ಬ್ರೇಕಿಂಗ್ ನ್ಯೂಸ್
22-10-24 10:26 pm Mangalore Correspondent ಕರಾವಳಿ
ಮಂಗಳೂರು, ಅ.22: ಹೊಸತಾಗಿ ಖರೀದಿಸಿದ ವಾಹನದಲ್ಲಿ ಪದೇ ಪದೇ ಸಮಸ್ಯೆಗಳು ಕಂಡುಬಂದ ಕಾರಣ ಗ್ರಾಹಕರೊಬ್ಬರು ವಾಹನ ಕಂಪನಿಯ ವಿರುದ್ಧ ಗ್ರಾಹಕ ನ್ಯಾಯಾಲಯಕ್ಕೆ ದೂರು ನೀಡಿದ್ದಲ್ಲದೆ, ಪ್ರಕರಣವನ್ನು ಗೆದ್ದು ವಾಹನದ ಬಾಬ್ತು ಹಣವನ್ನು ಬಡ್ಡಿ ಸಮೇತ ಕೊಡಿಸುವಂತೆ ತೀರ್ಪು ಪಡೆದಿದ್ದಾರೆ.
ಅಶೋಕ್ ಲೇಲ್ಯಾಂಡ್ ಕಂಪನಿಯ ಬಡಾ ದೋಸ್ತ್ ವಾಹನವನ್ನು ಪುತ್ತೂರು ತಾಲೂಕಿನ ಶಾಂತಿಗೋಡು ನಿವಾಸಿ ಪದ್ಮನಾಭ ಪ್ರಭು ಎಂಬವರು 2021ರಲ್ಲಿ ಪುತ್ತೂರಿನ ಕಂಪನಿ ಶೋರೂಮಿನಿಂದ ಖರೀದಿಸಿದ್ದರು. ವಾಹನ ಖರೀದಿಸಿದ ಮೊದಲ ದಿನವೇ ಸಮಸ್ಯೆ ಕಂಡುಬಂದಿತ್ತು. ತರಕಾರಿ ಖರೀದಿಗಾಗಿ ಮುಳ್ಳೇರಿಯಾಕ್ಕೆ ಹೋಗಿದ್ದಾಗ ಗೇರ್ ಜಾಮ್ ಆಗಿದ್ದು ರಿಪೇರಿಗೆ ಕರೆದರೆ ಕಂಪನಿ ಮೆಕ್ಯಾನಿಕ್ ಬಂದಿರಲಿಲ್ಲ. ಆನಂತರ, ಮೆಕ್ಯಾನಿಕ್ ಕರೆಸಿ ಶೋರೂಮಿನಲ್ಲಿಯೇ ಕೆಲಸ ಮಾಡಿಸಿದ್ದರು. ಇದರ ಬಳಿಕವೂ ಪದೇ ಪದೇ ಸೈಲೆನ್ಸರ್, ಸೆನ್ಸಾರ್ ಸಮಸ್ಯೆ, ಗೇರ್ ಜಾಮ್, ಎಲ್ ಅಂಡ್ ಟಿ ಸಂಪರ್ಕದಲ್ಲಿ ಸಮಸ್ಯೆ ಕಾಣಿಸಿತ್ತು. ಬದಲಿ ವಾಹನ ಕೊಡುವಂತೆ ಕೇಳಿದರೂ, ಕಂಪನಿಯವರು ಕೊಟ್ಟಿರಲಿಲ್ಲ. ವಾಹನ ರಿಪೇರಿ ಸಂದರ್ಭದಲ್ಲಿಯೂ ಬದಲಿ ಬಿಡಿಭಾಗಗಳನ್ನೂ ಹೊಸತಾಗಿ ಹಾಕದೆ ಕಂಜೂಸ್ ಮಾಡಿದ್ದರು ಎಂದು ಗ್ರಾಹಕ ಪದ್ಮನಾಭ ಪ್ರಭು ಹೇಳುತ್ತಾರೆ.
ಇದರಿಂದ ಬೇಸತ್ತ ಪದ್ಮನಾಭ ಪ್ರಭು ವಕೀಲರ ಮೂಲಕ 2022ರ ಆಗಸ್ಟ್ ತಿಂಗಳಲ್ಲಿ ಮಂಗಳೂರಿನ ಜಿಲ್ಲಾ ಗ್ರಾಹಕ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು. ವಾಹನ ಖರೀದಿಸಿದ ಒಂದು ವರ್ಷದ ಒಳಗೆ 45 ಬಾರಿ ರಿಪೇರಿಗೆ ಇಟ್ಟಿರುವ ವಿಚಾರವನ್ನು ಮುಂದಿಟ್ಟು ಕೋರ್ಟಿನಲ್ಲಿ ಪ್ರಶ್ನೆ ಮಾಡಿದ್ದರು. ಸೆನ್ಸಾರ್ ಸಮಸ್ಯೆ, ಪಿಕ್ ಅಪ್ ಇಲ್ಲದಿರುವುದು, ಗೇರ್ ಜಾಮ್ ಮತ್ತಿತರ ಸಮಸ್ಯೆಗಳನ್ನು ಹೇಳಿ ಕಂಪನಿಯ ನಿರ್ಲಕ್ಷ್ಯ ಧೋರಣೆಯನ್ನು ಪ್ರಶ್ನಿಸಿದ್ದರು.
ದೂರಿನಲ್ಲಿ ವಾಹನ ತಯಾರಿಕಾ ಸಂಸ್ಥೆಯಾದ ಅಶೋಕ ಲೇಲ್ಯಾಂಡ್ ಹಾಗೂ ಡೀಲರ್ ಗಳಾದ ಮಂಗಳೂರಿನ ಕಾಂಚನ ಆಟೋಮೋಟಿವ್ ಸಂಸ್ಥೆ ಮತ್ತು ಅದರ ಪುತ್ತೂರು ಶಾಖೆಗಳನ್ನು ಪ್ರತಿವಾದಿಗಳೆಂದು ಹೆಸರಿಸಲಾಗಿತ್ತು. ದೂರುದಾರರು ಮತ್ತು ಪ್ರತಿವಾದಿಗಳ ಸಾಕ್ಷಿ ವಿಚಾರಣೆ ನಡೆಸಿದ ನ್ಯಾಯಾಲಯ, ಸದ್ರಿ ವಾಹನದಲ್ಲಿ ತಯಾರಿಕಾ ದೋಷ ಇದೆ ಎಂಬ ವಾದವನ್ನು ಎತ್ತಿ ಹಿಡಿದಿದೆ. ಇದರಂತೆ, ಅಶೋಕ ಲೇಲ್ಯಾಂಡ್ ಮತ್ತು ಕಾಂಚನ ಆಟೋಮೋಟಿವ್ ಸಂಸ್ಥೆಗಳು ವಾಹನದ ವೆಚ್ಚ 7.50 ಲಕ್ಷವನ್ನು 2022ರಿಂದ ಈವರೆಗಿನ ಅವಧಿಗೆ ಶೇಕಡಾ 6 ಬಡ್ಡಿದರದಲ್ಲಿ ಗ್ರಾಹಕರಿಗೆ ನೀಡುವಂತೆ ತಿಳಿಸಿದೆ.
ಇದಲ್ಲದೆ, ದೂರುದಾರರಿಗೆ ಆಗಿರುವ ಸೇವಾನ್ಯೂನತೆ, ಮಾನಸಿಕ ಕಿರುಕುಳ ರೂ. 25 ಸಾವಿರ ಹಾಗೂ ವ್ಯಾಜ್ಯ ವೆಚ್ಚವಾಗಿ ರೂ.10 ಸಾವಿರ ನೀಡುವಂತೆ ಆದೇಶ ನೀಡಿದೆ. ದೂರುದಾರರ ಪರವಾಗಿ ಪುತ್ತೂರಿನ ವಕೀಲರಾದ ಹರೀಶ್ ಕುಮಾರ್ ಬಳಕ್ಕ, ದೀಪಕ್ ಬೊಳುವಾರು, ಭುವನೇಶ್ವರಿ ಎಂ., ರಕ್ಷಿತಾ ಬಂಗೇರ ವಾದಿಸಿದ್ದರು.
Mangalore Bada dost ashok leyland van manufacturing defect, consumer court orders for money with intrest. Owner had purchased the van in 2021 and was facing huge problems.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm