ಬ್ರೇಕಿಂಗ್ ನ್ಯೂಸ್
21-10-24 08:38 pm Mangalore Correspondent ಕರಾವಳಿ
ಮಂಗಳೂರು, ಅ.21: ಕೊಬ್ಬರಿ, ತೆಂಗಿನ ಕಾಯಿಗೆ ಈ ಬಾರಿ ಉತ್ತಮ ದರ ಸಿಗುವ ನಿರೀಕ್ಷೆ ಇದೆ. ದೀಪಾವಳಿ ನಂತರ ಇನ್ನೂ ಬೆಲೆ ಹೆಚ್ಚಲಿದ್ದು ತೆಂಗಿನ ಕಾಯಿ ಕೇಜಿಗೆ 60 ರಿಂದ 70 ರೂಪಾಯಿಗೆ ಏರಲಿದೆ. ಬೆಳೆಗಾರರು ಈ ಬಾರಿ ಹಿಂದೆಂದಿಗಿಂತಲೂ ಹೆಚ್ಚು ಬೆಲೆ ಪಡೆಯಲಿದ್ದಾರೆ ಎಂದು ದಕ್ಷಿಣ ಕನ್ನಡ ತೆಂಗು ಉತ್ಪಾದಕ ಮಾರಾಟ ಸಂಸ್ಥೆಯ ಅಧ್ಯಕ್ಷ ಕುಸುಮಾಧರ ಎಸ್.ಕೆ ತಿಳಿಸಿದ್ದಾರೆ.
ಈ ಬಾರಿ ಮಳೆ ಹೆಚ್ಚಿದ್ದರಿಂದ ತೆಂಗು ಕೃಷಿ ಇಳುವರಿಗೆ ದೊಡ್ಡ ಪೆಟ್ಟು ಬಿದ್ದಿದೆ. ಹೀಗಾಗಿ ಬೆಳೆಯೂ ಕಡಿಮೆಯಾಗಿದ್ದು ಇದರ ಪರಿಣಾಮ ಖಚಿತವಾಗಿ ಬೆಲೆ ಹೆಚ್ಚಳಕ್ಕೆ ಕಾರಣವಾಗಲಿದೆ. ಈಗಾಗಲೇ ಎಳನೀರಿಗೆ 60 ರೂ.ನಷ್ಟು ದರ ಏರಿದ್ದು ಬೆಳೆಗಾರರಿಂದ 40-50 ರೂ.ಗೆ ಖರೀದಿಯಾಗುತ್ತಿದೆ. ಇದರಿಂದಾಗಿ ಎಳನೀರನ್ನು ಕೂಡ ಹೆಚ್ಚಾಗಿ ರೈತರು ಮಾರಾಟ ಮಾಡುತ್ತಿದ್ದಾರೆ. ಅಧಿಕ ಪೋಷಕಾಂಶ ಇರುವ ಎಳನೀರಿಗೆ ದರ ಏರಿಕೆಯಾಗುತ್ತಿರುವುದು ಮತ್ತು ಎಳನೀರು ಮಾರಾಟಕ್ಕೆ ರೈತರು ಒಲವು ತೋರುತ್ತಿರುವುದು ಮಾರುಕಟ್ಟೆ ದೃಷ್ಟಿಯಿಂದ ಉತ್ತಮ ಲಕ್ಷಣ. ಇದು ತೆಂಗು ಕೃಷಿಯಲ್ಲಿ ಆಗಿರುವ ಉತ್ತಮ ಬೆಳವಣಿಗೆಯೂ ಹೌದು. ತೆಂಗು ಕೂಡ ಪರ್ಯಾಯ ಆಹಾರ ಬೆಳೆಯಾಗುತ್ತಿದ್ದು ಇದೆಲ್ಲದರ ಪರಿಣಾಮ ಕೃಷಿಕರ ಪಾಲಿಗೆ ಲಾಭದಾಯಕ ಆಗಲಿದೆ. ಇದರಿಂದ ತೆಂಗು ಮತ್ತು ಕೊಬ್ಬರಿ ಕೇಜಿಗೆ ಬೆಲೆ ಹೆಚ್ಚುವುದು ಖಚಿತ.
ದೀಪಾವಳಿ ನಂತರ ತೆಂಗಿನಕಾಯಿ ಕೆಜಿಗೆ 60ರಿಂದ 70 ರೂ.ನಷ್ಟು ಆಗುವ ಸಾಧ್ಯತೆಯಿದೆ. ಈಗಲೇ ಸಗಟು ಮಾರುಕಟ್ಟೆಯಲ್ಲಿ 55-60 ರು. ತೆಂಗಿನ ಕಾಯಿ ದರ ಇದೆ. ತೆಂಗು ಉತ್ಪಾದಕ ಸಂಸ್ಥೆಯಿಂದ ಬೆಳೆಗಾರರಿಂದ 40-45 ರೂ.ಗೆ ತೆಂಗಿನ ಕಾಯಿ ಖರೀದಿ ಮಾಡಲಾಗುತ್ತಿದೆ. ಈ ದರ ಖಚಿತವಾಗಿಯೂ ದೀಪಾವಳಿ ಬಳಿಕ ಹೆಚ್ಚಲಿದೆ. ಹೀಗಾಗಿ ತೆಂಗು ಬೆಳೆಗಾರರು ದುಡುಕದೆ ಉತ್ತಮ ಇಳುವರಿ ಬರುವ ವರೆಗೆ ತಾಳ್ಮೆ ವಹಿಸಬೇಕು. ತೆಂಗು ದರ ಏರಿಕೆಯಾದರೆ ಕೃಷಿಕರ ದೃಷ್ಠಿಯಿಂದ ಉತ್ತಮ ಬೆಳವಣಿಗೆ ಎಂದು ಕುಸುಮಾಧರ ಅವರು ಪ್ರಕಟಣೆಯಲ್ಲಿ ರೈತರಿಗೆ ಸಲಹೆ ಮಾಡಿದ್ದಾರೆ.
Coconut price to increase from 60 to 70 rupees per kg says Coconut Producers Association President Kusumadhar in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm