Mangalore Accident, Auto: ಶಾಲಾ ಮಕ್ಕಳ ಆಟೋ ರಿಕ್ಷಾಕ್ಕೆ ಪಿಕಪ್‌ ವಾಹನ ಡಿಕ್ಕಿ! ದೇರಳಕಟ್ಟೆ ಸರಕಾರಿ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ದಾರುಣ ಸಾವು 

24-10-24 01:13 pm       Mangalore Correspondent   ಕರಾವಳಿ

ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ರಿಕ್ಷಾ ಮತ್ತು ಪಿಕಪ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 11 ರ ಹರೆಯದ ವಿದ್ಯಾರ್ಥಿನಿಯೋರ್ವಳು ದಾರುಣ ಮೃತಪಟ್ಟ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಉಳ್ಳಾಲ, ಅ.24: ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ರಿಕ್ಷಾ ಮತ್ತು ಪಿಕಪ್‌ ನಡುವೆ ಸಂಭವಿಸಿದ ಅಪಘಾತದಲ್ಲಿ 11 ರ ಹರೆಯದ ವಿದ್ಯಾರ್ಥಿನಿಯೋರ್ವಳು ದಾರುಣ ಮೃತಪಟ್ಟ ಘಟನೆ ಬೆಳ್ಮ ಗ್ರಾಮದ ಕಲ್ಲಪಾದೆ ಎಂಬಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

ಬಡಕಬೈಲು ಮಹಮ್ಮದ್‌ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11) ಮೃತ ವಿದ್ಯಾರ್ಥಿನಿ. ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಸರಕಾರಿ ಶಾಲೆಗೆ ಮಕ್ಕಳನ್ನು ಕರೆತರುತ್ತಿದ್ದ ಆಟೋ ರಿಕ್ಷಾ ಕಲ್ಲಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ, ಅಜಾಗರೂಕತೆಯಿಂದ ಬಂದ ಪಿಕಪ್‌ ವಾಹನವು ಢಿಕ್ಕಿ ಹೊಡೆದಿದೆ. ಪರಿಣಾಮ ಆಯಿಷಾ ಗಂಭೀರ ಗಾಯಗೊಂಡು, ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ. ರಿಕ್ಷಾದಲ್ಲಿದ್ದ ಇತರೆ ನಾಲ್ವರು ವಿದ್ಯಾರ್ಥಿಗಳಿಗೂ ಸಣ್ಣಪುಟ್ಟ ಗಾಯಗಳಾಗಿದೆ. ಘಟನೆಯಿಂದ ರಿಕ್ಷಾ ಚಾಲಕನೂ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ವಿದ್ಯಾರ್ಥಿನಿ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ  ದೇರಳಕಟ್ಟೆ ನೇತಾಜಿ ಸುಭಾಷ್‌ ಚಂದ್ರ ಬೋಸ್‌  ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರಜೆ ಸಾರಲಾಗಿದೆ.

Mangalore 11 year old girl dies of accident after van hits school auto at Belma in ullal.  The deceased has been identified as Ayesha Vayiba.