ಬ್ರೇಕಿಂಗ್ ನ್ಯೂಸ್
25-10-24 01:26 pm Mangalore Correspondent ಕರಾವಳಿ
ಮಂಗಳೂರು, ಅ.25: ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ ಎಂದು ಬೆದರಿಕೆ ಸಂದೇಶ ಕಳುಹಿಸಿದ್ದ ಪ್ರಕರಣದಲ್ಲಿ ಸಂತ್ರಸ್ತ ಯುವತಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದಕ್ಕೂ ಮುನ್ನ ಮುಸ್ಲಿಂ ಯುವಕನಿಂದ ಅತ್ಯಾಚಾರಕ್ಕೀಡಾಗುವ ಬದಲು ನಾನೇ ಸಾಯುತ್ತೇನೆಂದು ಆಕೆ ಡೆತ್ ನೋಟ್ ಬರೆದಿಟ್ಟಿದ್ದಾಳೆ.
ಸುರತ್ಕಲ್ ಇಡ್ಯಾ ಬಳಿಯ ಯುವತಿಯ ಫೇಸ್ಬುಕ್ ಹ್ಯಾಕ್ ಮಾಡಿ, ಅಶ್ಲೀಲ ಸಂದೇಶ ಕಳುಹಿಸಿದ್ದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಫೇಸ್ಬುಕ್ ಹ್ಯಾಕ್ ಮಾಡಿದ್ದಲ್ಲದೆ, ಆಕೆಯ ಸೋದರನಿಗೆ ಮುಸ್ಲಿಂ ಯುವಕನ ಹೆಸರಿನಲ್ಲಿ ಮೆಸೆಂಜರ್ ಮೂಲಕ ಬೆದರಿಕೆ ಸಂದೇಶ ಕಳಿಸಲಾಗಿತ್ತು. ನಿನ್ನ ಸೋದರಿಯನ್ನು ನನ್ನ ಜೊತೆಗೆ ಕಳಿಸು, ನನ್ನೊಂದಿಗೆ ಸಹಕರಿಸಲು ಹೇಳು. ಇಲ್ಲಾಂದ್ರೆ ನಿನ್ನನ್ನು 24 ತುಂಡು ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ.
ಈ ಬಗ್ಗೆ ಪೊಲೀಸರು ಇಡ್ಯಾ ಪರಿಸರದ ಹಲವು ಯುವಕರನ್ನು ವಿಚಾರಣೆ ನಡೆಸಿದ್ದು ಮೊಬೈಲ್ ಪರಿಶೀಲನೆ ನಡೆಸಿದ್ದರು. ನೂರ್ಜಹಾನ್ ಎಂಬ ಯುವಕನನ್ನು ಠಾಣೆಗೆ ಕರೆದು ಮೊಬೈಲ್ ಪರಿಶೀಲನೆ ನಡೆಸಿ ಸರಿಯಾದ ಸಾಕ್ಷ್ಯ ಸಿಗದ ಕಾರಣ ಹಿಂದಕ್ಕೆ ಕಳುಹಿಸಿದ್ದರು. ಆದರೆ ಆನಂತರವೂ ಇದೇ ರೀತಿಯ ಬೆದರಿಕೆ ಸಂದೇಶ ಬರುತ್ತಿದ್ದರಿಂದ ಯುವತಿ ಮಾನಸಿಕ ಕಿರುಕುಳಕ್ಕೆ ಒಳಗಾಗಿ ಆತ್ಮಹತ್ಯೆ ಯತ್ನ ಮಾಡಿದ್ದಾಳೆ ಎನ್ನಲಾಗುತ್ತಿದೆ.
“ಒಬ್ಬ ಮುಸ್ಲಿಮನ ಕೈಯ್ಯಲ್ಲಿ ಅತ್ಯಾಚಾರವಾಗಿ ಸಾಯುವ ಬದಲು ಈಗಲೇ ಸಾಯ್ತೇನೆ. ಪೊಲೀಸರಿಗೆ ದೂರು ಕೊಟ್ಟರೂ ಯಾವುದೇ ಪ್ರಯೋಜನ ಆಗಿಲ್ಲ. ಶಾರೀಕ್ ಹಾಗೂ ನೂರ್ಜಾನ್ ಇಬ್ಬರನ್ನೂ ಬಿಡಬಾರದು" ಎಂದು ಡೆತ್ ನೋಟ್ ನಲ್ಲಿ ಹೆಸರು ಉಲ್ಲೇಖಿಸಿ ಆತ್ಮಹತ್ಯೆ ಯತ್ನಿಸಿದ್ದಾಳೆ ಎಂದು ತಿಳಿದುಬಂದಿದೆ. ಆಕೆಯನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Mangalore Surathkal, girl attempts to suicide after threat on facebook messanger. She received a threat stating that she will cut into 24 pieces if she doesn't coperate to love muslim youth.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm