ಬ್ರೇಕಿಂಗ್ ನ್ಯೂಸ್
26-10-24 02:04 pm Mangalore Correspondent ಕರಾವಳಿ
ಮಂಗಳೂರು, ಅ.26 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಸಲಹಾ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರು ಇದ್ದಾರೆ. ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ ಕೂಡ ಒಬ್ಬರು.

ರಕ್ಷಣಾ ಸಚಿವಾಲಯದ ಈ ಸಲಹಾ ಸಮಿತಿಯು ಸರ್ಕಾರದ ರಕ್ಷಣಾ ನೀತಿಗಳು, ವಿವಿಧ ಯೋಜನೆ-ಕಾರ್ಯಕ್ರಮಗಳ ಅನುಷ್ಠಾನ ವಿಧಾನ ಹಾಗೂ ದೇಶದ ರಕ್ಷಣೆಗೆ ಸಂಬಂಧಿಸಿದ ವಿಚಾರಗಳ ಕುರಿತಂತೆ ಆಗಾಗ ಸಭೆ ನಡೆಸಿ ಸೂಕ್ತ ಸಲಹೆ ನೀಡಲಿದೆ. ಒಟ್ಟಾರೆ ನಮ್ಮ ರಾಷ್ಟ್ರದ ಭದ್ರತೆಯನ್ನು ಬಲಪಡಿಸುವ ರಕ್ಷಣಾ ನೀತಿಗಳ ರಚನೆ ಮತ್ತು ಅನುಷ್ಠಾನಕ್ಕೆ ಮಾರ್ಗದರ್ಶನ ಕೊಡಲಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ "ನಮ್ಮ ರಾಷ್ಟ್ರ ಮತ್ತು ರಕ್ಷಣಾ ಕ್ಷೇತ್ರವು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಸ್ವಾವಲಂಬಿಯಾಗುವತ್ತ ದಾಪುಗಾಲು ಹಾಕುತ್ತಿರುವ ಸಮಯದಲ್ಲಿ ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯನಾಗಿ ನೇಮಕಗೊಂಡಿರುವುದು ನನಗೆ ಗೌರವದ ವಿಚಾರವಾಗಿದೆ. ಒಬ್ಬ ಯೋಧನಾಗಿ, ಸಂಸತ್ತಿನ ಸದಸ್ಯನಾಗಿ ದೇಶದ ರಕ್ಷಣಾ ಕ್ಷೇತ್ರಕ್ಕೆ ಸೇವೆ ಸಲ್ಲಿಸಲು ಈ ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಸುಯೋಗ" ಎಂದು ಹೇಳಿದ್ದಾರೆ.
Mangalore MP Brijesh Chowta appointed as member of the Consultative Committee for the Ministry of Defence.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm