಾರೆ.
Coconut price to increase from 60 to 70 rupees per kg says Coconut Producers Association President Kusumadhar in Mangalore.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm