ಬ್ರೇಕಿಂಗ್ ನ್ಯೂಸ್
26-10-24 02:04 pm Mangalore Correspondent ಕರಾವಳಿ
ಮಂಗಳೂರು, ಅ.26 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಸಲಹಾ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರು ಇದ್ದಾರೆ. ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ ಕೂಡ ಒಬ್ಬರು.

ರಕ್ಷಣಾ ಸಚಿವಾಲಯದ ಈ ಸಲಹಾ ಸಮಿತಿಯು ಸರ್ಕಾರದ ರಕ್ಷಣಾ ನೀತಿಗಳು, ವಿವಿಧ ಯೋಜನೆ-ಕಾರ್ಯಕ್ರಮಗಳ ಅನುಷ್ಠಾನ ವಿಧಾನ ಹಾಗೂ ದೇಶದ ರಕ್ಷಣೆಗೆ ಸಂಬಂಧಿಸಿದ ವಿಚಾರಗಳ ಕುರಿತಂತೆ ಆಗಾಗ ಸಭೆ ನಡೆಸಿ ಸೂಕ್ತ ಸಲಹೆ ನೀಡಲಿದೆ. ಒಟ್ಟಾರೆ ನಮ್ಮ ರಾಷ್ಟ್ರದ ಭದ್ರತೆಯನ್ನು ಬಲಪಡಿಸುವ ರಕ್ಷಣಾ ನೀತಿಗಳ ರಚನೆ ಮತ್ತು ಅನುಷ್ಠಾನಕ್ಕೆ ಮಾರ್ಗದರ್ಶನ ಕೊಡಲಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ "ನಮ್ಮ ರಾಷ್ಟ್ರ ಮತ್ತು ರಕ್ಷಣಾ ಕ್ಷೇತ್ರವು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಸ್ವಾವಲಂಬಿಯಾಗುವತ್ತ ದಾಪುಗಾಲು ಹಾಕುತ್ತಿರುವ ಸಮಯದಲ್ಲಿ ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯನಾಗಿ ನೇಮಕಗೊಂಡಿರುವುದು ನನಗೆ ಗೌರವದ ವಿಚಾರವಾಗಿದೆ. ಒಬ್ಬ ಯೋಧನಾಗಿ, ಸಂಸತ್ತಿನ ಸದಸ್ಯನಾಗಿ ದೇಶದ ರಕ್ಷಣಾ ಕ್ಷೇತ್ರಕ್ಕೆ ಸೇವೆ ಸಲ್ಲಿಸಲು ಈ ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಸುಯೋಗ" ಎಂದು ಹೇಳಿದ್ದಾರೆ.
Mangalore MP Brijesh Chowta appointed as member of the Consultative Committee for the Ministry of Defence.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
15-05-26 08:54 am
HK News Staffer
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
14-05-26 10:48 pm
HK News Staffer
ರಿಯಲ್ ಎಸ್ಟೇಟ್ ಉದ್ಯಮಿ, ‘ಲ್ಯಾನ್ಸಿ ಕನ್ಸ್ಟ್ರಕ್ಷನ...
14-05-26 05:39 pm
ಮಂಗಳೂರಿನಲ್ಲೂ "ಲಾಕ್ಡ್ ಹೌಸ್ ಬೀಟ್ ಸಿಸ್ಟಮ್" ಜಾರಿ...
13-05-26 11:02 pm
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm