ಬ್ರೇಕಿಂಗ್ ನ್ಯೂಸ್
23-10-24 06:35 pm Mangalore Correspondent ಕರಾವಳಿ
ಮಂಗಳೂರು, ಅ.23: ಅಪರಾತ್ರಿಯಲ್ಲಿ ಅಪಘಾತಕ್ಕೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಪೊಲೀಸ್ ಪೇದೆಯೊಬ್ಬರು ತನ್ನ ಸ್ಕೂಟರಿನಲ್ಲಿ ಆಸ್ಪತ್ರೆಗೆ ಒಯ್ದು ಮಾನವೀಯತೆ ಮೆರೆದ ಪ್ರಸಂಗ ಮಂಗಳೂರಿನಲ್ಲಿ ನಡೆದಿದೆ.
ಕದ್ರಿ ಪೊಲೀಸ್ ಠಾಣೆಯಲ್ಲಿ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುತ್ತಿದ್ದ ಮುರ್ಶಿದಾ ಬಾನು ಇಂದು (ಅ.23ರ ಬುಧವಾರ) ನಸುಕಿನ ನಾಲ್ಕು ಗಂಟೆ ವೇಳೆಗೆ ಕರ್ತವ್ಯಕ್ಕೆ ತೆರಳುತ್ತಿದ್ದರು. ಈ ವೇಳೆ, ಕೆಪಿಟಿ ಬಳಿಯ ವ್ಯಾಸನಗರದ ತಿರುವಿನಲ್ಲಿ ರಸ್ತೆ ಬದಿ ನಿಂತಿದ್ದ ಟ್ರಕ್ ಒಂದಕ್ಕೆ ಕೋಳಿ ಸಾಗಾಟದ ಪಿಕಪ್ ವಾಹನ ಡಿಕ್ಕಿಯಾಗಿತ್ತು. ಡಿಕ್ಕಿಯಾದ ರಭಸಕ್ಕೆ ಪಿಕಪ್ ಮುಂಭಾಗ ನಜ್ಜುಗುಜ್ಜಾಗಿದ್ದು, ವಾಹನದ ಕ್ಲೀನರ್ ತೀವ್ರ ಗಾಯಗೊಂಡಿದ್ದ.

ಕೈ, ಕಾಲು ಮತ್ತು ಮುಖಕ್ಕೆ ಜಜ್ಜಿದ ಗಾಯವಾಗಿದ್ದರಿಂದ ರಕ್ತ ಒಸರುತ್ತಿತ್ತು. ಚಾಲಕನಿಗೂ ಸ್ವಲ್ಪ ಏಟಾಗಿದ್ದರೂ, ಏನೂ ಮಾಡಲಾಗದೆ ಕೈಚೆಲ್ಲಿ ನಿಂತಿದ್ದ. ಈ ವೇಳೆ, ಮಹಿಳಾ ಪೇದೆ ಮುರ್ಶಿದಾ ಬಾನು ತನ್ನ ಸ್ಕೂಟರಿನಲ್ಲಿ ಠಾಣೆಯತ್ತ ತೆರಳುತ್ತಿದ್ದರು. ಚಾಲಕನ ಬೊಬ್ಬೆ ಕೇಳಿ ಹತ್ತಿರ ಹೋಗಿದ್ದು, ರಕ್ತದಲ್ಲಿ ಬಿದ್ದುಕೊಂಡಿದ್ದ ಕ್ಲೀನರ್ ಯುವಕನನ್ನು ಎತ್ತಿ ಎಜೆ ಆಸ್ಪತ್ರೆಗೆ ಒಯ್ದಿದ್ದಾರೆ. ನಿಲ್ಲುವ ಸ್ಥಿತಿಯಲ್ಲಿ ಇಲ್ಲದಿದ್ದರೂ, ಆಟೋ ಸಿಗದ ಕಾರಣ ತನ್ನ ಸ್ಕೂಟರಿನಲ್ಲೇ ಒಂದು ಕೈಯಲ್ಲಿ ಆತನನ್ನು ಹಿಡಿದುಕೊಂಡು ಆಸ್ಪತ್ರೆಗೆ ತಲುಪಿಸಿದ್ದಾರೆ.
ಅಲ್ಲಿ ಉರ್ವಾ ಠಾಣೆಯ ಪಿಸಿಆರ್ ಪೊಲೀಸರು ಇದ್ದುದರಿಂದ ಅವರ ಸಹಾಯದಲ್ಲಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆನಂತರ, ಕದ್ರಿ ಟ್ರಾಫಿಕ್ ಪೊಲೀಸರಿಗೆ ವಿಷಯ ತಿಳಿಸಿ ಅಪಘಾತ ಸ್ಥಳಕ್ಕೆ ಬರಹೇಳಿದ್ದಾರೆ. ರಸ್ತೆ ಬದಿಯಲ್ಲಿದ್ದ ಪಿಕಪ್ ವಾಹನ ಮತ್ತು ಚಾಲಕನಿಗೆ ಬದಲಿ ವ್ಯವಸ್ಥೆ ಮಾಡಿಸಿದ್ದಾರೆ. ಪಿಕಪ್ ವಾಹನ ಕೇರಳ ನೋಂದಣಿ ಹೊಂದಿತ್ತು. ಅವರ ಹೆಸರೇನೆಂದು ತಿಳಿದಿಲ್ಲ ಎಂದು ಮುರ್ಶಿದಾ ಬಾನು ಹೇಳಿದ್ದಾರೆ. ಮುರ್ಶಿದಾ ಅವರು ಕದ್ರಿ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
A female police constable demonstrated commendable promptness by transporting a seriously injured individual to the hospital on her scooter following a road accident in the city this morning. The incident occurred around 3:40 AM near KPT, involving a pickup vehicle and a container truck.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm