ಬ್ರೇಕಿಂಗ್ ನ್ಯೂಸ್
22-10-24 09:44 pm Mangalore Correspondent ಕರಾವಳಿ
ಮಂಗಳೂರು, ಅ.22 : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವಿದ್ಯಾರ್ಥಿ ಯುವಜನರಲ್ಲಿ ತುಳು ಸಾಹಿತ್ಯ ಓದಿನ ಅಭಿರುಚಿ ಮೂಡಿಸುವ ಸಲುವಾಗಿ 'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ಎಂಬ ವಿಶೇಷ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ಓದುವ ಅಭಿಯಾನಕ್ಕೆ ಚಾಲನೆ ನೀಡುವ ಹಾಗೂ ಪ್ರಥಮ ಕಾರ್ಯಕ್ರಮದ ಉದ್ಘಾಟನೆಯು ಅ.25ರಂದು ಬೆಳಿಗ್ಗೆ 10 ಗಂಟೆಗೆ ಉರ್ವಾಸ್ಟೋರ್ ನಲ್ಲಿರುವ ತುಳು ಅಕಾಡೆಮಿಯ ತುಳು ಭವನದ ಗ್ರಂಥಾಲಯದಲ್ಲಿ ನಡೆಯಲಿದೆ.
ಓದುವ ಅಭಿಯಾನಕ್ಕೆ ಹಿರಿಯ ತುಳು ವಿದ್ವಾಂಸ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಶಿವರಾಮ ಶೆಟ್ಟಿ ಅವರು ಚಾಲನೆ ನೀಡಿ ದಿಕ್ಸೂಚಿ ಸಂದೇಶ ನೀಡುವರು. 'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ಅಭಿಯಾನದ ಮೊದಲ ಕಾರ್ಯಕ್ರಮದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ 25 ವಿದ್ಯಾರ್ಥಿಗಳು ಭಾಗವಹಿಸುವರು.
'ಬಲೆ ತುಳು ಓದುಗ' ಕಾರ್ಯಕ್ರಮದ ಬೆಳಗ್ಗಿನ ಉದ್ಘಾಟನೆಯ ಬಳಿಕ ವಿದ್ಯಾರ್ಥಿಗಳು ತಮ್ಮಿಷ್ಟದ ತುಳು ಪುಸ್ತಕವೊಂದನ್ನು ಆಯ್ದುಕೊಂಡು ಗ್ರಂಥಾಲಯದಲ್ಲಿ ಓದುವ ಹಾಗೂ ಚರ್ಚಿಸುವ ಚಟುವಟಿಕೆಯಲ್ಲಿ ಭಾಗಿಯಾಗುವರು. ಸಂಜೆ ಸಮಾರೋಪದ ವೇಳೆಯಲ್ಲಿ ಪ್ರತಿ ವಿದ್ಯಾರ್ಥಿಗಳು ತಾವು ಓದಿದ ಕೃತಿಯ ಬಗ್ಗೆ ದಿಕ್ಸೂಚಿ ಸಂದೇಶ ನೀಡಿದ ವಿದ್ವಾಂಸರ ಮುಂದೆ ಎರಡು ಮೂರು ನಿಮಿಷಗಳ ಅಭಿಪ್ರಾಯವನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ತಿಳಿಸಿದ್ದಾರೆ.
ಅಕಾಡೆಮಿಯ ಗ್ರಂಥಾಲಯದಲ್ಲಿ ತುಳುವಿಗೆ ಸಂಬಂಧಿಸಿದ ತುಳು ಭಾಷೆಯ ಸುಮಾರು 2500 ಕೃತಿಗಳಿವೆ, ಅದೇ ರೀತಿಯಲ್ಲಿ ತುಳುವಿಗೆ ಸಂಬಂಧಿಸಿದ ಕನ್ನಡ ಭಾಷೆಯಲ್ಲಿ ಪ್ರಕಟವಾಗಿರುವ ಸುಮಾರು 2000 ಕೃತಿಗಳು ಲಭ್ಯ ಇದೆ. ತುಳು ಸಾಹಿತ್ಯ, ತುಳು ಭಾಷೆಯ ಚರಿತ್ರೆ, ತುಳು ಸಂಸ್ಕೃತಿ, ತುಳು ಜ್ಞಾನ ಭಂಡಾರದ ಅಗಾಧತೆಯ ಅರಿವನ್ನು ವಿದ್ಯಾರ್ಥಿ ಯುವಜನರಿಗೆ ಮೂಡಿಸಬೇಕೆನ್ನುವ ಹಿನ್ನೆಲೆಯಲ್ಲಿ "ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ" ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಂಘ ಸಂಸ್ಥೆಗಳು ಕೂಡ ಮುಂಚಿತವಾಗಿ ತಿಳಿಸಿ ಈ ಅಭಿಯಾನದಲ್ಲಿ ಭಾಗಿಯಾಗಬಹುದಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ತಿಳಿಸಿದ್ದಾರೆ.
Karnataka Tulu Sahitya Academy has launched a special campaign called 'Academid Onji Dina : Bale Tulu Oduga' to inculcate the taste of reading Tulu literature among the students.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm