ಬ್ರೇಕಿಂಗ್ ನ್ಯೂಸ್
25-10-24 01:26 pm Mangalore Correspondent ಕರಾವಳಿ
ಮಂಗಳೂರು, ಅ.25: ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ ಎಂದು ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣದಲ್ಲಿ ಸಂತ್ರಸ್ತ ಯುವತಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಕ್ಕೂ ಮುನ್ನ ಮುಸ್ಲಿಂ ಯುವಕನಿಂದ ಅತ್ಯಾಚಾರಕ್ಕೀಡಾಗುವ ಬದಲು ನಾನೇ ಸಾಯುತ್ತೇನೆಂದು ಆಕೆ ಡೆತ್ ನೋಟ್ ಬರೆದಿಟ್ಟಿದ್ದಾಳೆ.
ಸುರತ್ಕಲ್ ಇಡ್ಯಾ ಬಳಿಯ ಯುವತಿಯ ಫೇಸ್ಬುಕ್ ಹ್ಯಾಕ್ ಮಾಡಿ, ಅಶ್ಲೀಲ ಸಂದೇಶ ಕಳುಹಿಸಿದ್ದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಫೇಸ್ಬುಕ್ ಹ್ಯಾಕ್ ಮಾಡಿದ್ದಲ್ಲದೆ, ಆಕೆಯ ಸೋದರನಿಗೆ ಮುಸ್ಲಿಂ ಯುವಕನ ಹೆಸರಿನಲ್ಲಿ ಮೆಸೆಂಜರ್ ಮೂಲಕ ಬೆದರಿಕೆ ಸಂದೇಶ ಕಳಿಸಲಾಗಿತ್ತು. ನಿನ್ನ ಸೋದರಿಯನ್ನು ನನ್ನ ಜೊತೆಗೆ ಕಳಿಸು, ನನ್ನೊಂದಿಗೆ ಸಹಕರಿಸಲು ಹೇಳು. ಇಲ್ಲಾಂದ್ರೆ ನಿನ್ನನ್ನು 24 ತುಂಡು ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ.
ಈ ಬಗ್ಗೆ ಪೊಲೀಸರು ಇಡ್ಯಾ ಪರಿಸರದ ಹಲವು ಯುವಕರನ್ನು ವಿಚಾರಣೆ ನಡೆಸಿದ್ದು ಮೊಬೈಲ್ ಪರಿಶೀಲನೆ ನಡೆಸಿದ್ದರು. ನೂರ್ಜಹಾನ್ ಎಂಬ ಯುವಕನನ್ನು ಠಾಣೆಗೆ ಕರೆದು ಮೊಬೈಲ್ ಪರಿಶೀಲನೆ ನಡೆಸಿ ಸರಿಯಾದ ಸಾಕ್ಷ್ಯ ಸಿಗದ ಕಾರಣ ಹಿಂದಕ್ಕೆ ಕಳುಹಿಸಿದ್ದರು. ಆದರೆ ಆನಂತರವೂ ಇದೇ ರೀತಿಯ ಬೆದರಿಕೆ ಸಂದೇಶ ಬರುತ್ತಿದ್ದರಿಂದ ಯುವತಿ ಮಾನಸಿಕ ಕಿರುಕುಳಕ್ಕೆ ಒಳಗಾಗಿ ಆತ್ಮಹತ್ಯೆ ಯತ್ನ ಮಾಡಿದ್ದಾಳೆ ಎನ್ನಲಾಗುತ್ತಿದೆ.
“ಒಬ್ಬ ಮುಸ್ಲಿಮನ ಕೈಯ್ಯಲ್ಲಿ ಅತ್ಯಾಚಾರವಾಗಿ ಸಾಯುವ ಬದಲು ಈಗಲೇ ಸಾಯ್ತೇನೆ. ಪೊಲೀಸರಿಗೆ ದೂರು ಕೊಟ್ಟರೂ ಯಾವುದೇ ಪ್ರಯೋಜನ ಆಗಿಲ್ಲ. ಶಾರೀಕ್ ಹಾಗೂ ನೂರ್ಜಾನ್ ಇಬ್ಬರನ್ನೂ ಬಿಡಬಾರದು" ಎಂದು ಡೆತ್ ನೋಟ್ ನಲ್ಲಿ ಹೆಸರು ಉಲ್ಲೇಖಿಸಿ ಆತ್ಮಹತ್ಯೆ ಯತ್ನಿಸಿದ್ದಾಳೆ ಎಂದು ತಿಳಿದುಬಂದಿದೆ. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Mangalore Surathkal, girl attempts to suicide after threat on facebook messanger. She received a threat stating that she will cut into 24 pieces if she doesn't coperate to love muslim youth.
19-09-25 02:16 pm
Bangalore Correspondent
ಮೋಸದಿಂದಲೇ ಕಣ್ರೀ ಬಿಜೆಪಿ ಚುನಾವಣೆ ಗೆದ್ದಿದೆ! ರಾಹು...
19-09-25 09:45 am
ಬೆಂಗಳೂರು ಗಬ್ಬೆದ್ದು ನಾರುತ್ತಿದೆ, ರಾಜಧಾನಿ ಈಗ ಗುಂ...
19-09-25 09:42 am
Traffic Violation, Bangalore: ರಾಜ್ಯದಲ್ಲಿ ಸಂಚಾ...
18-09-25 05:34 pm
Ksrtc Bus, Driver, Heart Attack: ಬಸ್ ಓಡಿಸುವಾಗ...
17-09-25 06:02 pm
19-09-25 05:45 pm
HK News Desk
Yasin Malik: ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಭೇ...
19-09-25 02:24 pm
ಕೇಂದ್ರೀಕೃತ ಸಾಫ್ಟ್ವೇರ್ ಬಳಸಿ ಬೂತ್ಗಳಿಂದಲೇ ಮತದಾ...
18-09-25 08:14 pm
ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷ...
16-09-25 10:11 pm
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
19-09-25 04:58 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಒಂದು ಅಸ್ಥಿಪಂಜರದ ಜೊತೆಗಿ...
18-09-25 11:11 pm
Mangalore, UT Khader: ಹಿಂದುಳಿದ ವರ್ಗಗಳ ಆಯೋಗ ಸ್...
18-09-25 09:12 pm
ಮಾಜಿ ಸೈನಿಕರಿಗೆ ಸರ್ಕಾರಿ ಸವಲತ್ತು ನೀಡದೆ ನಿರ್ಲಕ್ಷ...
18-09-25 09:09 pm
Banglegudde, Dharmasthala, SIT: ಬಂಗ್ಲೆಗುಡ್ಡೆ...
18-09-25 07:40 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm